<p><strong>ಬೆಂಗಳೂರು</strong>: ‘ರಾಜ್ಯ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳು ತೆರವಾಗಿದ್ದು, ಆ ಸ್ಥಾನಗಳಿಗೆ ಅತಿಹಿಂದುಳಿದ ವರ್ಗ–ಸಮುದಾಯದ ಜನರನ್ನು ಆಯ್ಕೆ ಮಾಡಬೇಕು’ ಎಂದು ಆಲ್ ಇಂಡಿಯಾ ಬಿಎಸ್ಪಿ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಒತ್ತಾಯಿಸಿದ್ದಾರೆ.</p>.<p>ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಆ ಸ್ಥಾನಗಳಲ್ಲಿ ಈ ಹಿಂದೆ ಇದ್ದ ಪ್ರಬಲ ಪಕ್ಷ, ಜಾತಿ–ಸಮುದಾಯಗಳ ನಾಯಕರು ತಮ್ಮನ್ನು ಮತ್ತೆ ಆಯ್ಕೆ ಮಾಡುವಂತೆ ಒತ್ತಡ ಹೇರುತ್ತಿರುವುದರ ಬಗ್ಗೆ ವರದಿಯಾಗಿದೆ. ಆದರೆ ವಿಧಾನ ಪರಿಷತ್ತಿನಲ್ಲಿ ಈವರೆಗೂ ಪ್ರಾತಿನಿಧ್ಯ ಸಿಗದ ನೂರಾರು ಸಣ್ಣ ಸಮುದಾಯಗಳು ಇವೆ. ಆ ಸಮುದಾಯಗಳಿಗೆ ಅವಕಾಶ ನೀಡಬೇಕು’ ಎಂದು ಅವರು ಹೇಳಿದ್ದಾರೆ.</p>.<p>‘ಚುನಾವಣೆಗಳನ್ನು ಎದುರಿಸಲು ಹಣ ಬಲವಾಗಲಿ, ಜನ ಬಲವಾಗಲಿ ಈ ಸಮುದಾಯಗಳಿಗೆ ಇಲ್ಲ. ಅಂತಹ ಸಮುದಾಯದ ಜನರನ್ನು ನಾಮನಿರ್ದೇಶನ ಮಾಡಿದರೆ, ಸಾಮಾಜಿಕ ನ್ಯಾಯ ಒದಗಿಸಿದಂತಾಗುತ್ತದೆ. ಬಲಿಷ್ಠ ಸಮುದಾಯಗಳು, ಅತಿ ಹಿಂದುಳಿದ ಸಮುದಾಯಗಳಿಗೆ ಅವಕಾಶ ಮಾಡಿಕೊಡುವ ಉದಾರತೆ ತೋರಬೇಕು’ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳು ತೆರವಾಗಿದ್ದು, ಆ ಸ್ಥಾನಗಳಿಗೆ ಅತಿಹಿಂದುಳಿದ ವರ್ಗ–ಸಮುದಾಯದ ಜನರನ್ನು ಆಯ್ಕೆ ಮಾಡಬೇಕು’ ಎಂದು ಆಲ್ ಇಂಡಿಯಾ ಬಿಎಸ್ಪಿ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಒತ್ತಾಯಿಸಿದ್ದಾರೆ.</p>.<p>ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಆ ಸ್ಥಾನಗಳಲ್ಲಿ ಈ ಹಿಂದೆ ಇದ್ದ ಪ್ರಬಲ ಪಕ್ಷ, ಜಾತಿ–ಸಮುದಾಯಗಳ ನಾಯಕರು ತಮ್ಮನ್ನು ಮತ್ತೆ ಆಯ್ಕೆ ಮಾಡುವಂತೆ ಒತ್ತಡ ಹೇರುತ್ತಿರುವುದರ ಬಗ್ಗೆ ವರದಿಯಾಗಿದೆ. ಆದರೆ ವಿಧಾನ ಪರಿಷತ್ತಿನಲ್ಲಿ ಈವರೆಗೂ ಪ್ರಾತಿನಿಧ್ಯ ಸಿಗದ ನೂರಾರು ಸಣ್ಣ ಸಮುದಾಯಗಳು ಇವೆ. ಆ ಸಮುದಾಯಗಳಿಗೆ ಅವಕಾಶ ನೀಡಬೇಕು’ ಎಂದು ಅವರು ಹೇಳಿದ್ದಾರೆ.</p>.<p>‘ಚುನಾವಣೆಗಳನ್ನು ಎದುರಿಸಲು ಹಣ ಬಲವಾಗಲಿ, ಜನ ಬಲವಾಗಲಿ ಈ ಸಮುದಾಯಗಳಿಗೆ ಇಲ್ಲ. ಅಂತಹ ಸಮುದಾಯದ ಜನರನ್ನು ನಾಮನಿರ್ದೇಶನ ಮಾಡಿದರೆ, ಸಾಮಾಜಿಕ ನ್ಯಾಯ ಒದಗಿಸಿದಂತಾಗುತ್ತದೆ. ಬಲಿಷ್ಠ ಸಮುದಾಯಗಳು, ಅತಿ ಹಿಂದುಳಿದ ಸಮುದಾಯಗಳಿಗೆ ಅವಕಾಶ ಮಾಡಿಕೊಡುವ ಉದಾರತೆ ತೋರಬೇಕು’ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>