<p><strong>ಬೆಂಗಳೂರು:</strong> ರಾಜ್ಯದಲ್ಲಿ ಸುಜಲಾ ಜಲಾನಯನ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಕೈಗೊಂಡಿರುವ ಎಲ್ಲ ಕಾಮಗಾರಿಗಳ ಫಲಿತಾಂಶದ ಕುರಿತು ಮೌಲ್ಯಮಾಪನ ನಡೆಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಲಾನಯನ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಭಾನುವಾರ ನಡೆದ ವಿಶ್ವ ಬ್ಯಾಂಕ್ ನೆರವಿನ ರಾಷ್ಟ್ರಮಟ್ಟದ ರಿವಾರ್ಡ್ ಯೋಜನೆ ಮತ್ತು ಜಲಾನಯನ ಉತ್ಕೃಷ್ಟತಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>'ಈವರೆಗೆ ಮೂರು ಹಂತದಲ್ಲಿ ಸುಜಲಾ ಜಲಾನಯನ ಯೋಜನೆ ಜಾರಿಗೆ ಬಂದಿದೆ. ಆ ಕಾಮಗಾರಿಗಳಿಂದ ಆಗಿರುವ ಅನುಕೂಲ ಮತ್ತು ಯೋಜನೆ ಅನುಷ್ಠಾನದಲ್ಲಿನ ತೊಡಕುಗಳ ಕುರಿತು ಮೌಲ್ಯಮಾಪನ ನಡೆಸಬೇಕು. ಹಿಂದಿನ ತಪ್ಪುಗಳು ಹೊಸ ಜಲಾನಯನ ಅಭಿವೃದ್ಧಿ ಯೋಜನೆ ಅನುಷ್ಠಾನದಲ್ಲಿ ಆಗದಂತೆ ಎಚ್ಚರ ವಹಿಸಬೇಕು' ಎಂದರು.</p>.<p>ಕೃಷಿ ವಿಶ್ವವಿದ್ಯಾಲಯಗಳು ಬದಲಾಗಬೇಕು. ಅಲ್ಲಿನ ತಜ್ಞರು ಮತ್ತು ಸಂಶೋಧಕರು ತಮ್ಮ ನಿಲುವು ಬದಲಾಯಿಸಿಕೊಳ್ಳಬೇಕು. ವಿಶ್ವವಿದ್ಯಾಲಯಗಳ ಆವರಣದಿಂದ ಹೊರ ಬಂದು, ರೈತರ ಜಮೀನುಗಳಲ್ಲೇ ಸಂಶೋಧನೆ ಕೈಗೊಳ್ಳಬೇಕು. ಸಂಶೋಧನೆಯ ಪೂರ್ಣ ಫಲ ರೈತರನ್ನು ತಲುಪುವಂತೆ ಕೆಲಸ ಮಾಡಬೇಕು ಎಂದರು.</p>.<p>ಹೆಚ್ಚಿನ ಕೃಷಿ ವಿಶ್ವವಿದ್ಯಾಲಯಗಳು ಪ್ರಾಯೋಜಕರನ್ನು ಆಧರಿಸಿದ ಸಂಶೋಧನೆಗಳನ್ನು ಕೈಗೊಳ್ಳುತ್ತಿವೆ. ಈ ಪರಿಪಾಠ ನಿಲ್ಲಬೇಕು. ರೈತ ಕೇಂದ್ರಿತ ಸಂಶೋಧನೆಗಳು ನಡೆಯಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಸುಜಲಾ ಜಲಾನಯನ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಕೈಗೊಂಡಿರುವ ಎಲ್ಲ ಕಾಮಗಾರಿಗಳ ಫಲಿತಾಂಶದ ಕುರಿತು ಮೌಲ್ಯಮಾಪನ ನಡೆಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಲಾನಯನ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಭಾನುವಾರ ನಡೆದ ವಿಶ್ವ ಬ್ಯಾಂಕ್ ನೆರವಿನ ರಾಷ್ಟ್ರಮಟ್ಟದ ರಿವಾರ್ಡ್ ಯೋಜನೆ ಮತ್ತು ಜಲಾನಯನ ಉತ್ಕೃಷ್ಟತಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>'ಈವರೆಗೆ ಮೂರು ಹಂತದಲ್ಲಿ ಸುಜಲಾ ಜಲಾನಯನ ಯೋಜನೆ ಜಾರಿಗೆ ಬಂದಿದೆ. ಆ ಕಾಮಗಾರಿಗಳಿಂದ ಆಗಿರುವ ಅನುಕೂಲ ಮತ್ತು ಯೋಜನೆ ಅನುಷ್ಠಾನದಲ್ಲಿನ ತೊಡಕುಗಳ ಕುರಿತು ಮೌಲ್ಯಮಾಪನ ನಡೆಸಬೇಕು. ಹಿಂದಿನ ತಪ್ಪುಗಳು ಹೊಸ ಜಲಾನಯನ ಅಭಿವೃದ್ಧಿ ಯೋಜನೆ ಅನುಷ್ಠಾನದಲ್ಲಿ ಆಗದಂತೆ ಎಚ್ಚರ ವಹಿಸಬೇಕು' ಎಂದರು.</p>.<p>ಕೃಷಿ ವಿಶ್ವವಿದ್ಯಾಲಯಗಳು ಬದಲಾಗಬೇಕು. ಅಲ್ಲಿನ ತಜ್ಞರು ಮತ್ತು ಸಂಶೋಧಕರು ತಮ್ಮ ನಿಲುವು ಬದಲಾಯಿಸಿಕೊಳ್ಳಬೇಕು. ವಿಶ್ವವಿದ್ಯಾಲಯಗಳ ಆವರಣದಿಂದ ಹೊರ ಬಂದು, ರೈತರ ಜಮೀನುಗಳಲ್ಲೇ ಸಂಶೋಧನೆ ಕೈಗೊಳ್ಳಬೇಕು. ಸಂಶೋಧನೆಯ ಪೂರ್ಣ ಫಲ ರೈತರನ್ನು ತಲುಪುವಂತೆ ಕೆಲಸ ಮಾಡಬೇಕು ಎಂದರು.</p>.<p>ಹೆಚ್ಚಿನ ಕೃಷಿ ವಿಶ್ವವಿದ್ಯಾಲಯಗಳು ಪ್ರಾಯೋಜಕರನ್ನು ಆಧರಿಸಿದ ಸಂಶೋಧನೆಗಳನ್ನು ಕೈಗೊಳ್ಳುತ್ತಿವೆ. ಈ ಪರಿಪಾಠ ನಿಲ್ಲಬೇಕು. ರೈತ ಕೇಂದ್ರಿತ ಸಂಶೋಧನೆಗಳು ನಡೆಯಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>