ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ ವೇದಿಕೆಯ ಡಾ. ವಿ.ಪಿ. ನಿರಂಜನಾರಾಧ್ಯ ಅವರು, ನಮ್ಮ ಮಕ್ಕಳಿಗೆ ಪ್ರೋಟಿನ್ ಯುಕ್ತ ಆಹಾರ ನಿರಂತರವಾಗಿ ದೊರೆಯುತ್ತಿಲ್ಲ. ಇದರಿಂದಾಗಿ ಮಕ್ಕಳ ದೈಹಿಕ, ಮಾನಸಿಕ, ಬೌದ್ಧಿಕ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಉಂಟಾಗಿದೆ ಎಂದೂ ವರದಿಗಳೂ ಹೇಳಿವೆ. ಪರಿಸ್ಥಿತಿ ಹೀಗಿರುವಾಗ, ಸದುದ್ದೇಶದಿಂದ ಆರಂಭಿಸಿರುವ ಮೊಟ್ಟೆ ವಿತರಣೆ ಯೋಜನೆಯನ್ನು ವಿರೋಧದ ಕಾರಣಕ್ಕೆ ಸರ್ಕಾರ ಕೈಬಿಡಬಾರದು. ಈ ವಿಷಯದಲ್ಲಿ ಜಾತಿ, ಧರ್ಮ ಹಾಗೂ ರಾಜಕೀಯ ಬೆರೆಸದೆ ಮಕ್ಕಳ ಬೆಳವಣಿಗೆಯ ದೃಷ್ಟಿಯಿಂದ ಈ ನಿರ್ಧಾರವನ್ನು ಜಾರಿಗೊಳಿಸಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.