ಜುಲೈ ತಿಂಗಳಲ್ಲಿ ಒಂದು ಕೋಟಿ ಕುಟುಂಬಗಳಿಗೆ ₹ 566 ಕೋಟಿಯನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗಿದೆ. ಹೆಚ್ಚು ಸಮಯ ನಗದು ಪಾತಿಸುವುದು ಸರಿಯಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ. ಅಕ್ಕಿ ಖರೀದಿಗೆ ಎಲ್ಲ ಪ್ರಯತ್ನಗಳೂ ನಡೆದಿವೆ. ಎಫ್ಸಿಐ ದರಕ್ಕೆ ಅಕ್ಕಿ ಪೂರೈಸಲು ಪೂರೈಕೆದಾರರು ಒಪ್ಪದೇ ಇದ್ದರೆ ಮಾತ್ರ ಕೆಲವು ತಿಂಗಳ ಕಾಲ ವಿಳಂಬವಾಗಬಹುದು ಎಂದು ಹೇಳಿದರು.
5.32 ಲಕ್ಷ ಕುಟುಂಬಗಳು ಮೂರು ತಿಂಗಳಲ್ಲಿ ಯಾವುದೇ ಪಡಿತರ ಪಡೆದಿಲ್ಲ. 19.27 ಪಡಿತರ ಚೀಟಿಗಳೊಗೆ ಆಧಾರ್ ಮತ್ತು ಬ್ಯಾಂಕ್ ಖಾತೆಗಳ ವಿವರ ಜೋಡಣೆಯಾಗಿಲ್ಲ. ಈ ಎಲ್ಲವೂ ಅನರ್ಹ ಪಡಿತರ ಚೀಟಿಗಳು ಎಂಬ ಅನುಮಾನವಿದೆ ಎಂದರು.
ಅಂಚೆ ಇಲಾಖೆಯ ಸಹಯೋಗದಲ್ಲಿ 170 ನ್ಯಾಯಬೆಲೆ ಅಂಗಡಿಗಳಲ್ಲಿ ಶಿಬಿರ ನಡೆಸಿ ಪಡಿತರ ಚೀಟಿದಾರರ ಬ್ಯಾಂಕ್ ಖಾತೆ ತೆರೆಯಲು ವ್ಯವಸ್ಥೆ ಮಾಡಲಾಗಿತ್ತು. ಈವರೆಗೆ 1.19 ಲಕ್ಷ ಪಡಿತರ ಚೀಟಿದಾರರ ಬ್ಯಾಂಕ್ ಖಾತೆ ತೆರೆಯಲಾಗಿದೆ ಎಂದು ತಿಳಿಸಿದರು.