<p><strong>ಬೆಂಗಳೂರು:</strong> ರಾಜ್ಯದಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಜಾರಿಗೊಳಿಸುವ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಎಸ್.ವಿ. ರಂಗನಾಥ್ ನೇತೃತ್ವದಲ್ಲಿ ರಚಿಸಿದ ಕಾರ್ಯಪಡೆಯು ಕರ್ನಾಟಕ ಶಿಕ್ಷಣ ಆಯೋಗ (ಕೆಎಸ್ಎ/ಕೆಇಸಿ), ಅನುಷ್ಠಾನ ಮಿಷನ್ ಹಾಗೂ ಹಲವು ಹೊಸ ಸಂಸ್ಥೆಗಳ ಸ್ಥಾಪನೆ ಸೇರಿ ಅನೇಕ ಸಲಹೆಗಳಿರುವ ಅಂತಿಮ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.</p>.<p>ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮತ್ತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಅಂತಿಮ ವರದಿಯನ್ನು ಕಾರ್ಯಪಡೆ ಶನಿವಾರ ಸಲ್ಲಿಸಿದೆ.</p>.<p>ವಿವಿಧ ಇಲಾಖೆಗಳು, ಕಾರ್ಯಗಳು, ಸಂಸ್ಥೆಗಳು ಹಾಗೂ ಘಟಕಗಳ ನಡುವೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಕರ್ನಾಟಕ ಶಿಕ್ಷಣ ಆಯೋಗ ಸ್ಥಾಪಿಸಬೇಕು, ಪ್ರಾಥಮಿಕ-ಪ್ರೌಢ ಹಾಗೂ ಉನ್ನತ ಶಿಕ್ಷಣ ಎರಡೂ ಈ ಆಯೋಗದಡಿ ಕೆಲಸ ಮಾಡಬೇಕು. ವರ್ಷಕ್ಕೆ ಕನಿಷ್ಠ ಎರಡು ಸಲ ಅಥವಾ ಅಗತ್ಯವಿದ್ದರೆ ಅದಕ್ಕಿಂತ ಹೆಚ್ಚು ಬಾರಿ ಈ ಆಯೋಗ ಸಭೆಗಳನ್ನು ನಡೆಸಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಬೇಕು.ಉನ್ನತ ಶಿಕ್ಷಣ ಸಚಿವರು ಮತ್ತು ಪ್ರಾಥಮಿಕ-ಪ್ರೌಢ ಶಿಕ್ಷಣ ಸಚಿವರು ಇದರ ಉಪಾಧ್ಯಕ್ಷರಾಗಿರಬೇಕು ಎಂದು ಕಾರ್ಯಪಡೆ ಹೇಳಿದೆ.</p>.<p><strong>ವರದಿಯ ಪ್ರಮುಖಾಂಶಗಳು</strong></p>.<p>lನಿರ್ದಿಷ್ಟ ಗುರಿಗಳೊಂದಿಗೆ ಅನುಷ್ಠಾನ ಮಿಷನ್ ಸ್ಥಾಪಿಸಬೇಕು. ಪ್ರತಿ ಮೂರು ತಿಂಗಳಿಗೆ ನಿಗದಿ ಮಾಡಲಾದ ಗುರಿಗಳ ಕ್ಯಾಲೆಂಡರ್ ಅನ್ನು ಮೂರು ವರ್ಷಗಳ ಅವಧಿಗೆ ಸಿದ್ಧಪಡಿಸಬೇಕು. ಮೂರು ತಿಂಗಳಿಗೊಮ್ಮೆ ಅನುಷ್ಠಾನ ಪ್ರಗತಿ ಪರಿಶೀಲಿಸಲು ಅನುಷ್ಠಾನ ಕಾರ್ಯಪಡೆ (ಐಟಿಎಫ್) ರಚಿಸಬೇಕು.