<p><strong>ಬೆಂಗಳೂರು:</strong> ಸರ್ಕಾರಿ ಕಲಾ ಕಾಲೇಜು ಹಾಗೂ ಸಂವಿಧಾನ ಓದು ಅಭಿಯಾನ– ಕರ್ನಾಟಕದ ವತಿಯಿಂದ ಸಂವಿಧಾನದ ಕುರಿತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಎರಡನೇ ಬಾರಿಗೆ ಆಯೋಜಿಸಲಾಗಿದೆ.</p>.<p>ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ, ಬೆಂಗಳೂರಿನಲ್ಲಿರುವ ಸರ್ಕಾರಿ ಕಲಾ ಕಾಲೇಜಿನಲ್ಲಿ ಅಕ್ಟೋಬರ್ 25ರಂದು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಬಿ.ಸಿ. ನಾಗೇಂದ್ರ ಕುಮಾರ್ ತಿಳಿಸಿದ್ದಾರೆ.</p>.<p>ಪ್ರಬಂಧ ಸ್ಪರ್ಧೆಯಲ್ಲಿ ಸಂವಿಧಾನ ಮತ್ತು ಮೂಲಭೂತ ಹಕ್ಕುಗಳು-ಕರ್ತವ್ಯಗಳು, ಸಂವಿಧಾನ ಮತ್ತು ಸಾಮಾಜಿಕ ನ್ಯಾಯ, ಸಂವಿಧಾನ ಮತ್ತು ಮಹಿಳೆ, ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆ ವಿಷಯಗಳಿವೆ. ವಿದ್ಯಾರ್ಥಿಗಳು ಯಾವುದಾದರೂ ಒಂದು ವಿಷಯವನ್ನು ಆಯ್ದುಕೊಂಡು ಕನ್ನಡ ಅಥವಾ ಇಂಗ್ಲಿಷ್ನಲ್ಲಿ ಬರೆಯಬಹುದು ಎಂದಿದ್ದಾರೆ.</p>.<p>ಪ್ರಥಮ ಬಹುಮಾನ ₹15 ಸಾವಿರ, ದ್ವಿತೀಯ ಬಹುಮಾನ ₹10 ಸಾವಿರ, ತೃತೀಯ ಬಹುಮಾನ ₹5 ಸಾವಿರವಿದ್ದು, 50 ಸಮಾಧಾನಕರ ಬಹುಮಾನವಾಗಿ ತಲಾ ₹1 ಸಾವಿರ ನೀಡಲಾಗುತ್ತದೆ. ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ಸಂವಿಧಾನ ಓದು ಅಭಿಯಾನ– ಕರ್ನಾಟಕದ ಸಂಚಾಲಕ ಬಿ. ರಾಜಶೇಖರ ಮೂರ್ತಿ ತಿಳಿಸಿದ್ದಾರೆ.</p>.<p>ಒಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಕಾಲೇಜಿನ ಪ್ರಾಂಶುಪಾಲರಿಂದ ಪಡೆದ ದೃಢೀಕರಣ ಪತ್ರವನ್ನು ಅ.20ರೊಳಗೆ ಪ್ರಾಂಶುಪಾಲರು, ಸರ್ಕಾರಿ ಕಲಾ ಕಾಲೇಜು, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು- 560 001 ಈ ವಿಳಾಸಕ್ಕೆ ಕಳುಹಿಸಿಕೊಡಬೇಕು. ಪ್ರಬಂಧ ಸ್ಪರ್ಧೆಯ ದಿನ ಕಾಲೇಜಿನ ಗುರುತಿನ ಚೀಟಿಯೊಂದಿಗೆ ಭಾಗವಹಿಸಬಹುದು ಎಂದಿದ್ದಾರೆ. </p><p><strong>ವಿವರಗಳಿಗೆ ಸಂಪರ್ಕಿಸಿ:</strong> 74839 50580</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸರ್ಕಾರಿ ಕಲಾ ಕಾಲೇಜು ಹಾಗೂ ಸಂವಿಧಾನ ಓದು ಅಭಿಯಾನ– ಕರ್ನಾಟಕದ ವತಿಯಿಂದ ಸಂವಿಧಾನದ ಕುರಿತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಎರಡನೇ ಬಾರಿಗೆ ಆಯೋಜಿಸಲಾಗಿದೆ.</p>.<p>ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ, ಬೆಂಗಳೂರಿನಲ್ಲಿರುವ ಸರ್ಕಾರಿ ಕಲಾ ಕಾಲೇಜಿನಲ್ಲಿ ಅಕ್ಟೋಬರ್ 25ರಂದು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಬಿ.ಸಿ. ನಾಗೇಂದ್ರ ಕುಮಾರ್ ತಿಳಿಸಿದ್ದಾರೆ.</p>.<p>ಪ್ರಬಂಧ ಸ್ಪರ್ಧೆಯಲ್ಲಿ ಸಂವಿಧಾನ ಮತ್ತು ಮೂಲಭೂತ ಹಕ್ಕುಗಳು-ಕರ್ತವ್ಯಗಳು, ಸಂವಿಧಾನ ಮತ್ತು ಸಾಮಾಜಿಕ ನ್ಯಾಯ, ಸಂವಿಧಾನ ಮತ್ತು ಮಹಿಳೆ, ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆ ವಿಷಯಗಳಿವೆ. ವಿದ್ಯಾರ್ಥಿಗಳು ಯಾವುದಾದರೂ ಒಂದು ವಿಷಯವನ್ನು ಆಯ್ದುಕೊಂಡು ಕನ್ನಡ ಅಥವಾ ಇಂಗ್ಲಿಷ್ನಲ್ಲಿ ಬರೆಯಬಹುದು ಎಂದಿದ್ದಾರೆ.</p>.<p>ಪ್ರಥಮ ಬಹುಮಾನ ₹15 ಸಾವಿರ, ದ್ವಿತೀಯ ಬಹುಮಾನ ₹10 ಸಾವಿರ, ತೃತೀಯ ಬಹುಮಾನ ₹5 ಸಾವಿರವಿದ್ದು, 50 ಸಮಾಧಾನಕರ ಬಹುಮಾನವಾಗಿ ತಲಾ ₹1 ಸಾವಿರ ನೀಡಲಾಗುತ್ತದೆ. ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ಸಂವಿಧಾನ ಓದು ಅಭಿಯಾನ– ಕರ್ನಾಟಕದ ಸಂಚಾಲಕ ಬಿ. ರಾಜಶೇಖರ ಮೂರ್ತಿ ತಿಳಿಸಿದ್ದಾರೆ.</p>.<p>ಒಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಕಾಲೇಜಿನ ಪ್ರಾಂಶುಪಾಲರಿಂದ ಪಡೆದ ದೃಢೀಕರಣ ಪತ್ರವನ್ನು ಅ.20ರೊಳಗೆ ಪ್ರಾಂಶುಪಾಲರು, ಸರ್ಕಾರಿ ಕಲಾ ಕಾಲೇಜು, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು- 560 001 ಈ ವಿಳಾಸಕ್ಕೆ ಕಳುಹಿಸಿಕೊಡಬೇಕು. ಪ್ರಬಂಧ ಸ್ಪರ್ಧೆಯ ದಿನ ಕಾಲೇಜಿನ ಗುರುತಿನ ಚೀಟಿಯೊಂದಿಗೆ ಭಾಗವಹಿಸಬಹುದು ಎಂದಿದ್ದಾರೆ. </p><p><strong>ವಿವರಗಳಿಗೆ ಸಂಪರ್ಕಿಸಿ:</strong> 74839 50580</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>