<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಈ ಬಾರಿ ಎರಡು ಪರೀಕ್ಷೆ ನಡೆಸಲಾಗುವುದು. ವಿಜ್ಞಾನ, ಗಣಿತ ಮತ್ತು ಸಮಾಜವಿಜ್ಞಾನದ ಒಂದು ಪತ್ರಿಕೆ, ಭಾಷೆಗಳಿರುವ ಮತ್ತೊಂದು ಪ್ರಶ್ನೆಪತ್ರಿಕೆ ಇರುತ್ತದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಶುಕ್ರವಾರ ಹೇಳಿದರು.</p>.<p>‘ಕಳೆದ ಬಾರಿ 9ನೇ ತರಗತಿಯ ಪರೀಕ್ಷೆಯೂ ನಡೆದಿಲ್ಲ. ಅದರ ಆಧಾರದ ಮೇಲೆ ಅಂಕಗಳನ್ನು ನೀಡಲು ಸಾಧ್ಯವಾಗದ ಕಾರಣ, ಎಸ್ಸೆಸ್ಸೆಲ್ಸಿಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ’ ಎಂದೂ ಹೇಳಿದರು.</p>.<p>‘ಪರೀಕ್ಷೆಯಲ್ಲಿ ಬಹುಆಯ್ಕೆಯ ಪ್ರಶ್ನೆಗಳಿದ್ದು, ನೇರ ಮತ್ತು ಸರಳವಾಗಿರುತ್ತವೆ. ಪ್ರತಿ ವಿಷಯಕ್ಕೆ 40 ಅಂಕಗಳಿರುತ್ತವೆ. ಅಂದರೆ, ಒಂದು ಪತ್ರಿಕೆ 120 ಅಂಕಗಳಿಗೆ ಇದ್ದು, ಮೂರು ಗಂಟೆ ಸಮಯ ನೀಡಲಾಗುತ್ತದೆ’ ಎಂದರು.</p>.<p><a href="https://www.prajavani.net/karnataka-news/government-decided-to-not-to-conductt-puc-835881.html" itemprop="url">ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್ </a></p>.<p>‘ವಿದ್ಯಾರ್ಥಿಗಳು ಪಿಯುಸಿಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗ ಸೇರಿದಂತೆ ಯಾವುದೇ ಕೋರ್ಸ್ ತೆಗೆದುಕೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಪರೀಕ್ಷೆ ನಡೆಸಲಾಗುತ್ತಿದೆ. ಯಾರನ್ನೇ ಆಗಲಿ ಅನುತ್ತೀರ್ಣಗೊಳಿಸುವ ಉದ್ದೇಶವಿಲ್ಲ. ಎ, ಎ+ ಗ್ರೇಡ್ ನೀಡಲಾಗುತ್ತದೆ’ ಎಂದರು.</p>.<p>‘ಕೋವಿಡ್ ಕಾರಣದಿಂದ ಗೈರಾಗಿದ್ದರೆ ಅಂತಹ ಮಕ್ಕಳಿಗೆ ಮಾತ್ರ ಪೂರಕ ಪರೀಕ್ಷೆ ನಡೆಸಲಾಗುತ್ತದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಈ ಬಾರಿ ಎರಡು ಪರೀಕ್ಷೆ ನಡೆಸಲಾಗುವುದು. ವಿಜ್ಞಾನ, ಗಣಿತ ಮತ್ತು ಸಮಾಜವಿಜ್ಞಾನದ ಒಂದು ಪತ್ರಿಕೆ, ಭಾಷೆಗಳಿರುವ ಮತ್ತೊಂದು ಪ್ರಶ್ನೆಪತ್ರಿಕೆ ಇರುತ್ತದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಶುಕ್ರವಾರ ಹೇಳಿದರು.</p>.<p>‘ಕಳೆದ ಬಾರಿ 9ನೇ ತರಗತಿಯ ಪರೀಕ್ಷೆಯೂ ನಡೆದಿಲ್ಲ. ಅದರ ಆಧಾರದ ಮೇಲೆ ಅಂಕಗಳನ್ನು ನೀಡಲು ಸಾಧ್ಯವಾಗದ ಕಾರಣ, ಎಸ್ಸೆಸ್ಸೆಲ್ಸಿಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ’ ಎಂದೂ ಹೇಳಿದರು.</p>.<p>‘ಪರೀಕ್ಷೆಯಲ್ಲಿ ಬಹುಆಯ್ಕೆಯ ಪ್ರಶ್ನೆಗಳಿದ್ದು, ನೇರ ಮತ್ತು ಸರಳವಾಗಿರುತ್ತವೆ. ಪ್ರತಿ ವಿಷಯಕ್ಕೆ 40 ಅಂಕಗಳಿರುತ್ತವೆ. ಅಂದರೆ, ಒಂದು ಪತ್ರಿಕೆ 120 ಅಂಕಗಳಿಗೆ ಇದ್ದು, ಮೂರು ಗಂಟೆ ಸಮಯ ನೀಡಲಾಗುತ್ತದೆ’ ಎಂದರು.</p>.<p><a href="https://www.prajavani.net/karnataka-news/government-decided-to-not-to-conductt-puc-835881.html" itemprop="url">ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್ </a></p>.<p>‘ವಿದ್ಯಾರ್ಥಿಗಳು ಪಿಯುಸಿಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗ ಸೇರಿದಂತೆ ಯಾವುದೇ ಕೋರ್ಸ್ ತೆಗೆದುಕೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಪರೀಕ್ಷೆ ನಡೆಸಲಾಗುತ್ತಿದೆ. ಯಾರನ್ನೇ ಆಗಲಿ ಅನುತ್ತೀರ್ಣಗೊಳಿಸುವ ಉದ್ದೇಶವಿಲ್ಲ. ಎ, ಎ+ ಗ್ರೇಡ್ ನೀಡಲಾಗುತ್ತದೆ’ ಎಂದರು.</p>.<p>‘ಕೋವಿಡ್ ಕಾರಣದಿಂದ ಗೈರಾಗಿದ್ದರೆ ಅಂತಹ ಮಕ್ಕಳಿಗೆ ಮಾತ್ರ ಪೂರಕ ಪರೀಕ್ಷೆ ನಡೆಸಲಾಗುತ್ತದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>