‘ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಹುದ್ದೆಗೆ ಫೀಡರ್ ಅಥವಾ ಕೆಳ ಶ್ರೇಣಿಯ ಅಧಿಕಾರಿಗಳು ಅಂದರೆ; ಸಹಾಯಕ ಎಂಜಿನಿಯರ್ಗಳಿಗೆ ಬಡ್ತಿ ನೀಡಿ ಹುದ್ದೆಯನ್ನು ಭರ್ತಿ ನೀಡಬೇಕು. ಈ ಪ್ರಕ್ರಿಯೆಯನ್ನು ಆದೇಶದ ಪ್ರತಿ ದೊರೆತ ಎಂಟು ವಾರಗಳ ಒಳಗೆ ಪೂರ್ಣಗೊಳಿಸಬೇಕು‘ ಎಂದು ಸರ್ಕಾರಕ್ಕೆ ನಿರ್ದೇಶಿಸಿದೆ. ಅರ್ಜಿದಾರರ ಪರ ಹಿರಿಯ ವಕೀಲ ಎಂ.ಎಸ್. ಭಾಗವತ್, ಕೆ.ಎನ್.ಫಣೀಂದ್ರ ಹಾಗೂ ವಕೀಲರಾದ ಎಂ.ಪಿ. ಶ್ರೀಕಾಂತ್, ಅನೀಶ್ ಆಚಾರ್ಯ ಮತ್ತು ಕೆ.ಸತೀಶ್ ಭಟ್ಟ ವಾದ ಮಂಡಿಸಿದ್ದರು.