ಬುಧವಾರ ವಿರಾಜಪೇಟೆ ಹಾಗೂ ಕಣ್ಣಂಗಾಲ ಗ್ರಾಮದಲ್ಲಿ ಒಂದೇ ದಿನ ಎರಡು ಕಡೆ ಕಾಡಾನೆ ದಾಳಿ ಮಾಡಿದ್ದು, ಇದೀಗ ಮತ್ತೊಂದು ಪ್ರಕರಣ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರ ಸೇರಿದಂತೆ ಸುತ್ತಮುತ್ತಲ ಭಾಗದಲ್ಲಿ ಕಾಡಾನೆ ಉಪಟಳ ಮಿತಿಮೀರಿದ್ದು, ಸಾರ್ವಜನಿಕರು ಭಯದಲ್ಲೇ ದಿನಕಳೆಯುವ ವಾತಾವರಣ ನಿರ್ಮಾಣವಾಗಿದೆ.