‘ಸಮಿತಿಯ ಶಿಫಾರಸುಗಳ ಅನ್ವಯ, ಯುಜಿಸಿ ಮಾರ್ಗಸೂಚಿಯಂತೆ, ವಿಡಿಯೊ ಮಾಡುವ ಮೂಲಕ ಸಂದರ್ಶನ ನಡೆಸಿ ನೇಮಕಾತಿ ಪ್ರಕ್ರಿಯೆ ಮುಗಿಸಬೇಕು ಎಂದು ಮಾರ್ಚ್ 8ರಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ನೀತಿ ಸಂಹಿತೆ ಮುಗಿಯುವವರೆಗೂ ನೇಮಕಾತಿ ಆದೇಶ ಪತ್ರವನ್ನು ನೀಡುವುದಿಲ್ಲ’ ಎಂದು ಕುಲಪತಿ ಎಂ.ಎಸ್.ಸುಭಾಷ್ ಸ್ಪಷ್ಟನೆ ಪ್ರಕಟಿಸಿದ್ದಾರೆ. ಆದರೆ ಅವರು ಪ್ರತಿಕ್ರಿಯೆಗೆ ಸಿಗಲಿಲ್ಲ.