<p><strong>ಬೆಂಗಳೂರು: </strong>ಸಿಇಟಿ ಪರೀಕ್ಷೆಯನ್ನು ಆನ್ಲೈನ್ ಮೂಲಕ ನಡೆಸುವ ಮತ್ತು ಆಧಾರ್ ಆಧರಿತ ಡಿಜಿಟಲ್ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರಗಳ ಆನ್ಲೈನ್ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರದ ಬಜೆಟ್ ಭಾಷಣದಲ್ಲಿ ಹೇಳಿದರು.</p>.<p><a href="www.prajavani.net/stories/stateregional/rte-education-613102.html" target="_blank"><span style="color:#B22222;">ಇದನ್ನೂ ಓದಿ:</span>ಸರ್ಕಾರಿ ಶಾಲೆ ಇದ್ದರೆ ಖಾಸಗಿ ಶಾಲೆ ಪ್ರವೇಶ ಇಲ್ಲ</a></p>.<p>ಆನ್ಲೈನ್ ಸಿಇಟಿ ಪರೀಕ್ಷೆ ಕುರಿತು ಭಾಷಣದಲ್ಲಿ ಹೆಚ್ಚು ವಿವರ ಇರಲಿಲ್ಲ. ಆದರೆಆಧಾರ್ ಆಧರಿತ ಅಂಕಪಟ್ಟಿ ವಿತರಣೆಗೆ ₹ 2 ಕೋಟಿ ಅನುದಾನ ಮೀಸಲಿಡುವುದಾಗಿ ಘೋಷಿಸಿದರು. ಬೆಳಗಾವಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ.ಯನ್ನು ಮರುವಿಂಗಡಿಸಿ, ಹಾಸನದಲ್ಲಿ ಹೊಸ ತಾಂತ್ರಿಕ ವಿ.ವಿ. ಸ್ಥಾಪಿಸಲಾಗುವುದು ಎಂದು ಹೇಳಿದರು.</p>.<p>ರಾಜ್ಯದ ಎಲ್ಲ ಹೋಬಳಿ ಕೇಂದ್ರಗಳಲ್ಲಿಯೂ ಪೂರ್ವ ಪ್ರಾಥಮಿಕ ತರಗತಿಗಳಿಂದ 12ನೇ ತರಗವತಿಯವರೆಗೆ ಒಂದೇಸೂರಿನಡಿ ಶಿಕ್ಷಣ ಒದಗಿಸುವ ಒಂದು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪಿಸಲಾಗುವುದು. ಇದಕ್ಕೆ ಕೇಂದ್ರೀಯ ವಿದ್ಯಾಲಯ ಮಾದರಿ ಎಂಬುದು ಈ ಬಜೆಟ್ನಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಮುಖ ಘೋಷಣೆಯಾಗಿದೆ.</p>.<p>ಶಿಕ್ಷಣಕ್ಕೆ ಸಂಬಂಧಿಸಿದಂತೆ ಬಜೆಟ್ ಭಾಷಣದಲ್ಲಿ ಪ್ರಸ್ತಾವವಾದ ಮುಖ್ಯ ಅಂಶಗಳು ಇಂತಿವೆ...</p>.<p>* ಸುಭದ್ರ ಶಾಲೆ ಯೋಜನೆಯಡಿ ರಾಜ್ಯದ 6825 ಗ್ರಾಮೀಣ ಶಾಲೆಗಳಿಗೆ ನರೇಗಾ ಯೋಜನೆಯಡಿ ₹90 ಕೋಟಿ ವೆಚ್ಚದಲ್ಲಿ ಕಾಂಪೌಂಡ್.</p>.<p>* ಕ್ಷೀರಭಾಗ್ಯ ಯೋಜನೆಯಡಿ ಹಾಲು ನೀಡಲು ಶಾಲಾ ಮಕ್ಕಳಿಗೆ ₹638 ಕೋಟಿ ಮತ್ತು ಅಂಗನವಾಡಿ ಮಕ್ಕಳಿಗೆ ₹405 ಕೋಟಿ ಮೀಸಲು.