‘ಭವಿಷ್ಯ ನಿಧಿ ಸಂಘಟನೆಯ ಕೇಂದ್ರೀಯ ಮಂಡಳಿಯ (ಸಿಬಿಟಿ) ಎಲ್ಲ ಟ್ರಸ್ಟಿಗಳು ಬಡ್ಡಿ ದರ ಹೆಚ್ಚಿಸುವ ನಿರ್ಧಾರಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಬಡ್ಡಿ ದರ ಹೆಚ್ಚಿಸುವ ಈ ಪ್ರಸ್ತಾವವನ್ನು ಅನುಮೋದನೆಗಾಗಿ ಹಣಕಾಸು ಸಚಿವಾಲಯಕ್ಕೆ ಕಳಿಸಲಾಗುವುದು’ ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಹೇಳಿದ್ದಾರೆ.