‘ಸರ್ಕಾರಿ ಶಾಲೆಗಳಲ್ಲಿ ಕನಿಷ್ಠ ಮೂಲಸೌಕರ್ಯಗಳಿಲ್ಲ. ಶಿಕ್ಷಕರೂ ಇಲ್ಲ. ಈ ಪರಿಸ್ಥಿತಿ ನೋಡಿ 50 ಲಕ್ಷಕ್ಕೂ ಹೆಚ್ಚು ಮಕ್ಕಳು ಗುಣಮಟ್ಟದ ಶಿಕ್ಷಣ ಬಯಸಿ ಖಾಸಗಿ ಶಾಲೆಗಳ ಕಡೆಗೆ ಮುಖ ಮಾಡಿದ್ದಾರೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾದರೆ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ಆಗಲಿದೆ. ಎಲ್ಲ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಅವರು ಒತ್ತು ನೀಡುತ್ತಾರೆ. ಎಲ್ಲ ಮಕ್ಕಳಿಗೆ ಅಕ್ಷರ ದಾಸೋಹ ಮಾಡುತ್ತಾರೆ ಎಂಬುದು ನಂಬಿಕೆಯಾಗಿತ್ತು. ಆದರೆ, ಈ ನಂಬಿಕೆಗಳು ದಿನ ಕಳೆದಂತೆ ಹುಸಿ ಆಗುತ್ತಿರುವುದು ಆತಂಕ ಹೆಚ್ಚಿಸಿದೆ’ ಎಂದೂ ಹೇಳಿದ್ದಾರೆ.