</p>.<p>* 1500 ಹೊಸ ಶಾಲಾ ಕೊಠಡಿ, 5000 ಶಾಲಾ ಕೊಠಡಿಗಳ ಉನ್ನತೀಕರಣ, 1000 ಶಾಲೆಗಳಿಗೆ ಕಲಿಕಾ ಉಪಕರಣ ಹಾಗೂ ಶಾಲಾ ಕಟ್ಟಡಗಳ ನಿರ್ವಹಣೆಗೆಎಸ್ಟೇಟ್ ಅಧಿಕಾರಿ ನೇಮಕ.</p>.<p>* ‘ಗುರುಚೇತನ’ ಕಾರ್ಯಕ್ರಮದಡಿ 1 ಲಕ್ಷ ಶಿಕ್ಷಕರಿಗೆ 10 ದಿನಗಳ ತರಬೇತಿ.ಟೀಚರ್–ಮೆಂಟರ್ ಕಾರ್ಯಕ್ರಮದ ಮೂಲಕ ಶಿಕ್ಷಕರಲ್ಲಿ ಅರಿವು ಮೂಡಿಸಲು ಕ್ರಮ.</p>.<p>* ಆರ್ಟಿಇ ಕಾಯ್ದೆಯಡಿ ರಚಿಸಲಾಗಿರುವ ಮೇಲುಸ್ತುವಾರಿ ಸಮಿತಿಗಳಿಗೆ ಹೆಚ್ಚಿನ ಹೊಣೆಗಾರಿಕೆ. ಪ್ರತಿ ಶಿಕ್ಷಣ ವಲಯದಲ್ಲಿ ಶಾಲೆಗಳ ರಿಪೋರ್ಟ್ ಕಾರ್ಡ್ ತಯಾರಿ, ಶಿಕ್ಷಕ–ಪಾಲಕ ಸಭೆಯ ಚರ್ಚೆಯ ಅನ್ವಯ ಶಾಲೆಗಳ ಗುಣಮಟ್ಟ ಹೆಚ್ಚಳಕ್ಕೆ ಕ್ರಮ.</p>.<p>* ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಕಲಬುರ್ಗಿ ವಿಭಾಗಗಳಲ್ಲಿ ಆಲೂರು ವೆಂಕಟರಾವ್ ಹೆಸರಿನಲ್ಲಿ ₹2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಭಾಷಾ ಕೌಶಲ ತರಬೇತಿ ಕೇಂದ್ರ ಸ್ಥಾಪನೆ. ಭಾಷಾ ವಿಷಯಗಳಲ್ಲಿ ಸರ್ಕಾರಿ ಶಾಲಾ ಶಿಕ್ಷಕರಿಗೆ ನಿರಂತರ ತರಬೇತಿ ನೀಡಲು ಕ್ರಮ.</p>.<p>* ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ‘ಸ್ಪರ್ಧಾ ಕಲಿ’ ಯೋಜನೆ. ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ₹1.5 ಕೋಟಿ ಅನುದಾನ.</p>.<p>* ಎಸ್ಎಸ್ಎಲ್ಸಿ ಮೌಲ್ಯಮಾಪನ ಕೇಂದ್ರಗಳ ಡಿಜಿಟಲೀಕರಣಕ್ಕೆ ₹1 ಕೋಟಿ ಅನುದಾನ. ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ತರಬೇತಿಗೆ ₹2 ಕೋಟಿ ಅನುದಾನ.</p>.<p><strong>ಉನ್ನತ ಶಿಕ್ಷಣ</strong></p>.<p>* ಬೆಂಗಳೂರು ಕೇಂದ್ರ ವಿವಿಯಲ್ಲಿ ಹೊಸ ಪೀಳಿಗೆ ಉನ್ನತ ಶಿಕ್ಷಣ (Next Generation Learning<br />Initiative) ಕಾರ್ಯಕ್ರಮದ ಮೂಲಕ ಹೊಸ ಕಲಿಕಾ ವಿಧಾನಗಳ ಅಳವಡಿಕೆ. ಮುಖ್ಯಮಂತ್ರಿ ನೇತೃತ್ವದಲ್ಲಿ ಸಮಿತಿ.</p>.<p>* ಆನ್ಲೈನ್ಸಿಇಟಿ ಪರೀಕ್ಷೆಗೆ ಕ್ರಮ.