<p class="rtecenter"><em><strong>ಮುಸ್ಲಿಂ ಬಾಂಧವರಪವಿತ್ರ ಹಬ್ಬವಾದ ಈದ್ ಮಿಲಾದ್ ಅನ್ನು ರಾಜ್ಯಾದ್ಯಂತ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಕೆಲವೆಡೆ ಮುಸ್ಲಿಂ ಸಮುದಾಯದ ಆಚರಣೆಯಲ್ಲಿ ಹಿಂದೂಗಳು ಭಾಗವಹಿಸಿ ಸಾಮರಸ್ಯ ಮೆರೆದರು.</strong></em></p>.<p><strong>ಬೆಳಗಾವಿ</strong>: ನಗರದಲ್ಲಿ ಈದ್ ಮಿಲಾದ್ ಅಂಗವಾಗಿ ಮುಸ್ಲಿಂ ಬಾಂಧವರು ಸಂಭ್ರಮದಿಂದ ಮೆರವಣಿಗೆ ನಡೆಸಿದರು. ನಗರದ ಹಳೆಯ ಪಿಬಿ ರಸ್ತೆಯ ಜಿನಾ ಚೌಕ್ನಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಯಿತು.</p>.<p>ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಫಿರೋಜ್ ಸೇಠ್, ‘ಭಾವೈಕ್ಯದಿಂದ ಕೂಡಿದ ರಾಷ್ಟ್ರ ಭಾರತ. ನಾವೆಲ್ಲರೂ ಭಿನ್ನಾಭಿಪ್ರಾಯ ಮರೆತು, ಸಹಬಾಳ್ವೆಯಿಂದ ಬದುಕಬೇಕು,’ ಎಂದು ಹೇಳಿದರು.</p>.<p>‘ಪ್ರವಾದಿ ಮಹಮ್ಮದ್ ಪೈಗಂಬರ್ ಸಂದೇಶಗಳನ್ನು ಪ್ರತಿಯೊಬ್ಬರೂ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಶಾಂತಿಯ ಹಾದಿಯಲ್ಲಿ ಸಾಗಬೇಕು. ಆಗ ಬದುಕು ಸಾರ್ಥಕವಾಗುತ್ತದೆ. ಹಿಂದೂಗಳು, ಮುಸ್ಲಿಮರು ಸಹೋದರರಿದ್ದಂತೆ. ನಾವೆಲ್ಲರೂ ಒಂದಾಗಿ ಬಾಳಬೇಕು. ಅರ್ಥಪೂರ್ಣವಾಗಿ ಹಬ್ಬ ಆಚರಿಸಬೇಕು,’ ಎಂದು ತಿಳಿಸಿದರು.</p>.<p>ಧರ್ಮಗುರು ಮುಫ್ತಿ ಮಂಜೂರ್ ಅಹ್ಮದ್ ಮಿಸ್ಬಾಯಿ, ಶಾಂತಿಯೇ ನಮ್ಮ ಉಸಿರಾಗಲಿ. ‘ಅಲ್ಲಾಹ್’ ಸಕಲ ಜೀವರಾಶಿಗೆ ಒಳಿತನ್ನು ಮಾಡಲಿ ಎಂದು ಆಶಿಸಿದರು.</p>.<p>ಮೆರವಣಿಗೆಯಲ್ಲಿ ಹಜರತ್ ಸೈಯ್ಯದ್ ತಲ್ಹಾ ಅಶ್ರಫಿ ಜಿಲ್ಹಾನಿ , ತಂಜೀಮ್ ಕಮಿಟಿ ಅಧ್ಯಕ್ಷ ಮಹಮ್ಮದ್ ಗೌಸ್ ಪೀರಜಾದೆ, ಉಪಾಧ್ಯಕ್ಷ ಎಂ.ಎನ್. ಶೇಖ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ರಾಜು ಸೇಠ್, ಮಾರ್ಕೆಟ್ ಎಸಿಪಿ ಎನ್.ವಿ. ಭರಮನಿ, ಮಹಾಂತೇಶ್ವರ ಜಿದ್ದಿ, ಫೈಜಾನ್ ಸೇಠ್ ಹಾಜರಿದ್ದರು.</p>.<p>ಮೆರವಣಿಗೆಯು ಕೇಂದ್ರ ಬಸ್ ನಿಲ್ದಾಣ, ಸಂಗೊಳ್ಳಿ ರಾಯಣ್ಣ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ವೃತ್ತ, ಕಾಲೇಜು ರಸ್ತೆ, ಧರ್ಮವೀರ ಸಂಭಾಜಿ ವೃತ್ತ ಮಾರ್ಗವಾಗಿ ಸಂಚರಿಸಿ ಕ್ಯಾಂಪ್ ಪ್ರದೇಶದ ಅಸದ್ ಖಾನ್ ದರ್ಗಾ ಆವರಣದಲ್ಲಿ ಮುಕ್ತಾಯಗೊಂಡಿತು.</p>.