<p><strong>ಬೆಂಗಳೂರು:</strong> ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗಳ (ಡಿಡಿಪಿಯು) ನಿಯಂತ್ರಣ ಮತ್ತು ಜವಾಬ್ದಾರಿಯನ್ನು ಜಿಲ್ಲಾ ಪಂಚಾಯಿತಿಗೆ ವರ್ಗಾಯಿಸುವ ಪ್ರಸ್ತಾವ ಸರ್ಕಾರದ ಎದುರು ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.</p>.<p>ವಿಧಾನ ಪರಿಷತ್ತಿನ ಕಲಾಪದ ಶೂನ್ಯವೇಳೆಯಲ್ಲಿ ಕಾಂಗ್ರೆಸ್ನ ಪುಟ್ಟಣ್ಣ, ಜೆಡಿಎಸ್ನ ಎಸ್.ಎಲ್.ಭೋಜೇಗೌಡ ಅವರು ವಿಷಯ ಪ್ರಸ್ತಾಪಿಸಿ, ‘ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸುವುದಾಗಿ ಹೇಳಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು. </p>.<p>‘ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗಳ ನಿಯಂತ್ರಣ ಮತ್ತು ಜವಾಬ್ದಾರಿಯನ್ನು ಜಿಲ್ಲಾ ಪಂಚಾಯಿತಿಗೆ ವರ್ಗಾಯಿಸುವ ಪ್ರಸ್ತಾವವನ್ನು ಸರ್ಕಾರ ಕೈಬಿಡಬೇಕು’ ಎಂದು ಇಬ್ಬರು ಸದಸ್ಯರೂ ಒತ್ತಾಯಿಸಿದರು.</p>.<p>ಆಗ ಸಚಿವ ಮಧು ಬಂಗಾರಪ್ಪ, ‘ಈ ಹಿಂದೆ ಅಂತಹ ಆದೇಶ ಹೊರಡಿಸಲಾಗಿತ್ತು. ಆದರೆ ಈಗಾಗಲೇ ಅದನ್ನು ವಾಪಸ್ ಪಡೆಯಲಾಗಿದೆ. ಇದನ್ನು ಉಪನ್ಯಾಸಕರ ಸಂಘಗಳಿಗೂ ಮನವರಿಕೆ ಮಾಡಿಕೊಡಲಾಗಿತ್ತು. ಹೀಗಿದ್ದೂ ಸಂಘವು ಮೌಲ್ಯಮಾಪನ ಬಹಿಷ್ಕಾರ ನಡೆಸುವುದಾಗಿ ಹೇಳಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಮಾರ್ಚ್ 20ರಿಂದ ಮೌಲ್ಯಮಾಪನ ಆರಂಭವಾಗಬೇಕಿದೆ. ಇಂತಹ ಸಂದರ್ಭದಲ್ಲಿ ಬಹಿಷ್ಕಾರದ ಹೇಳಿಕೆಯು ‘ಬ್ಲ್ಯಾಕ್ಮೇಲ್’ ಆಗುತ್ತದೆ. ಅವರ ಸಮಸ್ಯೆಯನ್ನು ಬಗೆಹರಿಸಿದ್ದೇವೆ. ಉಪನ್ಯಾಸಕರೆಲ್ಲರೂ ಮೌಲ್ಯಮಾಪನಕ್ಕೆ ಹಾಜರಾಗಬೇಕು’ ಎಂದರು.</p>.<p>‘ಮೂರು ವರ್ಷಗಳಿಂದ ಬಾಕಿ ಇರುವ ಮೌಲ್ಯಮಾಪನ ಭತ್ಯೆ ಬಾಕಿಯನ್ನು ಇದೇ 20ರೊಳಗೆ ಬಿಡುಗಡೆ ಮಾಡುತ್ತೇವೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗಳ (ಡಿಡಿಪಿಯು) ನಿಯಂತ್ರಣ ಮತ್ತು ಜವಾಬ್ದಾರಿಯನ್ನು ಜಿಲ್ಲಾ ಪಂಚಾಯಿತಿಗೆ ವರ್ಗಾಯಿಸುವ ಪ್ರಸ್ತಾವ ಸರ್ಕಾರದ ಎದುರು ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.</p>.<p>ವಿಧಾನ ಪರಿಷತ್ತಿನ ಕಲಾಪದ ಶೂನ್ಯವೇಳೆಯಲ್ಲಿ ಕಾಂಗ್ರೆಸ್ನ ಪುಟ್ಟಣ್ಣ, ಜೆಡಿಎಸ್ನ ಎಸ್.ಎಲ್.ಭೋಜೇಗೌಡ ಅವರು ವಿಷಯ ಪ್ರಸ್ತಾಪಿಸಿ, ‘ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸುವುದಾಗಿ ಹೇಳಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು. </p>.<p>‘ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗಳ ನಿಯಂತ್ರಣ ಮತ್ತು ಜವಾಬ್ದಾರಿಯನ್ನು ಜಿಲ್ಲಾ ಪಂಚಾಯಿತಿಗೆ ವರ್ಗಾಯಿಸುವ ಪ್ರಸ್ತಾವವನ್ನು ಸರ್ಕಾರ ಕೈಬಿಡಬೇಕು’ ಎಂದು ಇಬ್ಬರು ಸದಸ್ಯರೂ ಒತ್ತಾಯಿಸಿದರು.</p>.<p>ಆಗ ಸಚಿವ ಮಧು ಬಂಗಾರಪ್ಪ, ‘ಈ ಹಿಂದೆ ಅಂತಹ ಆದೇಶ ಹೊರಡಿಸಲಾಗಿತ್ತು. ಆದರೆ ಈಗಾಗಲೇ ಅದನ್ನು ವಾಪಸ್ ಪಡೆಯಲಾಗಿದೆ. ಇದನ್ನು ಉಪನ್ಯಾಸಕರ ಸಂಘಗಳಿಗೂ ಮನವರಿಕೆ ಮಾಡಿಕೊಡಲಾಗಿತ್ತು. ಹೀಗಿದ್ದೂ ಸಂಘವು ಮೌಲ್ಯಮಾಪನ ಬಹಿಷ್ಕಾರ ನಡೆಸುವುದಾಗಿ ಹೇಳಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಮಾರ್ಚ್ 20ರಿಂದ ಮೌಲ್ಯಮಾಪನ ಆರಂಭವಾಗಬೇಕಿದೆ. ಇಂತಹ ಸಂದರ್ಭದಲ್ಲಿ ಬಹಿಷ್ಕಾರದ ಹೇಳಿಕೆಯು ‘ಬ್ಲ್ಯಾಕ್ಮೇಲ್’ ಆಗುತ್ತದೆ. ಅವರ ಸಮಸ್ಯೆಯನ್ನು ಬಗೆಹರಿಸಿದ್ದೇವೆ. ಉಪನ್ಯಾಸಕರೆಲ್ಲರೂ ಮೌಲ್ಯಮಾಪನಕ್ಕೆ ಹಾಜರಾಗಬೇಕು’ ಎಂದರು.</p>.<p>‘ಮೂರು ವರ್ಷಗಳಿಂದ ಬಾಕಿ ಇರುವ ಮೌಲ್ಯಮಾಪನ ಭತ್ಯೆ ಬಾಕಿಯನ್ನು ಇದೇ 20ರೊಳಗೆ ಬಿಡುಗಡೆ ಮಾಡುತ್ತೇವೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>