ಆಧಾರ್ ಆಧರಿತ ಡಿಜಿಟಲ್ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರಗಳ ಆನ್ಲೈನ್ ವಿತರಣೆ, ದೃಢೀಕರಣ. ₹2 ಕೋಟಿ ಅನುದಾನ.</p>.<p>* ಹಾಸನದಲ್ಲಿ ಹೊಸ ತಾಂತ್ರಿಕ ವಿವಿ. ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮರುವಿಂಗಡನೆ. ಎಲ್ಲ ಪ್ರಥಮ ದರ್ಜೆ ಕಾಲೇಜು ಮತ್ತು ವಿವಿಗಳಲ್ಲಿ ಉದ್ಯೋಗ ಆಧರಿತ ಶಿಕ್ಷಣ ನೀಡಲು ತರಬೇತಿ ಕೇಂದ್ರ. ಅಧ್ಯಾಪಕರಿಗೆ ಅಗತ್ಯ ಬೋಧನ ತರಬೇತಿ.</p>.<p>* 7ನೇ ಕೇಂದ್ರ ವೇತನ ಆಯೋಗದ ಶಿಫಾರಸ್ಸುಗಳ ಪ್ರಕಾರ ಸರ್ಕಾರಿ/ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳು, ವಿವಿಗಳ ಬೋಧಕ ಮತ್ತು ತತ್ಸಮಾನ ವೃಂದಗಳ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ.</p>.<p>* ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ಗಳಲ್ಲಿ ಪ್ರಯೋಗಾಲಯ/ಕಾರ್ಯಾಲಯ ಸೌಲಭ್ಯ ಕಲ್ಪಿಸಲು ₹10 ಕೋಟಿ.</p>.<p><strong>ಮಹಿಳಾ ಮತ್ತು ಮಕ್ಕಳ ಕಲ್ಯಾಣ</strong></p>.<p>* ಅಂಗನವಾಡಿ ಕಾರ್ಯಕರ್ತೆಯರಿಗೆ ₹500 ಹಾಗೂ ಸಹಾಯಕರಿಗೆ ₹250 ಗೌರವಧನ ಹೆಚ್ಚಳ.</p>.<p>* 1000 ಅಂಗನವಾಡಿ ಕಟ್ಟಡಗಳ ದುರಸ್ತಿ ಕಾಮಗಾರಿಗೆ ₹10 ಕೋಟಿ, ನಗರ ಪ್ರದೇಶಗಳಲ್ಲಿ ₹100 ಕೋಟಿ ಹೊಸ ಅಂಗನವಾಡಿ ಕೇಂದ್ರ ಆರಂಭ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೊಸ ಬಾಲಕಿಯರ ಬಾಲಮಂದಿರ.</p>.<p>* ಶ್ರವಣ ದೋಷವುಳ್ಳ ಮಕ್ಕಳು ಮತ್ತು ಬುದ್ಧಿಮಾಂದ್ಯ ಮಕ್ಕಳ ಶಿಕ್ಷಕರ ತರಬೇತಿಗೆ ಕ್ರಮ.</p>.<p>* 30 ಸಂಯುಕ್ತ ವಿದ್ಯಾರ್ಥಿ ನಿಯಲಗಳನ್ನು ಆರಂಭಿಸಲು ₹100 ಕೋಟಿ ಅನುದಾನ.</p>.<p>* ಬೆಂಗಳೂರು ನಗರದಲ್ಲಿ ಸಂವಿಧಾನ ಮ್ಯೂಜಿಯಂ ಸ್ಥಾಪನೆಗೆ ₹20 ಕೋಟಿ ಅನುದಾನ. ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) 100 ವಸತಿ ಶಾಲೆಗಳನ್ನು ಪಿಯುಸಿಗೆ ಮೇಲ್ದರ್ಜೆಗೇರಿಸಲು ಕ್ರಮ.</p>.