<p><strong>ಸುಬ್ರಹ್ಮಣ್ಯ:</strong> ‘ತಾನು ಏನು ಮಾತನಾಡುತ್ತಿದ್ದೇನೆ ಎನ್ನುವ ಅರಿವಿಲ್ಲದೇ ಮಾತನಾಡುವ ದೇಶದ ಒಬ್ಬನೇ ರಾಜಕಾರಣಿ ರಾಹುಲ್ ಗಾಂಧಿ’ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಟೀಕಿಸಿದರು.</p>.<p>ಕುಕ್ಕೆ ಸುಬ್ರಹ್ಮಣ್ಯಕ್ಕೆ ಶನಿವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಆರ್ಎಸ್ಎಸ್ ನೇತೃತ್ವದ ಶಾಲೆಗಳು ಪಾಕಿಸ್ತಾನದ ಮದರಸಾಗಳಿಗೆ ಸಮ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ. ಆರ್ಎಸ್ಎಸ್ ಏನು ಎಂದು ಅರಿಯಲು ಅದರ ಒಳಗನ್ನು ತಿಳಿಯಬೇಕು’ ಎಂದರು.</p>.<p>‘ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ‘ಒಂದು ದೇಶ ಒಂದು ಚುನಾವಣೆ’ ಅನುಷ್ಠಾನಕ್ಕೆ ಮುಂದಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದರಲ್ಲೂ ಆರ್ಎಸ್ಎಸ್ ಕೈವಾಡ ಹುಡುಕುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>ಕೋವಿಡ್–19 ಲಾಕ್ಡೌನ್ ಸಂದರ್ಭದಲ್ಲಿ ಕಾಲೇಜು ಇಲ್ಲದ ಕಾರಣ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಸಂಖ್ಯೆ ಕುಸಿತವಾಗಿದೆ. ಕೆಲವರು ಕೆಲಸಕ್ಕೆ ಸೇರಿದರೆ, ಇನ್ನು ಕೆಲವರು ಬಾಲ್ಯವಿವಾಹವಾಗಿ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ. ಈ ವಿದ್ಯಾರ್ಥಿಗಳನ್ನು ಮತ್ತೆ ಕಾಲೇಜಿಗೆ ತರುವ ಪ್ರಯತ್ನ ನಡೆಯುತ್ತಿದೆ. 1ರಿಂದ 6ನೇ ತರಗತಿಗೆ ಶಾಲೆ ಪ್ರಾರಂಭಿಸುವ ಸಂಬಂಧ ಶಿಕ್ಷಣ ಇಲಾಖೆ ತಜ್ಞರ ಸಲಹೆ ಪಡೆದು ನಿರ್ಧರಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಬ್ರಹ್ಮಣ್ಯ:</strong> ‘ತಾನು ಏನು ಮಾತನಾಡುತ್ತಿದ್ದೇನೆ ಎನ್ನುವ ಅರಿವಿಲ್ಲದೇ ಮಾತನಾಡುವ ದೇಶದ ಒಬ್ಬನೇ ರಾಜಕಾರಣಿ ರಾಹುಲ್ ಗಾಂಧಿ’ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಟೀಕಿಸಿದರು.</p>.<p>ಕುಕ್ಕೆ ಸುಬ್ರಹ್ಮಣ್ಯಕ್ಕೆ ಶನಿವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಆರ್ಎಸ್ಎಸ್ ನೇತೃತ್ವದ ಶಾಲೆಗಳು ಪಾಕಿಸ್ತಾನದ ಮದರಸಾಗಳಿಗೆ ಸಮ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ. ಆರ್ಎಸ್ಎಸ್ ಏನು ಎಂದು ಅರಿಯಲು ಅದರ ಒಳಗನ್ನು ತಿಳಿಯಬೇಕು’ ಎಂದರು.</p>.<p>‘ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ‘ಒಂದು ದೇಶ ಒಂದು ಚುನಾವಣೆ’ ಅನುಷ್ಠಾನಕ್ಕೆ ಮುಂದಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದರಲ್ಲೂ ಆರ್ಎಸ್ಎಸ್ ಕೈವಾಡ ಹುಡುಕುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>ಕೋವಿಡ್–19 ಲಾಕ್ಡೌನ್ ಸಂದರ್ಭದಲ್ಲಿ ಕಾಲೇಜು ಇಲ್ಲದ ಕಾರಣ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಸಂಖ್ಯೆ ಕುಸಿತವಾಗಿದೆ. ಕೆಲವರು ಕೆಲಸಕ್ಕೆ ಸೇರಿದರೆ, ಇನ್ನು ಕೆಲವರು ಬಾಲ್ಯವಿವಾಹವಾಗಿ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ. ಈ ವಿದ್ಯಾರ್ಥಿಗಳನ್ನು ಮತ್ತೆ ಕಾಲೇಜಿಗೆ ತರುವ ಪ್ರಯತ್ನ ನಡೆಯುತ್ತಿದೆ. 1ರಿಂದ 6ನೇ ತರಗತಿಗೆ ಶಾಲೆ ಪ್ರಾರಂಭಿಸುವ ಸಂಬಂಧ ಶಿಕ್ಷಣ ಇಲಾಖೆ ತಜ್ಞರ ಸಲಹೆ ಪಡೆದು ನಿರ್ಧರಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>