</p>.<p>lಸಮಗ್ರ ಶಿಕ್ಷಣ (ಎಸ್ಎಸ್ಕೆ) ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯಲ್ಲಿ (ಕೆಎಸ್ಎಸ್ಇಸಿ) ತಕ್ಷಣವೇ ‘ಅನುಷ್ಠಾನ ನಿಧಿ’ಗೆ ಅನುವು ಮಾಡಿಕೊಡಬೇಕು.</p>.<p>lರಾಜ್ಯ ಶಾಲಾ ಪ್ರಮಾಣೀಕರಣ ಪ್ರಾಧಿಕಾರ (ಎಸ್ಎಸ್ಎಸ್ಎ) ಮತ್ತು ಕರ್ನಾಟಕ<br />ಉನ್ನತ ಶಿಕ್ಷಣ ನಿಯಂತ್ರಣ ಮಂಡಳಿ (ಕೆಎಚ್ಇಆರ್ಸಿ) ಎಂಬ ನಿಯಂತ್ರಣ ಸಂಸ್ಥೆಗಳನ್ನು ಸ್ಥಾಪಿಸಬೇಕು.</p>.<p>lಹೊಸ ನೀತಿಯಲ್ಲಿರುವ ಉನ್ನತ ಶಿಕ್ಷಣ ಸಂರಚನೆ ಕಾರ್ಯರೂಪಕ್ಕಿಳಿಸಲು ಹೊಸ ಕೆಎಸ್ಯು (ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ) ಕಾಯ್ದೆ ರೂಪಿಸಬೇಕು.</p>.<p>lಶಿಕ್ಷಣ ಇಲಾಖೆಯಲ್ಲಿ ಈಗಾಗಲೇ ಇರುವ ಸಂಸ್ಥೆಗಳ ನಡುವೆ ಪ್ರತ್ಯೇಕ ಅಧಿಕಾರ ವ್ಯಾಪ್ತಿ ನಿಗದಿಗೊಳಿಸಬೇಕು.</p>.<p>lಕೆಪಿಎಸ್/ ಶಾಲಾ ಸಮುಚ್ಚಯಗಳಲ್ಲಿ ಸೇವಾ ನಿಯಮಗಳು- ಟೆನ್ಯೂರ್ ಶಿಪ್ಗಳಿಗೆ ತಿದ್ದುಪಡಿ ತರಬೇಕು. ಶಿಕ್ಷಕರ ವೃತ್ತಿ ಬೆಳವಣಿಗೆ ಹಾಗೂ ಉನ್ನತಿ ಕುರಿತು ಸ್ಪಷ್ಟವಾಗಿ ವ್ಯಾಖ್ಯಾನಿಸಬೇಕು.</p>.<p>lಗುರುತಿಸಿದ ಕಡೆಗಳಲ್ಲಿ ವಿಶೇಷ ಶೈಕ್ಷಣಿಕ ವಲಯ (ಎಸ್ಇಝಡ್) ಸ್ಥಾಪಿಸಬೇಕು.</p>.<p>lಆರ್ಥಿಕ- ಸಾಮಾಜಿಕವಾಗಿ ಹಿಂದುಳಿದ (ಎಸ್ಇಡಿ) ಮಕ್ಕಳಿಗಾಗಿ ಲಿಂಗತ್ವ ಮತ್ತು ವಿಶೇಷ ಸಾಮರ್ಥ್ಯವುಳ್ಳವರಿಗೆ (ಅಂಗವಿಕಲರು) ಅನುದಾನ ಸೇರಿದಂತೆ ಸಮಷ್ಟಿ ಶಿಕ್ಷಣಕ್ಕಾಗಿ ಕ್ರಮಗಳನ್ನು ಕೈಗೊಳ್ಳಬೇಕು.</p>.