’ಸರ್ಕಾರಿ ಶಾಲಾ–ಕಾಲೇಜುಗಳಿಗೆ ಉಚಿತ ವಿದ್ಯುತ್, ನೀರು ಪೂರೈಸುವ ಆದೇಶ ಅತ್ಯಂತ ಮಹತ್ವದ್ದು. ಇದರಿಂದ ಉಳಿತಾಯವಾಗುವ ಹಣವನ್ನು ಶಾಲೆಗಳ ಇತರೆ ಅಭಿವೃದ್ಧಿ ಕೆಲಸಗಳಿಗೆ, ಮಕ್ಕಳ ಅಗತ್ಯಕ್ಕೆ ಬಳಸಿಕೊಳ್ಳಲು ನೆರವಾಗಲಿದೆ. ಎಲ್ಲ ಶಿಕ್ಷಕರು, ಉಪನ್ಯಾಸಕರು ವಿದ್ಯುತ್, ನೀರಿನ ಮಿತ ಬಳಕೆಗೆ ಆದ್ಯತೆ ನೀಡಬೇಕು‘ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.