ರಾಜ್ಯದ ಎಲ್ಲ ಕೆರೆ ಕಟ್ಟೆಗಳು, ಕಲ್ಯಾಣಿಗಳನ್ನು ನರೇಗಾ ಅಡಿಯಲ್ಲಿ ಅಭಿವೃದ್ಧಿ ಮಾಡಲಾಗುತ್ತಿದ್ದು,
ಇಡೀ ದೇಶದಲ್ಲಿ ನರೇಗಾ ಕಾಮಗಾರಿ ಮುಖಾಂತರ ಕರ್ನಾಟಕ ದೇಶದಲ್ಲಿಯೇ ಮೊದಲನೇ ಸ್ಥಾನದಲ್ಲಿದೆ. ನರೇಗಾದಡಿ ದುಡಿಯುವುದಕ್ಕೆ ಕೂಲಿ ಎಂದು ಹೇಳುವುದಕ್ಕೆ ಇಷ್ಟ ಪಡುವುದಿಲ್ಲ. ಯುದ್ಧ ಭೂಮಿಯಲ್ಲಿ ಸೈನಿಕರು ಕರ್ತವ್ಯ ನಿರ್ವಹಿಸುವ ರೀತಿಯಲ್ಲಿಯೇ ಸಮಾಜದಲ್ಲಿ ಬಡವರು ಕೂಡ ಸೈನಿಕರ ರೂಪದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೆಮ್ಮೆಯಿಂದ ಹೇಳಬಹುದು ಎಂದರು.