ರಾಜ್ಯದಲ್ಲಿ ಕುಸಿದಿರುವ ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕೆ ಶಿಕ್ಷಣ ಇಲಾಖೆ ಪರಿಣಾಮಕಾರಿ ರೂಪುರೇಷೆ ಸಿದ್ಧಪಡಿಸಬೇಕು. ಸರ್ಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟ ಹೆಚ್ಚಿಸದೇ ದಿನಕ್ಕೊಂದು ನಿಯಮ ಮಾಡುತ್ತಾ ಖಾಸಗಿ ಶಾಲೆಗಳಿಗೆ ಕಿರುಕುಳ ನೀಡುತ್ತಾ ಲಾಭ ಮಾಡಿಕೊಳ್ಳುತ್ತಿದ್ದಾರೆ. 5, 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸದೇ, ಆಯಾ ಶಾಲೆಗಳ ಮಟ್ಟದಲ್ಲೇ ಮೌಲ್ಯಾಂಕನ ನಡೆಸಿ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಉತ್ತೇಜನ ನೀಡಬೇಕು. ಗುಣಮಟ್ಟದ ಪಠ್ಯಪುಸ್ತಕ ರೂಪಿಸಬೇಕು. ಶಾಲೆ ತೊರೆಯುವ ಮಕ್ಕಳನ್ನು ಗುರುತಿಸಿ, ಬಾಲ್ಯ ವಿವಾಹ ತಡೆಯಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.