<p><strong>ಬೆಂಗಳೂರು</strong>: ಕೇರಳದ ತ್ರಿಶೂರ್ ಜಿಲ್ಲೆಯ ಪುಥೂರ್ನ ನೂತನ ಜೈವಿಕ ಉದ್ಯಾನದಲ್ಲಿ (ಮೃಗಾಲಯ) ವನ್ಯಜೀವಿ ಮತ್ತು ಪಕ್ಷಿಗಳ ನಿರ್ವಹಣೆಗೆ ಅಗತ್ಯವಾದ ತಾಂತ್ರಿಕ ನೈಪುಣ್ಯ ವಿನಿಮಯಕ್ಕೆ ಕರ್ನಾಟಕ ಅರಣ್ಯ ಇಲಾಖೆ ಸಮ್ಮತಿಸಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.</p>.<p>ವಿಧಾನಸೌಧದಲ್ಲಿ ತಮ್ಮನ್ನು ಭೇಟಿಯಾದ ಕೇರಳ ಅರಣ್ಯ ಸಚಿವ ಎ.ಕೆ. ಸಶೀಂದ್ರನ್ ಜತೆ ಮಾತುಕತೆ ನಡೆಸಿದ ನಂತರ ಅವರು ಮಾಹಿತಿ ನೀಡಿದರು.</p>.<p>‘ವನ್ಯಜೀವಿಗಳ ನಿರ್ವಹಣೆಗೆ ತಾಂತ್ರಿಕ ನೈಪುಣ್ಯವನ್ನು ಹಂಚಿಕೊಳ್ಳುವಂತೆ ಕೇರಳ ಸಚಿವರು ಮನವಿ ಮಾಡಿದ್ದಾರೆ. ಕರ್ನಾಟಕದ ಮೃಗಾಲಯಗಳಲ್ಲಿ ಹೆಚ್ಚುವರಿಯಾಗಿರುವ ಕೆಲ ವನ್ಯಜೀವಿಗಳನ್ನು ನೀಡುವಂತೆಯೂ ಕೋರಿದ್ದಾರೆ. ಪರಿಭಾವಿತ ಅರಣ್ಯದ ಬಗ್ಗೆ ಕೈಗೊಂಡಿರುವ ಕ್ರಮಗಳು, ಕಸ್ತೂರಿ ರಂಗನ್ ವರದಿಯ ನಿರ್ಣಯಗಳ ಕುರಿತು ಸಮಾಲೋಚನೆ ನಡೆಸಿದೆವು’ ಎಂದರು.</p>.<p>ಕೇರಳ ಸರ್ಕಾರ 136.8 ಎಕರೆಯಲ್ಲಿ ರಾಜ್ಯದ ಪ್ರಥಮ ಜೈವಿಕ ಉದ್ಯಾನ ಆರಂಭಿಸುತ್ತಿದೆ. ಮೃಗಾಲಯ ವಿನ್ಯಾಸಕಾರ ಆಸ್ಟ್ರೇಲಿಯಾದ ಜಾನ್ ಸಿಯೋ ವಿನ್ಯಾಸ ಮಾಡಿದ್ದಾರೆ. ಸಾರ್ವಜನಿಕರಿಗೆ ಆಗಸ್ಟ್ನಿಂದ ಉದ್ಯಾನದ ಬಾಗಿಲು ತೆರೆಯಲಿದೆ ಎಂದು ಸಶೀಂದ್ರನ್ ಮಾಹಿತಿ ನೀಡಿದರು.</p>.<p>ಕೇರಳ ಅರಣ್ಯ ಇಲಾಖೆಯ ಮುಖ್ಯ ವನ್ಯಜೀವಿ ಪರಿಪಾಲಕ ಪ್ರಮೋದ್ ಜಿ ಕೃಷ್ಣನ್, ಕರ್ನಾಟಕ ಅರಣ್ಯ ಇಲಾಖೆ ಪ್ರಮುಖ ಅಧಿಕಾರಿಗಳಾದ ಮೀನಾಕ್ಷಿ ನೇಗಿ, ಸುಭಾಷ್ ಮಾಲ್ಕಡೆ, ಸುನೀಲ್ ಪನ್ವಾರ್, ಸೂರ್ಯ ಸೇನ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೇರಳದ ತ್ರಿಶೂರ್ ಜಿಲ್ಲೆಯ ಪುಥೂರ್ನ ನೂತನ ಜೈವಿಕ ಉದ್ಯಾನದಲ್ಲಿ (ಮೃಗಾಲಯ) ವನ್ಯಜೀವಿ ಮತ್ತು ಪಕ್ಷಿಗಳ ನಿರ್ವಹಣೆಗೆ ಅಗತ್ಯವಾದ ತಾಂತ್ರಿಕ ನೈಪುಣ್ಯ ವಿನಿಮಯಕ್ಕೆ ಕರ್ನಾಟಕ ಅರಣ್ಯ ಇಲಾಖೆ ಸಮ್ಮತಿಸಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.</p>.<p>ವಿಧಾನಸೌಧದಲ್ಲಿ ತಮ್ಮನ್ನು ಭೇಟಿಯಾದ ಕೇರಳ ಅರಣ್ಯ ಸಚಿವ ಎ.ಕೆ. ಸಶೀಂದ್ರನ್ ಜತೆ ಮಾತುಕತೆ ನಡೆಸಿದ ನಂತರ ಅವರು ಮಾಹಿತಿ ನೀಡಿದರು.</p>.<p>‘ವನ್ಯಜೀವಿಗಳ ನಿರ್ವಹಣೆಗೆ ತಾಂತ್ರಿಕ ನೈಪುಣ್ಯವನ್ನು ಹಂಚಿಕೊಳ್ಳುವಂತೆ ಕೇರಳ ಸಚಿವರು ಮನವಿ ಮಾಡಿದ್ದಾರೆ. ಕರ್ನಾಟಕದ ಮೃಗಾಲಯಗಳಲ್ಲಿ ಹೆಚ್ಚುವರಿಯಾಗಿರುವ ಕೆಲ ವನ್ಯಜೀವಿಗಳನ್ನು ನೀಡುವಂತೆಯೂ ಕೋರಿದ್ದಾರೆ. ಪರಿಭಾವಿತ ಅರಣ್ಯದ ಬಗ್ಗೆ ಕೈಗೊಂಡಿರುವ ಕ್ರಮಗಳು, ಕಸ್ತೂರಿ ರಂಗನ್ ವರದಿಯ ನಿರ್ಣಯಗಳ ಕುರಿತು ಸಮಾಲೋಚನೆ ನಡೆಸಿದೆವು’ ಎಂದರು.</p>.<p>ಕೇರಳ ಸರ್ಕಾರ 136.8 ಎಕರೆಯಲ್ಲಿ ರಾಜ್ಯದ ಪ್ರಥಮ ಜೈವಿಕ ಉದ್ಯಾನ ಆರಂಭಿಸುತ್ತಿದೆ. ಮೃಗಾಲಯ ವಿನ್ಯಾಸಕಾರ ಆಸ್ಟ್ರೇಲಿಯಾದ ಜಾನ್ ಸಿಯೋ ವಿನ್ಯಾಸ ಮಾಡಿದ್ದಾರೆ. ಸಾರ್ವಜನಿಕರಿಗೆ ಆಗಸ್ಟ್ನಿಂದ ಉದ್ಯಾನದ ಬಾಗಿಲು ತೆರೆಯಲಿದೆ ಎಂದು ಸಶೀಂದ್ರನ್ ಮಾಹಿತಿ ನೀಡಿದರು.</p>.<p>ಕೇರಳ ಅರಣ್ಯ ಇಲಾಖೆಯ ಮುಖ್ಯ ವನ್ಯಜೀವಿ ಪರಿಪಾಲಕ ಪ್ರಮೋದ್ ಜಿ ಕೃಷ್ಣನ್, ಕರ್ನಾಟಕ ಅರಣ್ಯ ಇಲಾಖೆ ಪ್ರಮುಖ ಅಧಿಕಾರಿಗಳಾದ ಮೀನಾಕ್ಷಿ ನೇಗಿ, ಸುಭಾಷ್ ಮಾಲ್ಕಡೆ, ಸುನೀಲ್ ಪನ್ವಾರ್, ಸೂರ್ಯ ಸೇನ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>