ವಿಧಾನಸಭೆಯಲ್ಲಿ ಮಾತನಾಡಿದ ಅವರು, ‘ಕಾವೇರಿ, ಕೃಷ್ಣಾ ನದಿ ವಿವಾದ ಆರಂಭವಾದಂದಿನಿಂದ ಸುಮಾರು 40ರಿಂದ 45 ವರ್ಷಗಳ ಕಾಲ ಅವರು ರಾಜ್ಯವನ್ನು ಪ್ರತಿನಿಧಿಸಿದ್ದಾರೆ. ಸಂಕಷ್ಟದ ಸಂದರ್ಭದಲ್ಲಿ ರಾಜ್ಯವನ್ನು ಪಾರು ಮಾಡಿದ್ದಾರೆ. ಸರಳ ವ್ಯಕ್ತಿತ್ವದ ಅವರು ನ್ಯಾಯಮೂರ್ತಿಗಳನ್ನೂ ಮೀರಿಸಿದ ಕಾನೂನು ಪಂಡಿತರಾಗಿದ್ದರು. ರಾಜ್ಯದ ಹಿತಾಸಕ್ತಿಯನ್ನು ಅವರು ಎಂದಿಗೂ ಬಿಟ್ಟುಕೊಟ್ಟಿಲ್ಲ’ ಎಂದು ಬಣ್ಣಿಸಿದರು.