<p>lಮಗುವಿನ 3ನೇ ವಯಸ್ಸಿನಿಂದ ಬಾಲ್ಯಾರಂಭ ಶಿಕ್ಷಣ ಆರಂಭವಾಗಲಿದೆ. ಒಟ್ಟಾರೆ ಶಾಲಾ ಶಿಕ್ಷಣ 5+3+3+4 (ಬುನಾದಿ ಹಂತ, ಪೂರ್ವಸಿದ್ಧತೆ ಹಂತ, ಮಾಧ್ಯಮಿಕ ಮತ್ತು ಪ್ರೌಢಶಿಕ್ಷಣ ಹಂತ) ತರಗತಿಗಳನ್ನು ಒಳಗೊಂಡಿರುತ್ತದೆ. ಒಂದೆಡೆ, 11 ಮತ್ತು 12ನೇ ತರಗತಿಗಳನ್ನು ಪ್ರೌಢ ಶಿಕ್ಷಣ ಹಂತದೊಂದಿಗೆ ಸಂಯೋಜಿಸಲು ಗಮನ ಕೇಂದ್ರೀಕರಿಸಲಾಗುವುದು. ಮತ್ತೊಂದೆಡೆ, ಬುನಾದಿ ಶಿಕ್ಷಣ<br />5 ವರ್ಷಗಳ ಸಮಗ್ರ ಪಠ್ಯಕ್ರಮ ಹೊಂದಿರು ತ್ತದೆ. ಶಾಲಾ ಮಟ್ಟದಲ್ಲಿ ಬುನಾದಿ ಹಂತ ಮತ್ತು ಪೂರ್ವಸಿದ್ಧತಾ ಮಟ್ಟಗಳಿಗಾಗಿ<br />ಪಠ್ಯಕ್ರಮ ಹಾಗೂ ಶಿಕ್ಷಣ ಶಾಸ್ತ್ರದ ಪರಿಷ್ಕರಣೆ ಕಾರ್ಯವನ್ನು ಡಿಎಸ್ಇಆರ್ಟಿ ಕೈಗೆತ್ತಿಕೊಳ್ಳಬೇಕು.</p>.<p>lಬಾಲ್ಯಾರಂಭ ಶಿಕ್ಷಣಕ್ಕೆ ಪೂರಕವಾಗಿ ನಲಿ ಕಲಿ ಪಠ್ಯಕ್ರಮ ಪರಿಷ್ಕರಿಸಿ, ರಾಜ್ಯದಾದ್ಯಂತ ‘ಚಿಲಿ ಪಿಲಿ ಪ್ಲಸ್’ ಪಠ್ಯಕ್ರಮ ಆಧಾರಿತವಾಗಿರುತ್ತದೆ.</p>.<p>lಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಸೇರಿದಂತೆ ಇತರ ವಿಶೇಷ ಶಾಲೆಗಳನ್ನು ಶಾಲಾ ಸಮುಚ್ಚಯ ಕೇಂದ್ರಗಳಾಗಿ ನಿರ್ಮಿಸಬೇಕು.</p>.<p>l‘ಗುರು ಚೇತನ’ ಯೋಜನೆ ಸದೃಢಗೊಳಿಸಿ, ವಿಶೇಷ ಶಿಕ್ಷಣ ವೃತ್ತಿ ಬೆಳವಣಿಗೆ ವೇದಿಕೆಯಾಗಿ ರೂಪಿಸಬೇಕು.</p>.<p>lಉನ್ನತ ಶಿಕ್ಷಣ ಸಂಸ್ಥೆಗಳೂ ಆಡಳಿತ ಮಂಡಳಿ ರಚಿಸಬೇಕು</p>.<p>lಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳು ಸಾಂಸ್ಥಿಕ ಅಭಿವೃದ್ಧಿ ಯೋಜನೆಗಳನ್ನು (ಐಡಿಪಿ) ಅಭಿವೃದ್ಧಿಪಡಿಸಬೇಕು</p>.<p>lಸಂಶೋಧನಾ ಆದ್ಯತೆಯ ವಿಶ್ವವಿದ್ಯಾಲಯಗಳು ಹಾಗೂ ಬೋಧನಾ ಆದ್ಯತೆಯ ವಿಶ್ವವಿದ್ಯಾಲಯಗಳು ಎಂದು ವರ್ಗೀಕರಿಸಬೇಕು.</p>.<p><strong>***</strong></p>.<p>ಹೊಸ ನೀತಿ 2021-22ನೇ ಶೈಕ್ಷಣಿಕ ವರ್ಷದಿಂದ ಹಂತ ಹಂತವಾಗಿ ಜಾರಿಗೆ ಬರಲಿದ್ದು, ಅದಕ್ಕೂ ಮೊದಲು ಎಲ್ಲ ಹಿತಾಸಕ್ತಿದಾರರೊಂದಿಗೆ ವರದಿ ಕುರಿತು ಸಮಾಲೋಚನೆ ನಡೆಸಲಾಗುವುದು<br />- ಡಾ.ಸಿ.