ಶನಿವಾರ ಮುಂಜಾನೆ 6.30ಕ್ಕೆ ಬಳ್ಳಾರಿಗೆ ಬಂದಿದ್ದ ಇ.ಡಿ ಅಧಿಕಾರಿಗಳ ತಂಡ ಹಲವು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿತ್ತು.
ಗಾಂಧಿನಗರದಲ್ಲಿರುವ ಭರತ್ ರೆಡ್ಡಿ ಕಚೇರಿಯಲ್ಲಿ ಭಾನುವಾರ ರಾತ್ರಿ 11.30ರ ವರೆಗೆ ಪರಿಶೀಲನೆ ನಡೆಸಿದ ಅಧಿಕಾರಿಗಳು, ನಂತರ ನಿರ್ಗಮಿಸಿದರು.
ಹಣ ಅಕ್ರಮ ವರ್ಗಾವಣೆ ಪ್ರಕರಣವೊಂದರ ತನಿಖೆಯ ಭಾಗವಾಗಿ ಭರತ್ ರೆಡ್ಡಿ ಮೇಲೆ ಇ.ಡಿ ದಾಳಿ ನಡೆಸಿರುವುದಾಗಿ ಉನ್ನತ ಮೂಲಗಳು ಮಾಹಿತಿ ನೀಡಿವೆ.