<p><strong>ಹೊಸಪೇಟೆ:</strong> ನಗರದಲ್ಲಿ ಸಂಭ್ರಮ, ಸಡಗರದಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸಲಾಯಿತು. ಮುಸ್ಲಿಂ ಬಾಂಧವರು ಮಸೀದಿಗೆ ತೆರಳಿ ನಮಾಜ್ನಲ್ಲಿ ಪಾಲ್ಗೊಂಡ ನಂತರ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ಈದ್ ಮಿಲಾದ್ನ ಭವ್ಯ ಮೆರವಣಿಗೆಗೆ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಿಂದ ಬಂದಿದ್ದ ಸಾವಿರಾರು ಜನ ಸಾಕ್ಷಿಯಾದರು. ಹಸಿರು ವರ್ಣದ ಧ್ವಜಗಳು ಮೆರವಣಿಗೆಯಲ್ಲಿ ರಾರಾಜಿಸಿದವು. ಮೆಕ್ಕಾ ಮದೀನಾ, ಜಾಮೀಯಾ ಮಸೀದಿ, ಕುತುಬ್ ಮಿನಾರ್ನ ಪ್ರತಿಕೃತಿಗಳು ಗಮನ ಸೆಳೆದವು.</p>.<p>ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಮೆರವಣಿಗೆಯು ಚಿತ್ತವಾಡ್ಗಿ ರಸ್ತೆ, ಶ್ರಮಿಕ ಭವನ, ರಾಮ ಟಾಕೀಸ್, ಮೂರಂಗಡಿ ವೃತ್ತ, ಬಸ್ ನಿಲ್ದಾಣ, ರೋಟರಿ ವೃತ್ತದ ಮೂಲಕ ಸಾಗಿತು. ಸಾವಿರಾರು ಜನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರಿಂದ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.</p>.<p>ಮೆರವಣಿಗೆಯು ಪಟ್ಟಣ ಪೊಲೀಸ್ ಠಾಣೆ ಬಳಿ ಸಾಗುವಾಗ ಹಿಂದೂ ಧರ್ಮೀಯರು ಬರಮಾಡಿಕೊಂಡು ಶುಭ ಕೋರಿದರು. ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಡಿವೈಎಸ್ಪಿ ರಘುಕುಮಾರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="rtecenter"><em><strong>ಮುಸ್ಲಿಂ ಬಾಂಧವರಪವಿತ್ರ ಹಬ್ಬವಾದ ಈದ್ ಮಿಲಾದ್ ಅನ್ನು ರಾಜ್ಯಾದ್ಯಂತ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಕೆಲವೆಡೆ ಮುಸ್ಲಿಂ ಸಮುದಾಯದ ಆಚರಣೆಯಲ್ಲಿ ಹಿಂದೂಗಳು ಭಾಗವಹಿಸಿ ಸಾಮರಸ್ಯ ಮೆರೆದರು.</strong></em></p>.<p><strong>ಬೆಳಗಾವಿ</strong>: ನಗರದಲ್ಲಿ ಈದ್ ಮಿಲಾದ್ ಅಂಗವಾಗಿ ಮುಸ್ಲಿಂ ಬಾಂಧವರು ಸಂಭ್ರಮದಿಂದ ಮೆರವಣಿಗೆ ನಡೆಸಿದರು. ನಗರದ ಹಳೆಯ ಪಿಬಿ ರಸ್ತೆಯ ಜಿನಾ ಚೌಕ್ನಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಯಿತು.</p>.<p>ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಫಿರೋಜ್ ಸೇಠ್, ‘ಭಾವೈಕ್ಯದಿಂದ ಕೂಡಿದ ರಾಷ್ಟ್ರ ಭಾರತ. ನಾವೆಲ್ಲರೂ ಭಿನ್ನಾಭಿಪ್ರಾಯ ಮರೆತು, ಸಹಬಾಳ್ವೆಯಿಂದ ಬದುಕಬೇಕು,’ ಎಂದು ಹೇಳಿದರು.</p>.<p>‘ಪ್ರವಾದಿ ಮಹಮ್ಮದ್ ಪೈಗಂಬರ್ ಸಂದೇಶಗಳನ್ನು ಪ್ರತಿಯೊಬ್ಬರೂ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಶಾಂತಿಯ ಹಾದಿಯಲ್ಲಿ ಸಾಗಬೇಕು. ಆಗ ಬದುಕು ಸಾರ್ಥಕವಾಗುತ್ತದೆ. ಹಿಂದೂಗಳು, ಮುಸ್ಲಿಮರು ಸಹೋದರರಿದ್ದಂತೆ. ನಾವೆಲ್ಲರೂ ಒಂದಾಗಿ ಬಾಳಬೇಕು. ಅರ್ಥಪೂರ್ಣವಾಗಿ ಹಬ್ಬ ಆಚರಿಸಬೇಕು,’ ಎಂದು ತಿಳಿಸಿದರು.