ಈ ಅರ್ಜಿ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಚುನಾವಣಾ ಸಮಯದಲ್ಲಿ ಯಾವುದೇ ಆಧಾರದಲ್ಲಿ ನಾಮಪತ್ರ ತಿರಸ್ಕಾರವಾದರೂ ಚುನಾವಣೆ ಪ್ರಕ್ರಿಯೆಯ ಮಧ್ಯದ ಅವಧಿಯಲ್ಲಿ ಅಂತಹ ಅರ್ಜಿಗಳನ್ನು ನ್ಯಾಯಾಲಯ ಮಾನ್ಯ ಮಾಡಲಾಗದು. ಬೇಕಿದ್ದರೆ ಅರ್ಜಿದಾರರು ಚುನಾವಣೆಯ ನಂತರ ಚುನಾವಣಾ ತಕರಾರು ಅರ್ಜಿ ಸಲ್ಲಿಸಿ ಕಾನೂನು ಪ್ರಕಾರ ಪರಿಹಾರ ಪಡೆದುಕೊಳ್ಳಬಹುದಾಗಿದೆ’ ಎಂದು ಆದೇಶಿಸಿದೆ.