ಎಚ್.ಡಿ.ಕೋಟೆ: ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಪಟ್ಟಣ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ದಂತ ವಶಕ್ಕೆ ಪಡೆದಿದ್ದಾರೆ.
ತಾಲ್ಲೂಕಿನ ಹ್ಯಾಂಡ್ ಪೋಸ್ಟ್ ಬಳಿ ಆನೆ ದಂತ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದರು. ಕೊಳ್ಳೇಗಾಲ ತಾಲ್ಲೂಕು ಹನೂರಿನ ಕೆ.ವಿಜಯ್, ಕಿರಣ್ ರಾವ್, ಮಹದೇವಸ್ವಾಮಿ, ಪ್ರದೀಶ, ಹರೀಶ್ ಬಂಧಿತರು.