ಎನ್. ಅಶ್ವತ್ಥನಾರಾಯಣ, ಉಪ ಮುಖ್ಯಮಂತ್ರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಜಾರಿಗೊಳಿಸುವ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಎಸ್.ವಿ. ರಂಗನಾಥ್ ನೇತೃತ್ವದಲ್ಲಿ ರಚಿಸಿದ ಕಾರ್ಯಪಡೆಯು ಕರ್ನಾಟಕ ಶಿಕ್ಷಣ ಆಯೋಗ (ಕೆಎಸ್ಎ/ಕೆಇಸಿ), ಅನುಷ್ಠಾನ ಮಿಷನ್ ಹಾಗೂ ಹಲವು ಹೊಸ ಸಂಸ್ಥೆಗಳ ಸ್ಥಾಪನೆ ಸೇರಿ ಅನೇಕ ಸಲಹೆಗಳಿರುವ ಅಂತಿಮ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.</p>.<p>ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮತ್ತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಅಂತಿಮ ವರದಿಯನ್ನು ಕಾರ್ಯಪಡೆ ಶನಿವಾರ ಸಲ್ಲಿಸಿದೆ.</p>.<p>ವಿವಿಧ ಇಲಾಖೆಗಳು, ಕಾರ್ಯಗಳು, ಸಂಸ್ಥೆಗಳು ಹಾಗೂ ಘಟಕಗಳ ನಡುವೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಕರ್ನಾಟಕ ಶಿಕ್ಷಣ ಆಯೋಗ ಸ್ಥಾಪಿಸಬೇಕು, ಪ್ರಾಥಮಿಕ-ಪ್ರೌಢ ಹಾಗೂ ಉನ್ನತ ಶಿಕ್ಷಣ ಎರಡೂ ಈ ಆಯೋಗದಡಿ ಕೆಲಸ ಮಾಡಬೇಕು. ವರ್ಷಕ್ಕೆ ಕನಿಷ್ಠ ಎರಡು ಸಲ ಅಥವಾ ಅಗತ್ಯವಿದ್ದರೆ ಅದಕ್ಕಿಂತ ಹೆಚ್ಚು ಬಾರಿ ಈ ಆಯೋಗ ಸಭೆಗಳನ್ನು ನಡೆಸಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಬೇಕು.ಉನ್ನತ ಶಿಕ್ಷಣ ಸಚಿವರು ಮತ್ತು ಪ್ರಾಥಮಿಕ-ಪ್ರೌಢ ಶಿಕ್ಷಣ ಸಚಿವರು ಇದರ ಉಪಾಧ್ಯಕ್ಷರಾಗಿರಬೇಕು ಎಂದು ಕಾರ್ಯಪಡೆ ಹೇಳಿದೆ.</p>.<p><strong>ವರದಿಯ ಪ್ರಮುಖಾಂಶಗಳು</strong></p>.<p>lನಿರ್ದಿಷ್ಟ ಗುರಿಗಳೊಂದಿಗೆ ಅನುಷ್ಠಾನ ಮಿಷನ್ ಸ್ಥಾಪಿಸಬೇಕು. ಪ್ರತಿ ಮೂರು ತಿಂಗಳಿಗೆ ನಿಗದಿ ಮಾಡಲಾದ ಗುರಿಗಳ ಕ್ಯಾಲೆಂಡರ್ ಅನ್ನು ಮೂರು ವರ್ಷಗಳ ಅವಧಿಗೆ ಸಿದ್ಧಪಡಿಸಬೇಕು. ಮೂರು ತಿಂಗಳಿಗೊಮ್ಮೆ ಅನುಷ್ಠಾನ ಪ್ರಗತಿ ಪರಿಶೀಲಿಸಲು ಅನುಷ್ಠಾನ ಕಾರ್ಯಪಡೆ (ಐಟಿಎಫ್) ರಚಿಸಬೇಕು.