ನೆಲ್ಯಹುದಿಕೇರಿಯ ಅಭ್ಯತ್ ಮಂಗಲ, ಅತ್ತಿಮಂಗಲ ಸೇರಿದಂತೆ ವಿವಿಧ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಕಾಡಾನೆ ಹಿಂಡುಗಳು ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದು, ದಾಂದಲೆ ನಡೆಸುತ್ತಿದ್ದವು. ಮರಿ ಆನೆ, ಸಲಗ ಸೇರಿದಂತೆ ಕಾಡಾನೆಗಳ ಹಿಂಡು ದಿನಂಪ್ರತಿ ತೋಟದಿಂದ ತೋಟಕ್ಕೆ ಲಗ್ಗೆ ಇಟ್ಟು ಬೆಳೆ ನಾಶಪಡಿಸುತ್ತಿದ್ದು, ಜನರ ಮೇಲೂ ದಾಳಿಗೆ ಮುಂದಾಗುತ್ತಿತ್ತು. ಇದರಿಂದಾಗಿ ಇತ್ತೀಚೆಗೆ ಅರಣ್ಯ ಇಲಾಖೆಯು ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯನ್ನು ನಡೆಸಿ, ಕಾಡಾನೆ ಹಿಂಡನ್ನು ದುಬಾರೆ ಮೀಸಲು ಅರಣ್ಯಕ್ಕೆ ಅಟ್ಟಲಾಗಿತ್ತು. ಆದರೆ, ಕಾಡಾನೆಗಳು ಅರಣ್ಯದಿಂದ ಮರಳಿ ಕಾಫಿ ತೋಟಗಳಿಗೆ ಬರುತ್ತಿದ್ದು, ಬೆಳೆಗಾರರು ಹಾಗೂ ಗ್ರಾಮಸ್ಥರು ಕಂಗಾಲಾಗಿದ್ದರು.