<p><strong>ಕಲಬುರ್ಗಿ:</strong> ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಒಟ್ಟು 1650 ಜನರಿಗೆ ತಲಾ ₹ 1 ಲಕ್ಷ ಸಾಲ ನೀಡಲಾಗಿದೆ ಎಂದು ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ತಿಳಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ₹ 10 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಈ ಬಾರಿ ಹೆಚ್ಚುವರಿಯಾಗಿ ₹ 10 ಕೋಟಿ ಬರಬೇಕಿತ್ತು. ಆದರೆ ಕೊರೊನಾ ಸಂಕಷ್ಟದಿಂದಾಗಿ ಬರಲಿಲ್ಲ. ಇನ್ನಷ್ಟು ಅನುದಾನ ಸಿಕ್ಕರೆ ಸಾಲದ ಮೊತ್ತವನ್ನು ಹೆಚ್ಚಿಸಲಾಗುವುದು.</p>.<p>ಅರಿವು ಶೈಕ್ಷಣಿಕ ಸಾಲ ಹಾಗೂ ನೇರ ಉದ್ಯೋಗ ಸಾಲವನ್ನು ನಿಗಮದಿಂದ ನೀಡಲಾಗುತ್ತಿದೆ. ಸರಿಯಾಗಿ ಸಾಲ ಮರುಪಾವತಿ ಮಾಡಿದರೆ ಶೇ 20ರಷ್ಟು ರಿಯಾಯಿತಿ ನೀಡಲಾಗುವುದು ಎಂದರು.</p>.<p>ಶೈಕ್ಷಣಿಕ ಸಾಲಕ್ಕೆ ಶೇ 2 ಹಾಗೂ ನೇರ ಉದ್ಯೋಗ ಸಾಲಕ್ಕೆ ಕೇವಲ 4ರಷ್ಟು ಬಡ್ಡಿ ವಿಧಿಸಲಾಗುವುದು ಎಂದು ಅರುಣ್ ಹೇಳಿದರು.</p>.<p>ನಿಗಮದ ಸಹಾಯಕ ಪ್ರಧಾನ ವ್ಯವಸ್ಥಾಪಕ ನಾರಾಯಣ ನೆರ್ಲೆ, ಜಿಲ್ಲಾ ವ್ಯವಸ್ಥಾಪಕ ಜಗದೇವಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಒಟ್ಟು 1650 ಜನರಿಗೆ ತಲಾ ₹ 1 ಲಕ್ಷ ಸಾಲ ನೀಡಲಾಗಿದೆ ಎಂದು ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ತಿಳಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ₹ 10 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಈ ಬಾರಿ ಹೆಚ್ಚುವರಿಯಾಗಿ ₹ 10 ಕೋಟಿ ಬರಬೇಕಿತ್ತು. ಆದರೆ ಕೊರೊನಾ ಸಂಕಷ್ಟದಿಂದಾಗಿ ಬರಲಿಲ್ಲ. ಇನ್ನಷ್ಟು ಅನುದಾನ ಸಿಕ್ಕರೆ ಸಾಲದ ಮೊತ್ತವನ್ನು ಹೆಚ್ಚಿಸಲಾಗುವುದು.</p>.<p>ಅರಿವು ಶೈಕ್ಷಣಿಕ ಸಾಲ ಹಾಗೂ ನೇರ ಉದ್ಯೋಗ ಸಾಲವನ್ನು ನಿಗಮದಿಂದ ನೀಡಲಾಗುತ್ತಿದೆ. ಸರಿಯಾಗಿ ಸಾಲ ಮರುಪಾವತಿ ಮಾಡಿದರೆ ಶೇ 20ರಷ್ಟು ರಿಯಾಯಿತಿ ನೀಡಲಾಗುವುದು ಎಂದರು.</p>.<p>ಶೈಕ್ಷಣಿಕ ಸಾಲಕ್ಕೆ ಶೇ 2 ಹಾಗೂ ನೇರ ಉದ್ಯೋಗ ಸಾಲಕ್ಕೆ ಕೇವಲ 4ರಷ್ಟು ಬಡ್ಡಿ ವಿಧಿಸಲಾಗುವುದು ಎಂದು ಅರುಣ್ ಹೇಳಿದರು.</p>.<p>ನಿಗಮದ ಸಹಾಯಕ ಪ್ರಧಾನ ವ್ಯವಸ್ಥಾಪಕ ನಾರಾಯಣ ನೆರ್ಲೆ, ಜಿಲ್ಲಾ ವ್ಯವಸ್ಥಾಪಕ ಜಗದೇವಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>