ರಾಜ್ಯದ ಜನರಿಗೆ ವಿದ್ಯುತ್ ದರ ಏರಿಕೆ ಬಿಸಿ ತಟ್ಟತ್ತಿದೆ. ಸರ್ಕಾರ ಒಂದು ಕೈನಲ್ಲಿ ಕೊಟ್ಟು ಮತ್ತೊಂದು ಕೈನಲ್ಲಿ ಕಿತ್ತುಕೊಳ್ತಿದೆಯಾ ಎನ್ನುವ ಆರೋಪ ಕೂಡ ಕೇಳಿ ಬರುತ್ತಿದೆ. ಆದರೆ ಬೆಲೆ ಏರಿಕೆ ಮಾಡಿದ್ದು ನಾವು ಅಲ್ಲ ಅದು ಬಿಜೆಪಿ ಸರ್ಕಾರ ಎನ್ನುವುದು ಕಾಂಗ್ರೆಸ್ ವಾದ. ವಿದ್ಯುತ್ ದರ ಏರಿಕೆಯಿಂದ ಜನರು ಹೆದರುವ ಅವಶ್ಯಕತೆಯಿಲ್ಲ ಎಂದು ಬೆಸ್ಕಾಂ ಅಧಿಕಾರಿ ಹೇಳುತ್ತಾರೆ.