<p>* ವಿಭಾಗ ಮಟ್ಟದಲ್ಲಿ 4 ಹಿಂದುಳಿದ ವರ್ಗಗಳ ಮೊರಾರ್ಜಿ ಪದವಿ ಪೂರ್ವ ಕಾಲೇಜುಗಳಲ್ಲಿ ಐಐಟಿ/ನೀಟ್ ಪರೀಕ್ಷಾ ತರಬೇತಿ ಕೇಂದ್ರಗಳ ಸ್ಥಾಪನೆ. ₹4 ಕೋಟಿ ಅನುದಾನ.</p>.<p>* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 100 ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡಗಳ ನಿರ್ಮಾಣ. ₹40 ಕೋಟಿ ಅನುದಾನ.</p>.<p>* ಮಾಲೂರು ತಾಲ್ಲೂಕು ಶಿವಾರಪಟ್ಟಣದಲ್ಲಿ ₹10 ಕೋಟಿ ಅನುದಾನದಲ್ಲಿ ಅಮರಶಿಲ್ಪಿ ಜಕಣಾಚಾರಿ ಶಿಲ್ಪಕಲಾ ಕೇಂದ್ರ.</p>.<p>* ಮುಸ್ಲಿಂ ಸಮುದಾಯದಲ್ಲಿ ಆಧುನಿಕ ಶಿಕ್ಷಣ ಹಾಗೂ ವೈಜ್ಞಾನಿಕ ಮನೋಭಾವ ಉತ್ತೇಜನಕ್ಕೆ ಮೌಲಾನಾ ಆಜಾದ್ ಟ್ರಸ್ಟ್ ಸ್ಥಾಪನೆಗೆ ₹25 ಕೋಟಿ ಅನುದಾನ.</p>.<p>* ದಾವಣಗೆರೆ, ತುಮಕೂರು, ಗದನ, ಧಾರವಾಡ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ 5 ಮೊರಾರ್ಜಿ ದೇಸಾಯಿ ಮುಸ್ಲಿಂ ಹೆಣ್ಣು ಮಕ್ಕಳ ವಸತಿ ಶಾಲೆಗೆ ₹20 ಕೋಟಿ ಅನುದಾನ.</p>.<p>* 25 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ತಲಾ 25 ದಾಖಲಾತಿ ಸಂಖ್ಯೆ ಹೆಚ್ಚಳ. 20 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಸಂಖ್ಯಾಬಲ 60ಕ್ಕೆ ಹೆಚ್ಚಳ.</p>.<p><strong>ಕ್ರೀಡೆ</strong></p>.<p>* ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಬೀದರ್ ಹಾಗೂ ಮಡಿಕೇರಿಯಲ್ಲಿ ಹೊಸ ಕ್ರೀಡಾ ವಸತಿನಿಲಯಗಳ ನಿರ್ಮಾಣ. ₹12.5 ಕೋಟಿ ಅನುದಾನ.</p>.<p>* ರಾಯಚೂರು, ಹಾವೇರಿ, ಮಂಗಳೂರು, ಚಿಕ್ಕಮಗಳೂರು, ಮಂಡ್ಯ, ಚಾಮರಾಜನಗರ, ಕಲಬುರ್ಗಿ, ಕೋಲಾರ, ಹಾಸನ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಾಲಕಿಯರಿಗೆ ಪ್ರತ್ಯೇಕ ಕ್ರೀಡಾ ವಸತಿ ನಿಲಯ. ₹15 ಕೋಟಿ ಅನುದಾನ.</p>.