ರಸ್ತೆ, ಶಾಲೆ, ವಿದ್ಯುತ್ ಸಂಪರ್ಕ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವುದು. ಅರಣ್ಯ ಕಾಯ್ದೆಯ ನೆಪದಲ್ಲಿ ಅರಣ್ಯಾಧಿಕಾರಿಗಳ ಕಿರುಕುಳ ವಿರೋಧಿಸಿ ಬಾರಂಗಿ ಹಾಗೂ ಉರುಳುಗಲ್ಲು ಗ್ರಾಮಸ್ಥರು ಈ ನಿರ್ಧಾರಕ್ಕೆ ಬಂದಿದ್ದಾರೆ. ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಬೇಡಿಕೆ ಈಡೇರಿಸಿಲ್ಲ. ಹಾಗಾಗಿ, ಇಂತಹ ನಿರ್ಧಾರ ಅನಿವಾರ್ಯವಾಗಿದೆ ಎಂದು ಮುಖಂಡರು ಮಾಹಿತಿ ನೀಡಿದರು.