<p><strong>ಬೆಂಗಳೂರು</strong>: ಚಿತ್ರದುರ್ಗ ಮತ್ತು ತುಮಕೂರಿನ ಕೆಲವಡೆ ಕಾಡುಗೊಲ್ಲ ಸಮುದಾಯದವರು ಮುಟ್ಟಾದ ಮತ್ತು ಬಾಣಂತಿ ಹೆಣ್ಣುಮಕ್ಕಳನ್ನು ಮನೆಯಿಂದ ಹೊರಗೆ ಇರಿಸುತ್ತಿದ್ದು, ಈ ಪದ್ಧತಿಯನ್ನು ನಿವಾರಿಸಲು ಅಗತ್ಯ ಕ್ರಮ ತೆಗೆದುಕೊಳ್ಳಿ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.</p>.<p>ತುಮಕೂರು, ಬೆಂಗಳೂರು ಉತ್ತರ, ಕೋಲಾರ, ಚಿತ್ರದುರ್ಗದ ಕೆಲವು ಕಾಡುಗೊಲ್ಲರಹಟ್ಟಿಗಳಲ್ಲಿ ಈ ಪದ್ಧತಿ ಆಚರಣೆಯಲ್ಲಿ ಇರುವುದರ ಸಂಬಂಧ ಮಹಿಳಾ ಆಯೋಗಕ್ಕೆ ದೂರುಗಳು ಬಂದಿದ್ದವು. ಈ ಬಗ್ಗೆ ಪರಿಶೀಲನೆ ನಡೆಸುವ ಉದ್ದೇಶದಿಂದ ಆಯೋಗದ ಅಧ್ಯಕ್ಷ ನಾಗಲಕ್ಷ್ಮೀ ಚೌಧರಿ ಅವರು ಇದೇ ಡಿಸೆಂಬರ್ನಲ್ಲಿ ಹಲವು ಕಾಡುಗೊಲ್ಲರಹಟ್ಟಿಗಳಿಗೆ ಭೇಟಿ ನೀಡಿದ್ದರು. ತುಮಕೂರಿನ ಶಿರಾ ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿಯ ಬಂಗಾರಹಟ್ಟಿ, ಚಿತ್ರದುರ್ಗದ ಕೆಲವು ಗ್ರಾಮಗಳಲ್ಲಿ ಈ ಪದ್ಧತಿ ಇನ್ನೂ ಚಾಲ್ತಿಯಲ್ಲಿ ಇರುವುದು ಭೇಟಿಯ ವೇಳೆ ಪತ್ತೆಯಾಗಿತ್ತು. </p>.<p>‘ಈ ಜಿಲ್ಲೆಗಳಲ್ಲಿ ಕಾಡುಗೊಲ್ಲ ಸಮುದಾಯದವರು ಇರುವ ಪ್ರದೇಶಗಳಿಗೆ ಈಚೆಗೆ ಭೇಟಿ ನೀಡಿದ್ದೆ. ಕೆಲವೆಡೆ ಈಗಲೂ ಬಾಣಂತಿ ಮತ್ತು ಮುಟ್ಟಾದ ಹೆಣ್ಣುಮಕ್ಕಳನ್ನು ಮನೆಯಿಂದ ಹೊರಗೆ, ಗುಡಿಸಿಲಿನಲ್ಲಿ ಇರಿಸುತ್ತಾರೆ. ಮೂಢನಂಬಿಕೆಯ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನು ಸ್ಥಳೀಯರು ಹಂಚಿಕೊಂಡರು’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ಎರಡೂ ಜಿಲ್ಲೆಗಳ ಹಲವು ಗೊಲ್ಲರಹಟ್ಟಿಗಳಲ್ಲಿ ಇದ್ದ ಇಂತಹ ಪದ್ಧತಿಯನ್ನು ಜಾಗೃತಿ ಕಾರ್ಯಕ್ರಮಗಳ ಮೂಲಕ ನಿವಾರಿಸಲಾಗಿದೆ. ಆದರೆ, ಕೆಲವು ಗೊಲ್ಲರಹಟ್ಟಿಗಳಲ್ಲಿ ಈಗಲೂ ಇದು ಚಾಲ್ತಿಯಲ್ಲಿದೆ. ಅಂತಹ ಗೊಲ್ಲರಹಟ್ಟಿಗಳಿಗೆ ಭೇಟಿ ನೀಡಿ, ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕಿದೆ’ ಎಂದು ಪತ್ರದಲ್ಲಿ ಕೋರಿದ್ದಾರೆ.</p>.<p>‘ರಾಜ್ಯ ಸರ್ಕಾರದ ವಿವಿಧ ಕಾರ್ಯಕ್ರಮಗಳಡಿಯಲ್ಲಿ ಲಭ್ಯವಿರುವ ಸವಲತ್ತುಗಳ ಬಗ್ಗೆ ಈ ಹೆಣ್ಣುಮಕ್ಕಳಿಗೆ ಮಾಹಿತಿ ನೀಡಿ, ಅವುಗಳ ಪ್ರಯೋಜನ ಪಡೆದುಕೊಳ್ಳುವಂತೆ ಮಾಡಬೇಕಿದೆ. ಈ ಮೂಲಕ, ಇಂತಹ ಅನಾಗರಿಕ ಪದ್ಧತಿಗಳಿಂದ ಅವರನ್ನು ಹೊರತರಲು ಸಾಧ್ಯವಾಗಲಿದೆ’ ಎಂದಿದ್ದಾರೆ.</p>