<p>* ಕ್ರೀಡಾ ವಸತಿ ನಿಲಯಗಳಲ್ಲಿರುವ ಕ್ರೀಡಾಪಟುಗಳ ಊಟೋಪಚಾರದ ದಿನಭತ್ಯೆ ಭಾರತೀಯ ಕ್ರೀಡಾ ಪ್ರಾಧಿಕಾರದ ಮಟ್ಟಕ್ಕೆಹೆಚ್ಚಳ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಿಇಟಿ ಪರೀಕ್ಷೆಯನ್ನು ಆನ್ಲೈನ್ ಮೂಲಕ ನಡೆಸುವ ಮತ್ತು ಆಧಾರ್ ಆಧರಿತ ಡಿಜಿಟಲ್ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರಗಳ ಆನ್ಲೈನ್ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರದ ಬಜೆಟ್ ಭಾಷಣದಲ್ಲಿ ಹೇಳಿದರು.</p>.<p><a href="www.prajavani.net/stories/stateregional/rte-education-613102.html" target="_blank"><span style="color:#B22222;">ಇದನ್ನೂ ಓದಿ:</span>ಸರ್ಕಾರಿ ಶಾಲೆ ಇದ್ದರೆ ಖಾಸಗಿ ಶಾಲೆ ಪ್ರವೇಶ ಇಲ್ಲ</a></p>.<p>ಆನ್ಲೈನ್ ಸಿಇಟಿ ಪರೀಕ್ಷೆ ಕುರಿತು ಭಾಷಣದಲ್ಲಿ ಹೆಚ್ಚು ವಿವರ ಇರಲಿಲ್ಲ. ಆದರೆಆಧಾರ್ ಆಧರಿತ ಅಂಕಪಟ್ಟಿ ವಿತರಣೆಗೆ ₹ 2 ಕೋಟಿ ಅನುದಾನ ಮೀಸಲಿಡುವುದಾಗಿ ಘೋಷಿಸಿದರು. ಬೆಳಗಾವಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ.ಯನ್ನು ಮರುವಿಂಗಡಿಸಿ, ಹಾಸನದಲ್ಲಿ ಹೊಸ ತಾಂತ್ರಿಕ ವಿ.ವಿ. ಸ್ಥಾಪಿಸಲಾಗುವುದು ಎಂದು ಹೇಳಿದರು.</p>.<p>ರಾಜ್ಯದ ಎಲ್ಲ ಹೋಬಳಿ ಕೇಂದ್ರಗಳಲ್ಲಿಯೂ ಪೂರ್ವ ಪ್ರಾಥಮಿಕ ತರಗತಿಗಳಿಂದ 12ನೇ ತರಗವತಿಯವರೆಗೆ ಒಂದೇಸೂರಿನಡಿ ಶಿಕ್ಷಣ ಒದಗಿಸುವ ಒಂದು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪಿಸಲಾಗುವುದು. ಇದಕ್ಕೆ ಕೇಂದ್ರೀಯ ವಿದ್ಯಾಲಯ ಮಾದರಿ ಎಂಬುದು ಈ ಬಜೆಟ್ನಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಮುಖ ಘೋಷಣೆಯಾಗಿದೆ.</p>.<p>ಶಿಕ್ಷಣಕ್ಕೆ ಸಂಬಂಧಿಸಿದಂತೆ ಬಜೆಟ್ ಭಾಷಣದಲ್ಲಿ ಪ್ರಸ್ತಾವವಾದ ಮುಖ್ಯ ಅಂಶಗಳು ಇಂತಿವೆ...</p>.<p>* ಸುಭದ್ರ ಶಾಲೆ ಯೋಜನೆಯಡಿ ರಾಜ್ಯದ 6825 ಗ್ರಾಮೀಣ ಶಾಲೆಗಳಿಗೆ ನರೇಗಾ ಯೋಜನೆಯಡಿ ₹90 ಕೋಟಿ ವೆಚ್ಚದಲ್ಲಿ ಕಾಂಪೌಂಡ್.</p>.<p>* ಕ್ಷೀರಭಾಗ್ಯ ಯೋಜನೆಯಡಿ ಹಾಲು ನೀಡಲು ಶಾಲಾ ಮಕ್ಕಳಿಗೆ ₹638 ಕೋಟಿ ಮತ್ತು ಅಂಗನವಾಡಿ ಮಕ್ಕಳಿಗೆ ₹405 ಕೋಟಿ ಮೀಸಲು.</p>.