<p><strong>ಬೆಂಗಳೂರು</strong>: ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಸಾಕಷ್ಟು ಲೋಪಗಳು, ಮುದ್ರಣ ದೋಷಗಳು ಇದ್ದ ಬಗ್ಗೆ ದೂರುಗಳು ಕೇಳಿ ಬಂದಿವೆ.</p>.<p>ಇತ್ತೀಚೆಗಷ್ಟೇ ಮಧ್ಯವಾರ್ಷಿಕ ಪರೀಕ್ಷೆಗಳು ಪೂರ್ಣಗೊಂಡಿದ್ದವು. ವಿವಿಧ ವಿಷಯಗಳಪ್ರಶ್ನೆ ಪತ್ರಿಕೆಗಳಲ್ಲಿ ಪ್ರಶ್ನೆಗಳನ್ನೇ ತಪ್ಪಾಗಿ ಕೇಳಲಾಗಿದೆ. ಕೆಲವು ಪ್ರಶ್ನೆಗಳು ಪುನರಾವರ್ತನೆ ಆಗಿವೆ. ಲೆಕ್ಕಶಾಸ್ತ್ರ, ಗಣಿತ, ರಸಾಯನ ವಿಜ್ಞಾನ, ಇಂಗ್ಲಿಷ್ ಸೇರಿದಂತೆ ಹಲವು ಪ್ರಶ್ನೆ ಪತ್ರಿಕೆಗಳಲ್ಲಿ ಲೋಪಗಳು ಆಗಿವೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.</p>.<p>ಈ ಬಾರಿ ಪದವಿಪೂರ್ವ ಶಿಕ್ಷಣ ಇಲಾಖೆಯೇ ಪ್ರಶ್ನೆ ಪತ್ರಿಕೆಗಳನ್ನು ಮುದ್ರಿಸಿ, ಪರೀಕ್ಷೆಗಳನ್ನು ನಡೆಸಿದೆ. ಪ್ರತಿ ವರ್ಷ ಮಧ್ಯ ವಾರ್ಷಿಕ ಪರೀಕ್ಷೆಗೆ ಪ್ರಶ್ನೆ ಪತ್ರಿಕೆಗಳನ್ನು ಪ್ರಾಂಶುಪಾಲರ ಸಂಘದಿಂದ ಜಿಲ್ಲಾ ಮಟ್ಟದಲ್ಲೇ ಮುದ್ರಿಸಿ, ಪರೀಕ್ಷೆ ನಡೆಸಲಾಗುತ್ತಿತ್ತು.</p>.<p>ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ ಪ್ರಶ್ನೆ ಪತ್ರಿಕೆಗಳಲ್ಲಿ ಆಗಿರುವ ಲೋಪಗಳನ್ನು ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಇಲಾಖೆ ನಿರ್ದೇಶಕರ ಗಮನಕ್ಕೆ ತಂದಿದ್ದಾರೆ.</p>.<p>‘ಯಾವ ಕಾರಣಕ್ಕೆ ದೋಷಗಳು ಆಗಿವೆ ಎಂಬ ಬಗ್ಗೆ ನಿರ್ದೇಶಕರಿಂದ ಮಾಹಿತಿ ಕೇಳಿದ್ದೇನೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ<br />ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಸಾಕಷ್ಟು ಲೋಪಗಳು, ಮುದ್ರಣ ದೋಷಗಳು ಇದ್ದ ಬಗ್ಗೆ ದೂರುಗಳು ಕೇಳಿ ಬಂದಿವೆ.</p>.<p>ಇತ್ತೀಚೆಗಷ್ಟೇ ಮಧ್ಯವಾರ್ಷಿಕ ಪರೀಕ್ಷೆಗಳು ಪೂರ್ಣಗೊಂಡಿದ್ದವು. ವಿವಿಧ ವಿಷಯಗಳಪ್ರಶ್ನೆ ಪತ್ರಿಕೆಗಳಲ್ಲಿ ಪ್ರಶ್ನೆಗಳನ್ನೇ ತಪ್ಪಾಗಿ ಕೇಳಲಾಗಿದೆ. ಕೆಲವು ಪ್ರಶ್ನೆಗಳು ಪುನರಾವರ್ತನೆ ಆಗಿವೆ. ಲೆಕ್ಕಶಾಸ್ತ್ರ, ಗಣಿತ, ರಸಾಯನ ವಿಜ್ಞಾನ, ಇಂಗ್ಲಿಷ್ ಸೇರಿದಂತೆ ಹಲವು ಪ್ರಶ್ನೆ ಪತ್ರಿಕೆಗಳಲ್ಲಿ ಲೋಪಗಳು ಆಗಿವೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.</p>.<p>ಈ ಬಾರಿ ಪದವಿಪೂರ್ವ ಶಿಕ್ಷಣ ಇಲಾಖೆಯೇ ಪ್ರಶ್ನೆ ಪತ್ರಿಕೆಗಳನ್ನು ಮುದ್ರಿಸಿ, ಪರೀಕ್ಷೆಗಳನ್ನು ನಡೆಸಿದೆ. ಪ್ರತಿ ವರ್ಷ ಮಧ್ಯ ವಾರ್ಷಿಕ ಪರೀಕ್ಷೆಗೆ ಪ್ರಶ್ನೆ ಪತ್ರಿಕೆಗಳನ್ನು ಪ್ರಾಂಶುಪಾಲರ ಸಂಘದಿಂದ ಜಿಲ್ಲಾ ಮಟ್ಟದಲ್ಲೇ ಮುದ್ರಿಸಿ, ಪರೀಕ್ಷೆ ನಡೆಸಲಾಗುತ್ತಿತ್ತು.</p>.<p>ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ ಪ್ರಶ್ನೆ ಪತ್ರಿಕೆಗಳಲ್ಲಿ ಆಗಿರುವ ಲೋಪಗಳನ್ನು ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಇಲಾಖೆ ನಿರ್ದೇಶಕರ ಗಮನಕ್ಕೆ ತಂದಿದ್ದಾರೆ.</p>.<p>‘ಯಾವ ಕಾರಣಕ್ಕೆ ದೋಷಗಳು ಆಗಿವೆ ಎಂಬ ಬಗ್ಗೆ ನಿರ್ದೇಶಕರಿಂದ ಮಾಹಿತಿ ಕೇಳಿದ್ದೇನೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ<br />ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>