ಪರಿಷ್ಕೃತ ಪಠ್ಯಪುಸ್ತಕದ ಮೂಲಕ ಸಂವಿಧಾನ ಶಿಲ್ಪಿ ಅಂಬೇಡ್ಕರ್, ಬಸವಣ್ಣ, ಶಂಕರಾಚಾರ್ಯ, ಕುವೆಂಪು, ನಾರಾಯಣಗುರು ಸೇರಿದಂತೆ ಅನೇಕ ಮಹನೀಯರಿಗೆ ಅವಮಾನ ಮಾಡಿದ್ದಾರೆ. ಇದನ್ನು ಸಹಿಸಿಕೊಂಡು ಇರಲು ಸಾಧ್ಯವೇ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಸ್ವಾಮೀಜಿ ಇದ್ದರು ಎನ್ನುವ ಕಾರಣಕ್ಕೆ ಸುಮ್ಮನಿದ್ದೆ, ಬೇರೆ ಕಡೆ ಆದರೆ ಪಠ್ಯಪುಸ್ತಕ ಹರಿದು ಹಾಕುವುದಲ್ಲ ಸುಡುತ್ತಿದ್ದೆ. ಮುಂದಕ್ಕೂ ಅಂತ ಕಾಲ ಬರುತ್ತದೆ ಎಂದು ಹೇಳಿದರು.