<p>* 1500 ಹೊಸ ಶಾಲಾ ಕೊಠಡಿ, 5000 ಶಾಲಾ ಕೊಠಡಿಗಳ ಉನ್ನತೀಕರಣ, 1000 ಶಾಲೆಗಳಿಗೆ ಕಲಿಕಾ ಉಪಕರಣ ಹಾಗೂ ಶಾಲಾ ಕಟ್ಟಡಗಳ ನಿರ್ವಹಣೆಗೆಎಸ್ಟೇಟ್ ಅಧಿಕಾರಿ ನೇಮಕ.</p>.<p>* ‘ಗುರುಚೇತನ’ ಕಾರ್ಯಕ್ರಮದಡಿ 1 ಲಕ್ಷ ಶಿಕ್ಷಕರಿಗೆ 10 ದಿನಗಳ ತರಬೇತಿ.ಟೀಚರ್–ಮೆಂಟರ್ ಕಾರ್ಯಕ್ರಮದ ಮೂಲಕ ಶಿಕ್ಷಕರಲ್ಲಿ ಅರಿವು ಮೂಡಿಸಲು ಕ್ರಮ.</p>.<p>* ಆರ್ಟಿಇ ಕಾಯ್ದೆಯಡಿ ರಚಿಸಲಾಗಿರುವ ಮೇಲುಸ್ತುವಾರಿ ಸಮಿತಿಗಳಿಗೆ ಹೆಚ್ಚಿನ ಹೊಣೆಗಾರಿಕೆ. ಪ್ರತಿ ಶಿಕ್ಷಣ ವಲಯದಲ್ಲಿ ಶಾಲೆಗಳ ರಿಪೋರ್ಟ್ ಕಾರ್ಡ್ ತಯಾರಿ, ಶಿಕ್ಷಕ–ಪಾಲಕ ಸಭೆಯ ಚರ್ಚೆಯ ಅನ್ವಯ ಶಾಲೆಗಳ ಗುಣಮಟ್ಟ ಹೆಚ್ಚಳಕ್ಕೆ ಕ್ರಮ.</p>.<p>* ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಕಲಬುರ್ಗಿ ವಿಭಾಗಗಳಲ್ಲಿ ಆಲೂರು ವೆಂಕಟರಾವ್ ಹೆಸರಿನಲ್ಲಿ ₹2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಭಾಷಾ ಕೌಶಲ ತರಬೇತಿ ಕೇಂದ್ರ ಸ್ಥಾಪನೆ. ಭಾಷಾ ವಿಷಯಗಳಲ್ಲಿ ಸರ್ಕಾರಿ ಶಾಲಾ ಶಿಕ್ಷಕರಿಗೆ ನಿರಂತರ ತರಬೇತಿ ನೀಡಲು ಕ್ರಮ.</p>.<p>* ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ‘ಸ್ಪರ್ಧಾ ಕಲಿ’ ಯೋಜನೆ. ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ₹1.5 ಕೋಟಿ ಅನುದಾನ.</p>.<p>* ಎಸ್ಎಸ್ಎಲ್ಸಿ ಮೌಲ್ಯಮಾಪನ ಕೇಂದ್ರಗಳ ಡಿಜಿಟಲೀಕರಣಕ್ಕೆ ₹1 ಕೋಟಿ ಅನುದಾನ. ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ತರಬೇತಿಗೆ ₹2 ಕೋಟಿ ಅನುದಾನ.</p>.<p><strong>ಉನ್ನತ ಶಿಕ್ಷಣ</strong></p>.<p>* ಬೆಂಗಳೂರು ಕೇಂದ್ರ ವಿವಿಯಲ್ಲಿ ಹೊಸ ಪೀಳಿಗೆ ಉನ್ನತ ಶಿಕ್ಷಣ (Next Generation Learning<br />Initiative) ಕಾರ್ಯಕ್ರಮದ ಮೂಲಕ ಹೊಸ ಕಲಿಕಾ ವಿಧಾನಗಳ ಅಳವಡಿಕೆ. ಮುಖ್ಯಮಂತ್ರಿ ನೇತೃತ್ವದಲ್ಲಿ ಸಮಿತಿ.</p>.<p>* ಆನ್ಲೈನ್ಸಿಇಟಿ ಪರೀಕ್ಷೆಗೆ ಕ್ರಮ.