ಪ್ರಶ್ನೋತ್ತರ ಅವಧಿಯಲ್ಲಿ ಮಾಧುಸ್ವಾಮಿ ಅವರು ‘ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಹುದ್ದೆಗಳು ಖಾಲಿ
ಇವೆ. 25 ವರ್ಷಗಳಿಂದ ಹುದ್ದೆಗಳ ಭರ್ತಿ ಮಾಡಿಲ್ಲ’ ಎಂದು ಗಮನ ಸೆಳೆದರು. ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ‘2009ರಿಂದ ಈ ಹುದ್ದೆಗಳು ಖಾಲಿ ಇವೆ’ ಎಂದು ಉತ್ತರಿಸಿದರು. ಸದನದಲ್ಲಿ ತಪ್ಪು ಉತ್ತರ ನೀಡಲಾಗಿದೆ ಎಂದು ಮಾಧುಸ್ವಾಮಿ ಆಕ್ಷೇಪಿಸಿದರು. ಮಾಧುಸ್ವಾಮಿ ನೆರವಿಗೆ ಬಿಜೆಪಿ ಸದಸ್ಯರು ನಿಂತರು. ಸುಮಾರು 10 ನಿಮಿಷ ವಾಕ್ಸಮರ ನಡೆಯಿತು.