ವಿಧಾನಸಭೆಯಲ್ಲಿ ಬುಧವಾರ ನಿಯಮ 69ರಡಿ ವಿಷಯ ಪ್ರಸ್ತಾಪಿಸಿದ ಜೆಡಿಎಸ್ನ ಕೆ.ಎಸ್. ಲಿಂಗೇಶ್, ಕೆ. ಮಹದೇವ, ಎಚ್.ಕೆ. ಕುಮಾರಸ್ವಾಮಿ ಮತ್ತು ಎ.ಟಿ. ರಾಮಸ್ವಾಮಿ, ‘ಜನವಸತಿ ಪ್ರದೇಶಗಳಿಗೆ ನುಗ್ಗಿ ತೊಂದರೆ ನೀಡುತ್ತಿರುವ ಆನೆಗಳನ್ನು ಸ್ಥಳಾಂತರಿಸಬೇಕು. ಆನೆಗಳು ನಾಡಿನೊಳಕ್ಕೆ ಬರದಂತೆ ತಡೆಯಬೇಕು. ಪ್ರಾಣಹಾನಿ ಮತ್ತು ಬೆಳೆಹಾನಿಗೆ ಹೆಚ್ಚಿನ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.