<p><strong>ಬೆಂಗಳೂರು: </strong>ಶಿಕ್ಷಣ ಬೇಕಾದರೆ ಸರ್ಕಾರ ನಿಗದಿ ಮಾಡಿರುವ ಸಮವಸ್ತ್ರ ಧರಿಸಿ ತರಗತಿಗಳಿಗೆ ಹಾಜರಾಗಲಿ. ನಿಯಮ ಉಲ್ಲಂಘಿಸಿದರೆ ಕಾಲೇಜಿನ ಪ್ರವೇಶಕ್ಕೆ ಅವಕಾಶವೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿ ಬಿ.ಸಿ.ನಾಗೇಶ್ ಪುನರುಚ್ಚರಿಸಿದ್ದಾರೆ.</p>.<p>‘ಧರ್ಮ ಪಾಲನೆಗೆ ನಮ್ಮ ವಿರೋಧವಿಲ್ಲ. ಆದರೆ ಶಾಲೆಗೆ ಶಿಕ್ಷಣಕ್ಕಾಗಿ ಬರಬೇಕು. ಆ ರೀತಿ ಬರುವಾಗ ಸಮವಸ್ತ್ರ ಧರಿಸಿಯೇ ಬರಬೇಕು’ ಎಂದು ಅವರು ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.</p>.<p>ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಲಿನ ನಿಯಮಗಳನ್ನು ಪಾಲಿಸಬೇಕು. ಈ ಸಂಬಂಧ ಹೈಕೋರ್ಟ್ ನೀಡುವ ತೀರ್ಪು ಆಧರಿಸಿ ಹೊಸ ನಿಯಮಗಳನ್ನು ಮಾಡುತ್ತೇವೆ. ಅಲ್ಲಿಯವರೆಗೆ ಈಗಿರುವ ನಿಯಮವೇ ಮುಂದುವರಿಯುತ್ತದೆ ಎಂದರು.</p>.<p>ದೇಶದ ಸಮಗ್ರತೆ ಹಾಳು ಮಾಡಲು ಪಿತೂರಿ ನಡೆಯುತ್ತಿದೆ. ಹಿಜಾಬ್ ವಿವಾದ ಬಳಸಿ ಘರ್ಷಣೆ ಸೃಷ್ಟಿಸುವ ಹುನ್ನಾರವೂ ನಡೆದಿದೆ ಎಂದರು.</p>.<p>ಹಿಜಾಬ್ ಸಮರ್ಥಿಸಿ ಸಿದ್ಧರಾಮಯ್ಯ ಅವರು ಮಾತನಾಡಿದ್ದಾರೆ. ಈ ರೀತಿ ಮಾತನಾಡಲು ಅವರಿಗೆ ನಾಚಿಕೆ ಆಗಬೇಕು. ಓಟಿಗಾಗಿ ಅವರು ಯಾವ ಮಟ್ಟಕ್ಕೂ ಬೇಕಾದರೂ ಹೋಗುತ್ತಾರೆ. ಒಂದು ಸಮುದಾಯದ ಮತಕ್ಕಾಗಿ ಹೀಗೆಲ್ಲಾ ಮಾಡುತ್ತಿದ್ದಾರೆ. ಅವರ ಅವಧಿಯಲ್ಲೇ ಸಮವಸ್ತ್ರ ನಿಯಮ ಜಾರಿ ಮಾಡಿದ್ದಾರೆ ಎಂದು ಹರಿಹಾಯ್ದರು.</p>.<p>ಇದನ್ನೂ ಓದಿ.. <a href="https://www.prajavani.net/karnataka-news/siddaramaiah-said-that-hijab-prohibition-in-education-institutions-is-violation-of-fundamental-right-907960.html"><strong>ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಮೂಲಭೂತ ಹಕ್ಕಿನ ಉಲ್ಲಂಘನೆ: ಸಿದ್ದರಾಮಯ್ಯ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಶಿಕ್ಷಣ ಬೇಕಾದರೆ ಸರ್ಕಾರ ನಿಗದಿ ಮಾಡಿರುವ ಸಮವಸ್ತ್ರ ಧರಿಸಿ ತರಗತಿಗಳಿಗೆ ಹಾಜರಾಗಲಿ. ನಿಯಮ ಉಲ್ಲಂಘಿಸಿದರೆ ಕಾಲೇಜಿನ ಪ್ರವೇಶಕ್ಕೆ ಅವಕಾಶವೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿ ಬಿ.ಸಿ.ನಾಗೇಶ್ ಪುನರುಚ್ಚರಿಸಿದ್ದಾರೆ.</p>.<p>‘ಧರ್ಮ ಪಾಲನೆಗೆ ನಮ್ಮ ವಿರೋಧವಿಲ್ಲ. ಆದರೆ ಶಾಲೆಗೆ ಶಿಕ್ಷಣಕ್ಕಾಗಿ ಬರಬೇಕು. ಆ ರೀತಿ ಬರುವಾಗ ಸಮವಸ್ತ್ರ ಧರಿಸಿಯೇ ಬರಬೇಕು’ ಎಂದು ಅವರು ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.</p>.<p>ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಲಿನ ನಿಯಮಗಳನ್ನು ಪಾಲಿಸಬೇಕು. ಈ ಸಂಬಂಧ ಹೈಕೋರ್ಟ್ ನೀಡುವ ತೀರ್ಪು ಆಧರಿಸಿ ಹೊಸ ನಿಯಮಗಳನ್ನು ಮಾಡುತ್ತೇವೆ. ಅಲ್ಲಿಯವರೆಗೆ ಈಗಿರುವ ನಿಯಮವೇ ಮುಂದುವರಿಯುತ್ತದೆ ಎಂದರು.</p>.<p>ದೇಶದ ಸಮಗ್ರತೆ ಹಾಳು ಮಾಡಲು ಪಿತೂರಿ ನಡೆಯುತ್ತಿದೆ. ಹಿಜಾಬ್ ವಿವಾದ ಬಳಸಿ ಘರ್ಷಣೆ ಸೃಷ್ಟಿಸುವ ಹುನ್ನಾರವೂ ನಡೆದಿದೆ ಎಂದರು.</p>.<p>ಹಿಜಾಬ್ ಸಮರ್ಥಿಸಿ ಸಿದ್ಧರಾಮಯ್ಯ ಅವರು ಮಾತನಾಡಿದ್ದಾರೆ. ಈ ರೀತಿ ಮಾತನಾಡಲು ಅವರಿಗೆ ನಾಚಿಕೆ ಆಗಬೇಕು. ಓಟಿಗಾಗಿ ಅವರು ಯಾವ ಮಟ್ಟಕ್ಕೂ ಬೇಕಾದರೂ ಹೋಗುತ್ತಾರೆ. ಒಂದು ಸಮುದಾಯದ ಮತಕ್ಕಾಗಿ ಹೀಗೆಲ್ಲಾ ಮಾಡುತ್ತಿದ್ದಾರೆ. ಅವರ ಅವಧಿಯಲ್ಲೇ ಸಮವಸ್ತ್ರ ನಿಯಮ ಜಾರಿ ಮಾಡಿದ್ದಾರೆ ಎಂದು ಹರಿಹಾಯ್ದರು.</p>.<p>ಇದನ್ನೂ ಓದಿ.. <a href="https://www.prajavani.net/karnataka-news/siddaramaiah-said-that-hijab-prohibition-in-education-institutions-is-violation-of-fundamental-right-907960.html"><strong>ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಮೂಲಭೂತ ಹಕ್ಕಿನ ಉಲ್ಲಂಘನೆ: ಸಿದ್ದರಾಮಯ್ಯ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>