</p>.<p>lಸಮಗ್ರ ಶಿಕ್ಷಣ (ಎಸ್ಎಸ್ಕೆ) ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯಲ್ಲಿ (ಕೆಎಸ್ಎಸ್ಇಸಿ) ತಕ್ಷಣವೇ ‘ಅನುಷ್ಠಾನ ನಿಧಿ’ಗೆ ಅನುವು ಮಾಡಿಕೊಡಬೇಕು.</p>.<p>lರಾಜ್ಯ ಶಾಲಾ ಪ್ರಮಾಣೀಕರಣ ಪ್ರಾಧಿಕಾರ (ಎಸ್ಎಸ್ಎಸ್ಎ) ಮತ್ತು ಕರ್ನಾಟಕ<br />ಉನ್ನತ ಶಿಕ್ಷಣ ನಿಯಂತ್ರಣ ಮಂಡಳಿ (ಕೆಎಚ್ಇಆರ್ಸಿ) ಎಂಬ ನಿಯಂತ್ರಣ ಸಂಸ್ಥೆಗಳನ್ನು ಸ್ಥಾಪಿಸಬೇಕು.</p>.<p>lಹೊಸ ನೀತಿಯಲ್ಲಿರುವ ಉನ್ನತ ಶಿಕ್ಷಣ ಸಂರಚನೆ ಕಾರ್ಯರೂಪಕ್ಕಿಳಿಸಲು ಹೊಸ ಕೆಎಸ್ಯು (ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ) ಕಾಯ್ದೆ ರೂಪಿಸಬೇಕು.</p>.<p>lಶಿಕ್ಷಣ ಇಲಾಖೆಯಲ್ಲಿ ಈಗಾಗಲೇ ಇರುವ ಸಂಸ್ಥೆಗಳ ನಡುವೆ ಪ್ರತ್ಯೇಕ ಅಧಿಕಾರ ವ್ಯಾಪ್ತಿ ನಿಗದಿಗೊಳಿಸಬೇಕು.</p>.<p>lಕೆಪಿಎಸ್/ ಶಾಲಾ ಸಮುಚ್ಚಯಗಳಲ್ಲಿ ಸೇವಾ ನಿಯಮಗಳು- ಟೆನ್ಯೂರ್ ಶಿಪ್ಗಳಿಗೆ ತಿದ್ದುಪಡಿ ತರಬೇಕು. ಶಿಕ್ಷಕರ ವೃತ್ತಿ ಬೆಳವಣಿಗೆ ಹಾಗೂ ಉನ್ನತಿ ಕುರಿತು ಸ್ಪಷ್ಟವಾಗಿ ವ್ಯಾಖ್ಯಾನಿಸಬೇಕು.</p>.<p>lಗುರುತಿಸಿದ ಕಡೆಗಳಲ್ಲಿ ವಿಶೇಷ ಶೈಕ್ಷಣಿಕ ವಲಯ (ಎಸ್ಇಝಡ್) ಸ್ಥಾಪಿಸಬೇಕು.</p>.<p>lಆರ್ಥಿಕ- ಸಾಮಾಜಿಕವಾಗಿ ಹಿಂದುಳಿದ (ಎಸ್ಇಡಿ) ಮಕ್ಕಳಿಗಾಗಿ ಲಿಂಗತ್ವ ಮತ್ತು ವಿಶೇಷ ಸಾಮರ್ಥ್ಯವುಳ್ಳವರಿಗೆ (ಅಂಗವಿಕಲರು) ಅನುದಾನ ಸೇರಿದಂತೆ ಸಮಷ್ಟಿ ಶಿಕ್ಷಣಕ್ಕಾಗಿ ಕ್ರಮಗಳನ್ನು ಕೈಗೊಳ್ಳಬೇಕು.</p>.<p>lಮಗುವಿನ 3ನೇ ವಯಸ್ಸಿನಿಂದ ಬಾಲ್ಯಾರಂಭ ಶಿಕ್ಷಣ ಆರಂಭವಾಗಲಿದೆ. ಒಟ್ಟಾರೆ ಶಾಲಾ ಶಿಕ್ಷಣ 5+3+3+4 (ಬುನಾದಿ ಹಂತ, ಪೂರ್ವಸಿದ್ಧತೆ ಹಂತ, ಮಾಧ್ಯಮಿಕ ಮತ್ತು ಪ್ರೌಢಶಿಕ್ಷಣ ಹಂತ) ತರಗತಿಗಳನ್ನು ಒಳಗೊಂಡಿರುತ್ತದೆ. ಒಂದೆಡೆ, 11 ಮತ್ತು 12ನೇ ತರಗತಿಗಳನ್ನು ಪ್ರೌಢ ಶಿಕ್ಷಣ ಹಂತದೊಂದಿಗೆ ಸಂಯೋಜಿಸಲು ಗಮನ ಕೇಂದ್ರೀಕರಿಸಲಾಗುವುದು. ಮತ್ತೊಂದೆಡೆ, ಬುನಾದಿ ಶಿಕ್ಷಣ<br />5 ವರ್ಷಗಳ ಸಮಗ್ರ ಪಠ್ಯಕ್ರಮ ಹೊಂದಿರು ತ್ತದೆ. ಶಾಲಾ ಮಟ್ಟದಲ್ಲಿ ಬುನಾದಿ ಹಂತ ಮತ್ತು ಪೂರ್ವಸಿದ್ಧತಾ ಮಟ್ಟಗಳಿಗಾಗಿ<br />ಪಠ್ಯಕ್ರಮ ಹಾಗೂ ಶಿಕ್ಷಣ ಶಾಸ್ತ್ರದ ಪರಿಷ್ಕರಣೆ ಕಾರ್ಯವನ್ನು ಡಿಎಸ್ಇಆರ್ಟಿ ಕೈಗೆತ್ತಿಕೊಳ್ಳಬೇಕು.</p>.<p>lಬಾಲ್ಯಾರಂಭ ಶಿಕ್ಷಣಕ್ಕೆ ಪೂರಕವಾಗಿ ನಲಿ ಕಲಿ ಪಠ್ಯಕ್ರಮ ಪರಿಷ್ಕರಿಸಿ, ರಾಜ್ಯದಾದ್ಯಂತ ‘ಚಿಲಿ ಪಿಲಿ ಪ್ಲಸ್’ ಪಠ್ಯಕ್ರಮ ಆಧಾರಿತವಾಗಿರುತ್ತದೆ.</p>.<p>lಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಸೇರಿದಂತೆ ಇತರ ವಿಶೇಷ ಶಾಲೆಗಳನ್ನು ಶಾಲಾ ಸಮುಚ್ಚಯ ಕೇಂದ್ರಗಳಾಗಿ ನಿರ್ಮಿಸಬೇಕು.</p>.<p>l‘ಗುರು ಚೇತನ’ ಯೋಜನೆ ಸದೃಢಗೊಳಿಸಿ, ವಿಶೇಷ ಶಿಕ್ಷಣ ವೃತ್ತಿ ಬೆಳವಣಿಗೆ ವೇದಿಕೆಯಾಗಿ ರೂಪಿಸಬೇಕು.</p>.<p>lಉನ್ನತ ಶಿಕ್ಷಣ ಸಂಸ್ಥೆಗಳೂ ಆಡಳಿತ ಮಂಡಳಿ ರಚಿಸಬೇಕು</p>.<p>lಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳು ಸಾಂಸ್ಥಿಕ ಅಭಿವೃದ್ಧಿ ಯೋಜನೆಗಳನ್ನು (ಐಡಿಪಿ) ಅಭಿವೃದ್ಧಿಪಡಿಸಬೇಕು</p>.<p>lಸಂಶೋಧನಾ ಆದ್ಯತೆಯ ವಿಶ್ವವಿದ್ಯಾಲಯಗಳು ಹಾಗೂ ಬೋಧನಾ ಆದ್ಯತೆಯ ವಿಶ್ವವಿದ್ಯಾಲಯಗಳು ಎಂದು ವರ್ಗೀಕರಿಸಬೇಕು.</p>.<p><strong>***</strong></p>.<p>ಹೊಸ ನೀತಿ 2021-22ನೇ ಶೈಕ್ಷಣಿಕ ವರ್ಷದಿಂದ ಹಂತ ಹಂತವಾಗಿ ಜಾರಿಗೆ ಬರಲಿದ್ದು, ಅದಕ್ಕೂ ಮೊದಲು ಎಲ್ಲ ಹಿತಾಸಕ್ತಿದಾರರೊಂದಿಗೆ ವರದಿ ಕುರಿತು ಸಮಾಲೋಚನೆ ನಡೆಸಲಾಗುವುದು<br />- ಡಾ.ಸಿ.ಎನ್. ಅಶ್ವತ್ಥನಾರಾಯಣ, ಉಪ ಮುಖ್ಯಮಂತ್ರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>