<p><strong>ಬೆಂಗಳೂರು:</strong> ಇದೇ 16ಕ್ಕೆ ನಿಗದಿಯಾಗಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಚುನಾವಣೆಯನ್ನು ಮುಂದಿನ ಆದೇಶದವರೆಗೆ ತಡೆ ಹಿಡಿಯುವಂತೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲರು ಆದೇಶಿಸಿದ್ದಾರೆ.</p>.<p>‘ಚುನಾವಣೆಯಲ್ಲಿ ವ್ಯಾಪಕ ಅಕ್ರಮಗಳನ್ನು ಎಸಗುವ ಸಾಧ್ಯತೆ ಇದೆ’ ಎಂದು ಕೆಂಪೇಗೌಡ ನರ್ಸಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಪಿ.ಅರ್ಪಿತಾ ಮತ್ತು ವೈದೇಹಿ ವೈದ್ಯಕೀಯ ಕಾಲೇಜಿನ ಡಾ.ಜಿ.ಟಿ.ಹರ್ಷ 2024 ಡಿಸೆಂಬರ್ 30ರಂದು ರಾಜ್ಯಪಾಲರಿಗೆ ದೂರು ನೀಡಿದ್ದರು.</p>.<p>‘ದೂರಿನ ಹಿನ್ನೆಲೆಯಲ್ಲಿ ಸಿಂಡಿಕೇಟ್ ಚುನಾವಣೆಯನ್ನು ಮುಂದಿನ ಆದೇಶದವರೆಗೆ ಅಮಾನತ್ತಿನಲ್ಲಿ ಇರಿಸುವಂತೆ ಆದೇಶಿಸಲಾಗಿದೆ’ ಎಂದು ರಾಜ್ಯಪಾಲರ ಸಚಿವಾಲಯ ತಿಳಿಸಿದೆ.</p>.<p>ಅಂತೆಯೇ, '15 ದಿನಗಳ ಒಳಗಾಗಿ ದೂರಿಗೆ ಸಂಬಂಧಿಸಿದಂತೆ ಸೂಕ್ತ ವಿವರಣೆ ನೀಡಿ’ ಎಂದು ಎದುರುದಾರರಿಗೆ ಸೂಚಿಸಲಾಗಿದೆ. ಆರ್ಜಿಯುಎಚ್ಎಸ್ನ 10ನೇ ಸೆನೆಟ್ ರಚನೆಗಾಗಿ, ಸಿಂಡಿಕೇಟ್ ಸದಸ್ಯರ ಆಯ್ಕೆ ಮಾಡಲು ಇದೇ 16ರಂದು ಚುನಾವಣೆ ನಿಗದಿಪಡಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇದೇ 16ಕ್ಕೆ ನಿಗದಿಯಾಗಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಚುನಾವಣೆಯನ್ನು ಮುಂದಿನ ಆದೇಶದವರೆಗೆ ತಡೆ ಹಿಡಿಯುವಂತೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲರು ಆದೇಶಿಸಿದ್ದಾರೆ.</p>.<p>‘ಚುನಾವಣೆಯಲ್ಲಿ ವ್ಯಾಪಕ ಅಕ್ರಮಗಳನ್ನು ಎಸಗುವ ಸಾಧ್ಯತೆ ಇದೆ’ ಎಂದು ಕೆಂಪೇಗೌಡ ನರ್ಸಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಪಿ.ಅರ್ಪಿತಾ ಮತ್ತು ವೈದೇಹಿ ವೈದ್ಯಕೀಯ ಕಾಲೇಜಿನ ಡಾ.ಜಿ.ಟಿ.ಹರ್ಷ 2024 ಡಿಸೆಂಬರ್ 30ರಂದು ರಾಜ್ಯಪಾಲರಿಗೆ ದೂರು ನೀಡಿದ್ದರು.</p>.<p>‘ದೂರಿನ ಹಿನ್ನೆಲೆಯಲ್ಲಿ ಸಿಂಡಿಕೇಟ್ ಚುನಾವಣೆಯನ್ನು ಮುಂದಿನ ಆದೇಶದವರೆಗೆ ಅಮಾನತ್ತಿನಲ್ಲಿ ಇರಿಸುವಂತೆ ಆದೇಶಿಸಲಾಗಿದೆ’ ಎಂದು ರಾಜ್ಯಪಾಲರ ಸಚಿವಾಲಯ ತಿಳಿಸಿದೆ.</p>.<p>ಅಂತೆಯೇ, '15 ದಿನಗಳ ಒಳಗಾಗಿ ದೂರಿಗೆ ಸಂಬಂಧಿಸಿದಂತೆ ಸೂಕ್ತ ವಿವರಣೆ ನೀಡಿ’ ಎಂದು ಎದುರುದಾರರಿಗೆ ಸೂಚಿಸಲಾಗಿದೆ. ಆರ್ಜಿಯುಎಚ್ಎಸ್ನ 10ನೇ ಸೆನೆಟ್ ರಚನೆಗಾಗಿ, ಸಿಂಡಿಕೇಟ್ ಸದಸ್ಯರ ಆಯ್ಕೆ ಮಾಡಲು ಇದೇ 16ರಂದು ಚುನಾವಣೆ ನಿಗದಿಪಡಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>