ಆಧಾರ್ ಆಧರಿತ ಡಿಜಿಟಲ್ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರಗಳ ಆನ್ಲೈನ್ ವಿತರಣೆ, ದೃಢೀಕರಣ. ₹2 ಕೋಟಿ ಅನುದಾನ.</p>.<p>* ಹಾಸನದಲ್ಲಿ ಹೊಸ ತಾಂತ್ರಿಕ ವಿವಿ. ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮರುವಿಂಗಡನೆ. ಎಲ್ಲ ಪ್ರಥಮ ದರ್ಜೆ ಕಾಲೇಜು ಮತ್ತು ವಿವಿಗಳಲ್ಲಿ ಉದ್ಯೋಗ ಆಧರಿತ ಶಿಕ್ಷಣ ನೀಡಲು ತರಬೇತಿ ಕೇಂದ್ರ. ಅಧ್ಯಾಪಕರಿಗೆ ಅಗತ್ಯ ಬೋಧನ ತರಬೇತಿ.</p>.<p>* 7ನೇ ಕೇಂದ್ರ ವೇತನ ಆಯೋಗದ ಶಿಫಾರಸ್ಸುಗಳ ಪ್ರಕಾರ ಸರ್ಕಾರಿ/ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳು, ವಿವಿಗಳ ಬೋಧಕ ಮತ್ತು ತತ್ಸಮಾನ ವೃಂದಗಳ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ.</p>.<p>* ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ಗಳಲ್ಲಿ ಪ್ರಯೋಗಾಲಯ/ಕಾರ್ಯಾಲಯ ಸೌಲಭ್ಯ ಕಲ್ಪಿಸಲು ₹10 ಕೋಟಿ.</p>.<p><strong>ಮಹಿಳಾ ಮತ್ತು ಮಕ್ಕಳ ಕಲ್ಯಾಣ</strong></p>.<p>* ಅಂಗನವಾಡಿ ಕಾರ್ಯಕರ್ತೆಯರಿಗೆ ₹500 ಹಾಗೂ ಸಹಾಯಕರಿಗೆ ₹250 ಗೌರವಧನ ಹೆಚ್ಚಳ.</p>.<p>* 1000 ಅಂಗನವಾಡಿ ಕಟ್ಟಡಗಳ ದುರಸ್ತಿ ಕಾಮಗಾರಿಗೆ ₹10 ಕೋಟಿ, ನಗರ ಪ್ರದೇಶಗಳಲ್ಲಿ ₹100 ಕೋಟಿ ಹೊಸ ಅಂಗನವಾಡಿ ಕೇಂದ್ರ ಆರಂಭ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೊಸ ಬಾಲಕಿಯರ ಬಾಲಮಂದಿರ.</p>.<p>* ಶ್ರವಣ ದೋಷವುಳ್ಳ ಮಕ್ಕಳು ಮತ್ತು ಬುದ್ಧಿಮಾಂದ್ಯ ಮಕ್ಕಳ ಶಿಕ್ಷಕರ ತರಬೇತಿಗೆ ಕ್ರಮ.</p>.<p>* 30 ಸಂಯುಕ್ತ ವಿದ್ಯಾರ್ಥಿ ನಿಯಲಗಳನ್ನು ಆರಂಭಿಸಲು ₹100 ಕೋಟಿ ಅನುದಾನ.</p>.<p>* ಬೆಂಗಳೂರು ನಗರದಲ್ಲಿ ಸಂವಿಧಾನ ಮ್ಯೂಜಿಯಂ ಸ್ಥಾಪನೆಗೆ ₹20 ಕೋಟಿ ಅನುದಾನ. ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) 100 ವಸತಿ ಶಾಲೆಗಳನ್ನು ಪಿಯುಸಿಗೆ ಮೇಲ್ದರ್ಜೆಗೇರಿಸಲು ಕ್ರಮ.</p>.