ಬಾಗಲಕೋಟೆ: ‘ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿಯೇ ಅಪ್ಪ– ಮಗನನ್ನು (ಎಚ್.ಡಿ. ದೇವೇಗೌಡ–ನಿಖಿಲ್ ಕುಮಾರಸ್ವಾಮಿ) ಗೆಲ್ಲಿಸಿಕೊಳ್ಳಲು ಸಾಧ್ಯವಾಗದ ಎಚ್.ಡಿ.ಕುಮಾರಸ್ವಾಮಿ ಈಗ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರನ್ನು ಸೋಲಿಸುವುದಾಗಿ ಹೇಳುತ್ತಿದ್ದಾರೆ. ಅದು ಹಾಸ್ಯಾಸ್ಪದ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು.