<p><strong>ಬೆಂಗಳೂರು</strong>: 2024–25ನೇ ಸಾಲಿನಲ್ಲಿ ನಡೆದ ಸೀಟ್ ಬ್ಲಾಕಿಂಗ್ ಹಗರಣದ ತನಿಖೆಯ ವರದಿ ಇಲ್ಲಿಯವರೆಗೂ ಕೈಸೇರಿಲ್ಲ. ಪೊಲೀಸ್ ಕಮಿಷನರ್ ಬಿ. ದಯಾನಂದ ಅವರಿಂದ ಮಾಹಿತಿ ಪಡೆಯಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಗರಣದ ನಂತರ ಪೊಲೀಸರು ಕೆಲವರನ್ನು ಬಂಧಿಸಿದ್ದರು. ಅವರು ಜಾಮೀನು ಪಡೆದು ಹೊರಬಂದಿದ್ದಾರೆ. ಹಗರಣದಲ್ಲಿ ಹೆಸರಿಸಲಾದ ಕಾಲೇಜುಗಳ ಪಾತ್ರದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಕುರಿತು ಸಂಪೂರ್ಣ ಮಾಹಿತಿ ಪಡೆಯಲಾಗುವುದು ಎಂದರು. </p>.<p>ಹಗರಣದಲ್ಲಿ ಪ್ರಮುಖವಾಗಿ ಹೆಸರು ಕೇಳಿ ಬಂದಿದ್ದ ಬಿಎಂಎಸ್ ಕಾಲೇಜು ಆ ಶೈಕ್ಷಣಿಕ ವರ್ಷದಲ್ಲಿ ಉಳಿಕೆಯಾದ ಯಾವ ಸೀಟು ಭರ್ತಿ ಮಾಡಿಲ್ಲ ಎಂದು ಮಾಹಿತಿ ನೀಡಿದೆ. ಸೀಟ್ ಬ್ಲಾಕಿಂಗ್ ದಂಧೆಯಲ್ಲಿ ಭಾಗಿಯಾದ ಇತರೆ ಕಾಲೇಜುಗಳ ಪಾತ್ರದ ಬಗ್ಗೆ ವರದಿ ನೀಡಲು ಪೊಲೀಸರಿಗೆ ಏಕೆ ಸಾಧ್ಯವಾಗಲಿಲ್ಲ ಎಂಬ ಮಾಹಿತಿ ಬೇಕಿದೆ ಎಂದು ಹೇಳಿದರು. </p>.<p>ಸೀಟ್ ಬ್ಲಾಕಿಂಗ್ ತಡೆಗೆ ಈ ವರ್ಷ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಂತಹ ಪ್ರಕರಣಗಳು ಮತ್ತೆ ಮರುಕಳಿಸುವುದಿಲ್ಲ ಎನ್ನುವ ಭರವಸೆ ಮೂಡಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 2024–25ನೇ ಸಾಲಿನಲ್ಲಿ ನಡೆದ ಸೀಟ್ ಬ್ಲಾಕಿಂಗ್ ಹಗರಣದ ತನಿಖೆಯ ವರದಿ ಇಲ್ಲಿಯವರೆಗೂ ಕೈಸೇರಿಲ್ಲ. ಪೊಲೀಸ್ ಕಮಿಷನರ್ ಬಿ. ದಯಾನಂದ ಅವರಿಂದ ಮಾಹಿತಿ ಪಡೆಯಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಗರಣದ ನಂತರ ಪೊಲೀಸರು ಕೆಲವರನ್ನು ಬಂಧಿಸಿದ್ದರು. ಅವರು ಜಾಮೀನು ಪಡೆದು ಹೊರಬಂದಿದ್ದಾರೆ. ಹಗರಣದಲ್ಲಿ ಹೆಸರಿಸಲಾದ ಕಾಲೇಜುಗಳ ಪಾತ್ರದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಕುರಿತು ಸಂಪೂರ್ಣ ಮಾಹಿತಿ ಪಡೆಯಲಾಗುವುದು ಎಂದರು. </p>.<p>ಹಗರಣದಲ್ಲಿ ಪ್ರಮುಖವಾಗಿ ಹೆಸರು ಕೇಳಿ ಬಂದಿದ್ದ ಬಿಎಂಎಸ್ ಕಾಲೇಜು ಆ ಶೈಕ್ಷಣಿಕ ವರ್ಷದಲ್ಲಿ ಉಳಿಕೆಯಾದ ಯಾವ ಸೀಟು ಭರ್ತಿ ಮಾಡಿಲ್ಲ ಎಂದು ಮಾಹಿತಿ ನೀಡಿದೆ. ಸೀಟ್ ಬ್ಲಾಕಿಂಗ್ ದಂಧೆಯಲ್ಲಿ ಭಾಗಿಯಾದ ಇತರೆ ಕಾಲೇಜುಗಳ ಪಾತ್ರದ ಬಗ್ಗೆ ವರದಿ ನೀಡಲು ಪೊಲೀಸರಿಗೆ ಏಕೆ ಸಾಧ್ಯವಾಗಲಿಲ್ಲ ಎಂಬ ಮಾಹಿತಿ ಬೇಕಿದೆ ಎಂದು ಹೇಳಿದರು. </p>.<p>ಸೀಟ್ ಬ್ಲಾಕಿಂಗ್ ತಡೆಗೆ ಈ ವರ್ಷ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಂತಹ ಪ್ರಕರಣಗಳು ಮತ್ತೆ ಮರುಕಳಿಸುವುದಿಲ್ಲ ಎನ್ನುವ ಭರವಸೆ ಮೂಡಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>