<p><strong>ರಾಮನಗರ: </strong>ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಹೋಬಳಿಯ ಚಿಕ್ಕಗೊಂಡಹಳ್ಳಿ ಸಮೀಪದ ಕೆರೆಯಲ್ಲಿ ನೀರು ಕುಡಿ<br />ಯಲು ಬಂದ ಎರಡು ಕಾಡಾನೆಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದು, ಪ್ರಕರಣ ಶನಿವಾರ ಗೊತ್ತಾಗಿದೆ.</p>.<p>ಎರಡು-ಮೂರು ದಿನಗಳ ಹಿಂದೆಯೇ ಈ ಘಟನೆ ನಡೆದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p class="Subhead"><strong>ಆನೆಗಳು ಬಲಿಯಾಗಿದ್ದು ಹೇಗೆ?: </strong>ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯ ಕೋಡಿಹಳ್ಳಿ ವನ್ಯಜೀವಿ ವಲಯಕ್ಕೆ ಸೇರಿರುವ ಈ ಅರಣ್ಯ ಪ್ರದೇಶದಲ್ಲಿ ಕೆರೆ ಇದೆ. ಇದರ ಮಧ್ಯೆ 11 ಕೆ.ವಿ. ಸಾಮರ್ಥ್ಯದ ವಿದ್ಯುತ್ ತಂತಿಗಳು ಹಾದು ಹೋಗಿವೆ.</p>.<p>ವಿದ್ಯುತ್ ತಂತಿಗಳು ಕೆರೆಯ ನೀರಿನಲ್ಲಿ ಮುಳುಗಿವೆ. ಇದರಿಂದಾಗಿ ನೀರಿನಲ್ಲಿ ವಿದ್ಯುತ್ ಪ್ರವಹಿಸಿದೆ. ನೀರಿನ ಸಂಪರ್ಕಕ್ಕೆ ಬಂದ ಕಾಡಾನೆಗಳು ವಿದ್ಯುತ್ ಶಾಕ್ನಿಂದಾಗಿ ಸಾವನ್ನಪ್ಪಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.</p>.<p>ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಸಿಸಿಸಿಎಫ್ ಅಜಯ್ ಮಿಶ್ರಾ, ಬನ್ನೇರುಘಟ್ಟ ಡಿಸಿಎಫ್ ಪ್ರಶಾಂತ್, ಎಸಿಎಫ್ ಪ್ರಶಾಂತ್ ಅವರನ್ನು ಒಳಗೊಂಡ ಅಧಿಕಾರಿಗಳ ತಂಡವುಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು.</p>.<p>ಘಟನೆಗೆ ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯ ಕಾರಣವಾಗಿದ್ದು, ಅವರ ವಿರುದ್ಧ ವನ್ಯಜೀವಿ ಸಂರಕ್ಷಣೆ ಕಾಯ್ದೆಯ ಅಡಿ ಪ್ರಕರಣ ದಾಖಲಿಸುವುದಾಗಿಯೂ ಅಧಿಕಾರಿಗಳು ಪ್ರತಿಕ್ರಿಯಿಸಿದರು. ಎರಡೂ ಆನೆಗಳ ಕಳೇಬರಗಳು ಕೆರೆಯ ನಡುವೆ ಇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಹೋಬಳಿಯ ಚಿಕ್ಕಗೊಂಡಹಳ್ಳಿ ಸಮೀಪದ ಕೆರೆಯಲ್ಲಿ ನೀರು ಕುಡಿ<br />ಯಲು ಬಂದ ಎರಡು ಕಾಡಾನೆಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದು, ಪ್ರಕರಣ ಶನಿವಾರ ಗೊತ್ತಾಗಿದೆ.</p>.<p>ಎರಡು-ಮೂರು ದಿನಗಳ ಹಿಂದೆಯೇ ಈ ಘಟನೆ ನಡೆದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p class="Subhead"><strong>ಆನೆಗಳು ಬಲಿಯಾಗಿದ್ದು ಹೇಗೆ?: </strong>ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯ ಕೋಡಿಹಳ್ಳಿ ವನ್ಯಜೀವಿ ವಲಯಕ್ಕೆ ಸೇರಿರುವ ಈ ಅರಣ್ಯ ಪ್ರದೇಶದಲ್ಲಿ ಕೆರೆ ಇದೆ. ಇದರ ಮಧ್ಯೆ 11 ಕೆ.ವಿ. ಸಾಮರ್ಥ್ಯದ ವಿದ್ಯುತ್ ತಂತಿಗಳು ಹಾದು ಹೋಗಿವೆ.</p>.<p>ವಿದ್ಯುತ್ ತಂತಿಗಳು ಕೆರೆಯ ನೀರಿನಲ್ಲಿ ಮುಳುಗಿವೆ. ಇದರಿಂದಾಗಿ ನೀರಿನಲ್ಲಿ ವಿದ್ಯುತ್ ಪ್ರವಹಿಸಿದೆ. ನೀರಿನ ಸಂಪರ್ಕಕ್ಕೆ ಬಂದ ಕಾಡಾನೆಗಳು ವಿದ್ಯುತ್ ಶಾಕ್ನಿಂದಾಗಿ ಸಾವನ್ನಪ್ಪಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.</p>.<p>ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಸಿಸಿಸಿಎಫ್ ಅಜಯ್ ಮಿಶ್ರಾ, ಬನ್ನೇರುಘಟ್ಟ ಡಿಸಿಎಫ್ ಪ್ರಶಾಂತ್, ಎಸಿಎಫ್ ಪ್ರಶಾಂತ್ ಅವರನ್ನು ಒಳಗೊಂಡ ಅಧಿಕಾರಿಗಳ ತಂಡವುಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು.</p>.<p>ಘಟನೆಗೆ ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯ ಕಾರಣವಾಗಿದ್ದು, ಅವರ ವಿರುದ್ಧ ವನ್ಯಜೀವಿ ಸಂರಕ್ಷಣೆ ಕಾಯ್ದೆಯ ಅಡಿ ಪ್ರಕರಣ ದಾಖಲಿಸುವುದಾಗಿಯೂ ಅಧಿಕಾರಿಗಳು ಪ್ರತಿಕ್ರಿಯಿಸಿದರು. ಎರಡೂ ಆನೆಗಳ ಕಳೇಬರಗಳು ಕೆರೆಯ ನಡುವೆ ಇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>