<p><strong>ನವದೆಹಲಿ</strong>: ಕರ್ನಾಟಕದಲ್ಲಿ ಕಾರ್ಮಿಕ ಇಲಾಖೆಯು 12.39 ಲಕ್ಷ ಕಟ್ಟಡ ಕಾರ್ಮಿಕರಿಗೆ ನ್ಯೂಟ್ರೀಷಿಯನ್ ಕಿಟ್ಗಳನ್ನು ವಿತರಿಸಿದೆ. ಇದರಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದರು. </p>.<p>ರಾಜ್ಯಸಭೆಯಲ್ಲಿ ಮಂಗಳವಾರ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಚರ್ಚೆಯಲ್ಲಿ ಪಾಲ್ಗೊಂಡ ಅವರು, ‘ಪ್ರತಿ ಕಿಟ್ಗೆ ಮಾರುಕಟ್ಟೆಯಲ್ಲಿ ಸರಾಸರಿ ₹1000 ಬೆಲೆ ಇದೆ. ಆದರೆ, ಇಲಾಖೆಯು ₹2,600ಕ್ಕೆ ಖರೀದಿಸಿದೆ. ಇದರಲ್ಲಿ ₹75 ಕೋಟಿ ಹಗರಣ ನಡೆಸಲಾಗಿದೆ’ ಎಂದರು. </p>.<p>‘ರಾಜ್ಯದ 18 ವೈದ್ಯಕೀಯ ಕಾಲೇಜುಗಳಿಗೆ 114 ಮಾಡ್ಯುಲರ್ ಆಪರೇಷನ್ ಥಿಯೇಟರ್ಗಳ ಖರೀದಿ ಮತ್ತು ಆಧುನೀಕರಣದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಕ್ರಮ ನಡೆಸಿದೆ. ಇದರಲ್ಲಿ ₹117 ಕೋಟಿ ಹಗರಣ ಆಗಿದೆ’ ಎಂದು ಅವರು ಆರೋಪಿಸಿದರು. </p>.<p>‘ಕೇಂದ್ರ ಸರ್ಕಾರದ ಇಂದ್ರಧನುಷ್ ಮತ್ತು ಮಾತೃವಂದನ ಯೋಜನೆಗಳನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ರಾಜ್ಯದಲ್ಲಿ 19 ತಿಂಗಳಲ್ಲಿ 736 ಬಾಣಂತಿಯರು ಹಾಗೂ 1100 ನವಜಾತ ಶಿಶುಗಳು ಸಾಯಲು ರಾಜ್ಯ ಸರ್ಕಾರದ ಧೋರಣೆಯೇ ಕಾರಣ’ ಎಂದು ಅವರು ಹೇಳಿದರು. </p>.<p>‘ಬೆಳಗಾವಿಯಲ್ಲಿ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ಸ್ಥಾಪಿಸಲು ಕೇಂದ್ರ ಸರ್ಕಾರ 2023ರ ಫೆಬ್ರುವರಿಯಲ್ಲಿ ಅನುಮೋದನೆ ನೀಡಿತ್ತು. ರಾಜ್ಯ ಸರ್ಕಾರ ಈವರೆಗೆ ಜಮೀನು ಒದಗಿಸಿಲ್ಲ. ಈ ಮೂಲಕ ಕಿತ್ತೂರು ಕರ್ನಾಟಕದ ಜನರಿಗೆ ದ್ರೋಹ ಬಗೆದಿದೆ’ ಎಂದು ದೂರಿದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕರ್ನಾಟಕದಲ್ಲಿ ಕಾರ್ಮಿಕ ಇಲಾಖೆಯು 12.39 ಲಕ್ಷ ಕಟ್ಟಡ ಕಾರ್ಮಿಕರಿಗೆ ನ್ಯೂಟ್ರೀಷಿಯನ್ ಕಿಟ್ಗಳನ್ನು ವಿತರಿಸಿದೆ. ಇದರಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದರು. </p>.<p>ರಾಜ್ಯಸಭೆಯಲ್ಲಿ ಮಂಗಳವಾರ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಚರ್ಚೆಯಲ್ಲಿ ಪಾಲ್ಗೊಂಡ ಅವರು, ‘ಪ್ರತಿ ಕಿಟ್ಗೆ ಮಾರುಕಟ್ಟೆಯಲ್ಲಿ ಸರಾಸರಿ ₹1000 ಬೆಲೆ ಇದೆ. ಆದರೆ, ಇಲಾಖೆಯು ₹2,600ಕ್ಕೆ ಖರೀದಿಸಿದೆ. ಇದರಲ್ಲಿ ₹75 ಕೋಟಿ ಹಗರಣ ನಡೆಸಲಾಗಿದೆ’ ಎಂದರು. </p>.<p>‘ರಾಜ್ಯದ 18 ವೈದ್ಯಕೀಯ ಕಾಲೇಜುಗಳಿಗೆ 114 ಮಾಡ್ಯುಲರ್ ಆಪರೇಷನ್ ಥಿಯೇಟರ್ಗಳ ಖರೀದಿ ಮತ್ತು ಆಧುನೀಕರಣದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಕ್ರಮ ನಡೆಸಿದೆ. ಇದರಲ್ಲಿ ₹117 ಕೋಟಿ ಹಗರಣ ಆಗಿದೆ’ ಎಂದು ಅವರು ಆರೋಪಿಸಿದರು. </p>.<p>‘ಕೇಂದ್ರ ಸರ್ಕಾರದ ಇಂದ್ರಧನುಷ್ ಮತ್ತು ಮಾತೃವಂದನ ಯೋಜನೆಗಳನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ರಾಜ್ಯದಲ್ಲಿ 19 ತಿಂಗಳಲ್ಲಿ 736 ಬಾಣಂತಿಯರು ಹಾಗೂ 1100 ನವಜಾತ ಶಿಶುಗಳು ಸಾಯಲು ರಾಜ್ಯ ಸರ್ಕಾರದ ಧೋರಣೆಯೇ ಕಾರಣ’ ಎಂದು ಅವರು ಹೇಳಿದರು. </p>.<p>‘ಬೆಳಗಾವಿಯಲ್ಲಿ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ಸ್ಥಾಪಿಸಲು ಕೇಂದ್ರ ಸರ್ಕಾರ 2023ರ ಫೆಬ್ರುವರಿಯಲ್ಲಿ ಅನುಮೋದನೆ ನೀಡಿತ್ತು. ರಾಜ್ಯ ಸರ್ಕಾರ ಈವರೆಗೆ ಜಮೀನು ಒದಗಿಸಿಲ್ಲ. ಈ ಮೂಲಕ ಕಿತ್ತೂರು ಕರ್ನಾಟಕದ ಜನರಿಗೆ ದ್ರೋಹ ಬಗೆದಿದೆ’ ಎಂದು ದೂರಿದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>