<p>* ವಿಭಾಗ ಮಟ್ಟದಲ್ಲಿ 4 ಹಿಂದುಳಿದ ವರ್ಗಗಳ ಮೊರಾರ್ಜಿ ಪದವಿ ಪೂರ್ವ ಕಾಲೇಜುಗಳಲ್ಲಿ ಐಐಟಿ/ನೀಟ್ ಪರೀಕ್ಷಾ ತರಬೇತಿ ಕೇಂದ್ರಗಳ ಸ್ಥಾಪನೆ. ₹4 ಕೋಟಿ ಅನುದಾನ.</p>.<p>* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 100 ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡಗಳ ನಿರ್ಮಾಣ. ₹40 ಕೋಟಿ ಅನುದಾನ.</p>.<p>* ಮಾಲೂರು ತಾಲ್ಲೂಕು ಶಿವಾರಪಟ್ಟಣದಲ್ಲಿ ₹10 ಕೋಟಿ ಅನುದಾನದಲ್ಲಿ ಅಮರಶಿಲ್ಪಿ ಜಕಣಾಚಾರಿ ಶಿಲ್ಪಕಲಾ ಕೇಂದ್ರ.</p>.<p>* ಮುಸ್ಲಿಂ ಸಮುದಾಯದಲ್ಲಿ ಆಧುನಿಕ ಶಿಕ್ಷಣ ಹಾಗೂ ವೈಜ್ಞಾನಿಕ ಮನೋಭಾವ ಉತ್ತೇಜನಕ್ಕೆ ಮೌಲಾನಾ ಆಜಾದ್ ಟ್ರಸ್ಟ್ ಸ್ಥಾಪನೆಗೆ ₹25 ಕೋಟಿ ಅನುದಾನ.</p>.<p>* ದಾವಣಗೆರೆ, ತುಮಕೂರು, ಗದನ, ಧಾರವಾಡ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ 5 ಮೊರಾರ್ಜಿ ದೇಸಾಯಿ ಮುಸ್ಲಿಂ ಹೆಣ್ಣು ಮಕ್ಕಳ ವಸತಿ ಶಾಲೆಗೆ ₹20 ಕೋಟಿ ಅನುದಾನ.</p>.<p>* 25 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ತಲಾ 25 ದಾಖಲಾತಿ ಸಂಖ್ಯೆ ಹೆಚ್ಚಳ. 20 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಸಂಖ್ಯಾಬಲ 60ಕ್ಕೆ ಹೆಚ್ಚಳ.</p>.<p><strong>ಕ್ರೀಡೆ</strong></p>.<p>* ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಬೀದರ್ ಹಾಗೂ ಮಡಿಕೇರಿಯಲ್ಲಿ ಹೊಸ ಕ್ರೀಡಾ ವಸತಿನಿಲಯಗಳ ನಿರ್ಮಾಣ. ₹12.5 ಕೋಟಿ ಅನುದಾನ.</p>.<p>* ರಾಯಚೂರು, ಹಾವೇರಿ, ಮಂಗಳೂರು, ಚಿಕ್ಕಮಗಳೂರು, ಮಂಡ್ಯ, ಚಾಮರಾಜನಗರ, ಕಲಬುರ್ಗಿ, ಕೋಲಾರ, ಹಾಸನ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಾಲಕಿಯರಿಗೆ ಪ್ರತ್ಯೇಕ ಕ್ರೀಡಾ ವಸತಿ ನಿಲಯ. ₹15 ಕೋಟಿ ಅನುದಾನ.</p>.<p>* ಕ್ರೀಡಾ ವಸತಿ ನಿಲಯಗಳಲ್ಲಿರುವ ಕ್ರೀಡಾಪಟುಗಳ ಊಟೋಪಚಾರದ ದಿನಭತ್ಯೆ ಭಾರತೀಯ ಕ್ರೀಡಾ ಪ್ರಾಧಿಕಾರದ ಮಟ್ಟಕ್ಕೆಹೆಚ್ಚಳ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>