<p><strong>ಬೆಂಗಳೂರು</strong>: ಚಿತ್ರದುರ್ಗ ಮತ್ತು ತುಮಕೂರಿನ ಕೆಲವಡೆ ಕಾಡುಗೊಲ್ಲ ಸಮುದಾಯದವರು ಮುಟ್ಟಾದ ಮತ್ತು ಬಾಣಂತಿ ಹೆಣ್ಣುಮಕ್ಕಳನ್ನು ಮನೆಯಿಂದ ಹೊರಗೆ ಇರಿಸುತ್ತಿದ್ದು, ಈ ಪದ್ಧತಿಯನ್ನು ನಿವಾರಿಸಲು ಅಗತ್ಯ ಕ್ರಮ ತೆಗೆದುಕೊಳ್ಳಿ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.</p>.<p>ತುಮಕೂರು, ಬೆಂಗಳೂರು ಉತ್ತರ, ಕೋಲಾರ, ಚಿತ್ರದುರ್ಗದ ಕೆಲವು ಕಾಡುಗೊಲ್ಲರಹಟ್ಟಿಗಳಲ್ಲಿ ಈ ಪದ್ಧತಿ ಆಚರಣೆಯಲ್ಲಿ ಇರುವುದರ ಸಂಬಂಧ ಮಹಿಳಾ ಆಯೋಗಕ್ಕೆ ದೂರುಗಳು ಬಂದಿದ್ದವು. ಈ ಬಗ್ಗೆ ಪರಿಶೀಲನೆ ನಡೆಸುವ ಉದ್ದೇಶದಿಂದ ಆಯೋಗದ ಅಧ್ಯಕ್ಷ ನಾಗಲಕ್ಷ್ಮೀ ಚೌಧರಿ ಅವರು ಇದೇ ಡಿಸೆಂಬರ್ನಲ್ಲಿ ಹಲವು ಕಾಡುಗೊಲ್ಲರಹಟ್ಟಿಗಳಿಗೆ ಭೇಟಿ ನೀಡಿದ್ದರು. ತುಮಕೂರಿನ ಶಿರಾ ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿಯ ಬಂಗಾರಹಟ್ಟಿ, ಚಿತ್ರದುರ್ಗದ ಕೆಲವು ಗ್ರಾಮಗಳಲ್ಲಿ ಈ ಪದ್ಧತಿ ಇನ್ನೂ ಚಾಲ್ತಿಯಲ್ಲಿ ಇರುವುದು ಭೇಟಿಯ ವೇಳೆ ಪತ್ತೆಯಾಗಿತ್ತು. </p>.<p>‘ಈ ಜಿಲ್ಲೆಗಳಲ್ಲಿ ಕಾಡುಗೊಲ್ಲ ಸಮುದಾಯದವರು ಇರುವ ಪ್ರದೇಶಗಳಿಗೆ ಈಚೆಗೆ ಭೇಟಿ ನೀಡಿದ್ದೆ. ಕೆಲವೆಡೆ ಈಗಲೂ ಬಾಣಂತಿ ಮತ್ತು ಮುಟ್ಟಾದ ಹೆಣ್ಣುಮಕ್ಕಳನ್ನು ಮನೆಯಿಂದ ಹೊರಗೆ, ಗುಡಿಸಿಲಿನಲ್ಲಿ ಇರಿಸುತ್ತಾರೆ. ಮೂಢನಂಬಿಕೆಯ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನು ಸ್ಥಳೀಯರು ಹಂಚಿಕೊಂಡರು’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ಎರಡೂ ಜಿಲ್ಲೆಗಳ ಹಲವು ಗೊಲ್ಲರಹಟ್ಟಿಗಳಲ್ಲಿ ಇದ್ದ ಇಂತಹ ಪದ್ಧತಿಯನ್ನು ಜಾಗೃತಿ ಕಾರ್ಯಕ್ರಮಗಳ ಮೂಲಕ ನಿವಾರಿಸಲಾಗಿದೆ. ಆದರೆ, ಕೆಲವು ಗೊಲ್ಲರಹಟ್ಟಿಗಳಲ್ಲಿ ಈಗಲೂ ಇದು ಚಾಲ್ತಿಯಲ್ಲಿದೆ. ಅಂತಹ ಗೊಲ್ಲರಹಟ್ಟಿಗಳಿಗೆ ಭೇಟಿ ನೀಡಿ, ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕಿದೆ’ ಎಂದು ಪತ್ರದಲ್ಲಿ ಕೋರಿದ್ದಾರೆ.</p>.<p>‘ರಾಜ್ಯ ಸರ್ಕಾರದ ವಿವಿಧ ಕಾರ್ಯಕ್ರಮಗಳಡಿಯಲ್ಲಿ ಲಭ್ಯವಿರುವ ಸವಲತ್ತುಗಳ ಬಗ್ಗೆ ಈ ಹೆಣ್ಣುಮಕ್ಕಳಿಗೆ ಮಾಹಿತಿ ನೀಡಿ, ಅವುಗಳ ಪ್ರಯೋಜನ ಪಡೆದುಕೊಳ್ಳುವಂತೆ ಮಾಡಬೇಕಿದೆ. ಈ ಮೂಲಕ, ಇಂತಹ ಅನಾಗರಿಕ ಪದ್ಧತಿಗಳಿಂದ ಅವರನ್ನು ಹೊರತರಲು ಸಾಧ್ಯವಾಗಲಿದೆ’ ಎಂದಿದ್ದಾರೆ.</p>