<p><strong>ಬೆಂಗಳೂರು:</strong> ಆರ್ಥಿಕ ಮತ್ತು ತಾಂತ್ರಿಕ ಸಾಮರ್ಥ್ಯ ಇಲ್ಲದ ಏಳು ಗುತ್ತಿಗೆದಾರರಿಗೆ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಶೇ 67ರಷ್ಟು ಕಾಮಗಾರಿಗಳನ್ನು ನೀಡಿದ್ದರಿಂದಲೇ ಅನುಷ್ಠಾನ ವಿಳಂಬವಾಗಿದೆ ಎಂದು ಮಹಾಲೇಖಪಾಲರ ವರದಿ ಹೇಳಿದೆ.</p>.<p>ವಿಧಾನಸಭೆಯಲ್ಲಿ ಗುರುವಾರ ಮಂಡಿಸಲಾದ ‘ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನದ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆ’ ವರದಿಯಲ್ಲಿ ಈ ಆಕ್ಷೇಪ ಎತ್ತಲಾಗಿದೆ.</p>.<p>₹14,805 ಕೋಟಿ ಮೊತ್ತದ 18 ಕಾಮಗಾರಿಗಳನ್ನು ಏಳು ಕಂಪನಿಗಳಿಗೆ, ಒಂದೇ ಕಂಪನಿಗೆ ₹5,216 ಕೋಟಿ ಮೊತ್ತದ 11 ಕಾಮಗಾರಿಗಳ ಗುತ್ತಿಗೆಯನ್ನು ನಿಯಮ ಉಲ್ಲಂಘಿಸಿ ನೀಡಲಾಗಿದೆ ಎಂದು ಸಿಎಜಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.</p>.<p>ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 16, ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ 9 ಮತ್ತು ಹಿಂದಿನ ಬಿಜೆಪಿ ಸರ್ಕಾರದಲ್ಲಿ 4 ಕಾಮಗಾರಿಗಳ ಗುತ್ತಿಗೆ ನೀಡಲಾಗಿದೆ.</p>.<p>ಪ್ರಮಾಣಿತ ಟೆಂಡರ್ ದಾಖಲೆಗಳನ್ನು ಅಳವಡಿಸಿಕೊಳ್ಳದೆ ಕಾಮಗಾರಿಗಳ ಗುತ್ತಿಗೆಯನ್ನು ತರಾತುರಿಯಲ್ಲಿ ನೀಡಲಾಗಿದೆ. ಗುತ್ತಿಗೆ ನೀಡುವಾಗ ಗುತ್ತಿಗೆದಾರರ ಆರ್ಥಿಕ ಸಾಮರ್ಥ್ಯವನ್ನು ಪರಿಗಣಿಸಿಲ್ಲ. ಪರಿಣಾಮವಾಗಿ ಗುತ್ತಿಗೆದಾರರು ಹಣಕಾಸನ್ನು ಹೊಂದಿಸಿಕೊಳ್ಳಲಾಗದೆ ಕಾಮಗಾರಿಗಳನ್ನು ವಿಳಂಬ ಮಾಡಿದ್ದಾರೆ ಎಂದು ಸಿಎಜಿ ಹೇಳಿದೆ.</p>.<p>ಡಿಪಿಆರ್ ಸಿದ್ಧಪಡಿಸುವುದರಿಂದ ಆರಂಭವಾಗಿ, ಕಾಮಗಾರಿ ಗುತ್ತಿಗೆ ನೀಡುವಲ್ಲಿಯೂ ಗುತ್ತಿಗೆದಾರರಿಗೆ ತಾಂತ್ರಿಕ ಪರಿಣತಿ ಇಲ್ಲದಿರುವುದನ್ನು ಮತ್ತು ಅನನುಭವವನ್ನು ಕಡೆಗಣಿಸಲಾಗಿದೆ. ಹೀಗಾಗಿ ಯೋಜನೆಯ ವಿನ್ಯಾಸವನ್ನು ಪದೇ ಪದೇ ಬದಲಿಸಬೇಕಾಯಿತು. ಜತೆಗೆ ಕೆಲವು ಕಾಮಗಾರಿಗಳು ಸಂಪೂರ್ಣ ವ್ಯರ್ಥವಾದವು ಎಂದು ವರದಿಯಲ್ಲಿ ವಿವರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆರ್ಥಿಕ ಮತ್ತು ತಾಂತ್ರಿಕ ಸಾಮರ್ಥ್ಯ ಇಲ್ಲದ ಏಳು ಗುತ್ತಿಗೆದಾರರಿಗೆ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಶೇ 67ರಷ್ಟು ಕಾಮಗಾರಿಗಳನ್ನು ನೀಡಿದ್ದರಿಂದಲೇ ಅನುಷ್ಠಾನ ವಿಳಂಬವಾಗಿದೆ ಎಂದು ಮಹಾಲೇಖಪಾಲರ ವರದಿ ಹೇಳಿದೆ.</p>.<p>ವಿಧಾನಸಭೆಯಲ್ಲಿ ಗುರುವಾರ ಮಂಡಿಸಲಾದ ‘ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನದ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆ’ ವರದಿಯಲ್ಲಿ ಈ ಆಕ್ಷೇಪ ಎತ್ತಲಾಗಿದೆ.</p>.<p>₹14,805 ಕೋಟಿ ಮೊತ್ತದ 18 ಕಾಮಗಾರಿಗಳನ್ನು ಏಳು ಕಂಪನಿಗಳಿಗೆ, ಒಂದೇ ಕಂಪನಿಗೆ ₹5,216 ಕೋಟಿ ಮೊತ್ತದ 11 ಕಾಮಗಾರಿಗಳ ಗುತ್ತಿಗೆಯನ್ನು ನಿಯಮ ಉಲ್ಲಂಘಿಸಿ ನೀಡಲಾಗಿದೆ ಎಂದು ಸಿಎಜಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.</p>.<p>ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 16, ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ 9 ಮತ್ತು ಹಿಂದಿನ ಬಿಜೆಪಿ ಸರ್ಕಾರದಲ್ಲಿ 4 ಕಾಮಗಾರಿಗಳ ಗುತ್ತಿಗೆ ನೀಡಲಾಗಿದೆ.</p>.<p>ಪ್ರಮಾಣಿತ ಟೆಂಡರ್ ದಾಖಲೆಗಳನ್ನು ಅಳವಡಿಸಿಕೊಳ್ಳದೆ ಕಾಮಗಾರಿಗಳ ಗುತ್ತಿಗೆಯನ್ನು ತರಾತುರಿಯಲ್ಲಿ ನೀಡಲಾಗಿದೆ. ಗುತ್ತಿಗೆ ನೀಡುವಾಗ ಗುತ್ತಿಗೆದಾರರ ಆರ್ಥಿಕ ಸಾಮರ್ಥ್ಯವನ್ನು ಪರಿಗಣಿಸಿಲ್ಲ. ಪರಿಣಾಮವಾಗಿ ಗುತ್ತಿಗೆದಾರರು ಹಣಕಾಸನ್ನು ಹೊಂದಿಸಿಕೊಳ್ಳಲಾಗದೆ ಕಾಮಗಾರಿಗಳನ್ನು ವಿಳಂಬ ಮಾಡಿದ್ದಾರೆ ಎಂದು ಸಿಎಜಿ ಹೇಳಿದೆ.</p>.<p>ಡಿಪಿಆರ್ ಸಿದ್ಧಪಡಿಸುವುದರಿಂದ ಆರಂಭವಾಗಿ, ಕಾಮಗಾರಿ ಗುತ್ತಿಗೆ ನೀಡುವಲ್ಲಿಯೂ ಗುತ್ತಿಗೆದಾರರಿಗೆ ತಾಂತ್ರಿಕ ಪರಿಣತಿ ಇಲ್ಲದಿರುವುದನ್ನು ಮತ್ತು ಅನನುಭವವನ್ನು ಕಡೆಗಣಿಸಲಾಗಿದೆ. ಹೀಗಾಗಿ ಯೋಜನೆಯ ವಿನ್ಯಾಸವನ್ನು ಪದೇ ಪದೇ ಬದಲಿಸಬೇಕಾಯಿತು. ಜತೆಗೆ ಕೆಲವು ಕಾಮಗಾರಿಗಳು ಸಂಪೂರ್ಣ ವ್ಯರ್ಥವಾದವು ಎಂದು ವರದಿಯಲ್ಲಿ ವಿವರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>