</p>.<p>ಧರ್ಮಗುರು ಮುಫ್ತಿ ಮಂಜೂರ್ ಅಹ್ಮದ್ ಮಿಸ್ಬಾಯಿ, ಶಾಂತಿಯೇ ನಮ್ಮ ಉಸಿರಾಗಲಿ. ‘ಅಲ್ಲಾಹ್’ ಸಕಲ ಜೀವರಾಶಿಗೆ ಒಳಿತನ್ನು ಮಾಡಲಿ ಎಂದು ಆಶಿಸಿದರು.</p>.<p>ಮೆರವಣಿಗೆಯಲ್ಲಿ ಹಜರತ್ ಸೈಯ್ಯದ್ ತಲ್ಹಾ ಅಶ್ರಫಿ ಜಿಲ್ಹಾನಿ , ತಂಜೀಮ್ ಕಮಿಟಿ ಅಧ್ಯಕ್ಷ ಮಹಮ್ಮದ್ ಗೌಸ್ ಪೀರಜಾದೆ, ಉಪಾಧ್ಯಕ್ಷ ಎಂ.ಎನ್. ಶೇಖ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ರಾಜು ಸೇಠ್, ಮಾರ್ಕೆಟ್ ಎಸಿಪಿ ಎನ್.ವಿ. ಭರಮನಿ, ಮಹಾಂತೇಶ್ವರ ಜಿದ್ದಿ, ಫೈಜಾನ್ ಸೇಠ್ ಹಾಜರಿದ್ದರು.</p>.<p>ಮೆರವಣಿಗೆಯು ಕೇಂದ್ರ ಬಸ್ ನಿಲ್ದಾಣ, ಸಂಗೊಳ್ಳಿ ರಾಯಣ್ಣ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ವೃತ್ತ, ಕಾಲೇಜು ರಸ್ತೆ, ಧರ್ಮವೀರ ಸಂಭಾಜಿ ವೃತ್ತ ಮಾರ್ಗವಾಗಿ ಸಂಚರಿಸಿ ಕ್ಯಾಂಪ್ ಪ್ರದೇಶದ ಅಸದ್ ಖಾನ್ ದರ್ಗಾ ಆವರಣದಲ್ಲಿ ಮುಕ್ತಾಯಗೊಂಡಿತು.</p>.<p><strong>ಹೊಸಪೇಟೆ:</strong> ನಗರದಲ್ಲಿ ಸಂಭ್ರಮ, ಸಡಗರದಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸಲಾಯಿತು. ಮುಸ್ಲಿಂ ಬಾಂಧವರು ಮಸೀದಿಗೆ ತೆರಳಿ ನಮಾಜ್ನಲ್ಲಿ ಪಾಲ್ಗೊಂಡ ನಂತರ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ಈದ್ ಮಿಲಾದ್ನ ಭವ್ಯ ಮೆರವಣಿಗೆಗೆ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಿಂದ ಬಂದಿದ್ದ ಸಾವಿರಾರು ಜನ ಸಾಕ್ಷಿಯಾದರು. ಹಸಿರು ವರ್ಣದ ಧ್ವಜಗಳು ಮೆರವಣಿಗೆಯಲ್ಲಿ ರಾರಾಜಿಸಿದವು. ಮೆಕ್ಕಾ ಮದೀನಾ, ಜಾಮೀಯಾ ಮಸೀದಿ, ಕುತುಬ್ ಮಿನಾರ್ನ ಪ್ರತಿಕೃತಿಗಳು ಗಮನ ಸೆಳೆದವು.</p>.<p>ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಮೆರವಣಿಗೆಯು ಚಿತ್ತವಾಡ್ಗಿ ರಸ್ತೆ, ಶ್ರಮಿಕ ಭವನ, ರಾಮ ಟಾಕೀಸ್, ಮೂರಂಗಡಿ ವೃತ್ತ, ಬಸ್ ನಿಲ್ದಾಣ, ರೋಟರಿ ವೃತ್ತದ ಮೂಲಕ ಸಾಗಿತು. ಸಾವಿರಾರು ಜನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರಿಂದ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.</p>.<p>ಮೆರವಣಿಗೆಯು ಪಟ್ಟಣ ಪೊಲೀಸ್ ಠಾಣೆ ಬಳಿ ಸಾಗುವಾಗ ಹಿಂದೂ ಧರ್ಮೀಯರು ಬರಮಾಡಿಕೊಂಡು ಶುಭ ಕೋರಿದರು. ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಡಿವೈಎಸ್ಪಿ ರಘುಕುಮಾರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>