<p><strong>ಚಿತ್ರದುರ್ಗ: </strong>ಮಾಜಿ ಸಚಿವ ತಿಪ್ಪೇಸ್ವಾಮಿ (76) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ನಿಧನರಾದರು.</p>.<p>ಇವರಿಗೆ ಪತ್ನಿ ವಿಮಲಮ್ಮ, ಪುತ್ರ ಕೆ.ಟಿ.ಕುಮಾರಸ್ವಾಮಿ, ಪುತ್ರಿ ಕೆ.ಟಿ.ಭವ್ಯ ಇದ್ದಾರೆ. ನಾಲ್ಕು ದಶಕಗಳ ರಾಜಕೀಯ ಹೋರಾಟ, ಸಮುದಾಯಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿದ ರಾಜ್ಯ ಸರ್ಕಾರ 2017ರಲ್ಲಿ ಇವರಿಗೆ ರಾಜ್ಯಮಟ್ಟದ ‘ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ ನೀಡಿ ಪುರಸ್ಕರಿಸಿತ್ತು.</p>.<p>ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ <a href="https://www.prajavani.net/district/chitradurga/ex-minister-thippeswamy-562864.html" target="_blank">ಕೊಲಂಬಿಯಾ ಏಷಿಯಾ</a> ಅಸ್ಪತ್ರೆಗೆದಾಖಲಿಸಲಾಗಿತ್ತು.</p>.<p>ತಿಪ್ಪೇಸ್ವಾಮಿ ಅವರು ಚಳ್ಳಕೆರೆ ತಾಲ್ಲೂಕಿನ ಕಾಟಪ್ಪನಹಟ್ಟಿಯವರು. ಕಾರ್ಖಾನೆ ತಿಪ್ಪಯ್ಯ ಮತ್ತು ಬೋರಮ್ಮ ಅವರ ಐದನೇ ಪುತ್ರರು. 1942ರಲ್ಲಿ ಜನಿಸಿದ ಇವರು, ಪ್ರಾಥಮಿಕ ಶಿಕ್ಷಣವನ್ನು ಕಾಟಪ್ಪನಹಟ್ಟಿಯಲ್ಲಿ ಮುಗಿಸಿದ್ದರು.</p>.<p>1980ರಲ್ಲಿ ಚಳ್ಳಕೆರೆ ಪುರಸಭಾ ಅಧ್ಯಕ್ಷರಾಗಿ ರಾಜಕೀಯ ಪ್ರವೇಶಿಸಿದ ತಿಪ್ಪೇಸ್ವಾಮಿ ಅವರು, 1985ರಲ್ಲಿಪ್ರಥಮ ಬಾರಿಗೆ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು.</p>.<p>ಎಚ್.ಡಿ. ದೇವೇಗೌಡರ ನೇತೃತ್ವದ ಸರ್ಕಾರದಲ್ಲಿ ಅಬಕಾರಿ ಹಾಗೂ ಜೆ.ಎಚ್.ಪಟೇಲ್ ಅವರ ಆಡಳಿತದಲ್ಲಿ ಸಣ್ಣ ನೀರಾವರಿ ಸಚಿವರಾಗಿದ್ದರು. ತಮ್ಮ ಅಧಿಕಾರಾವಧಿಯಲ್ಲಿ ವಾಲ್ಮೀಕಿ ಸಮುದಾಯವನ್ನು ಸಂಘಟಿಸಿದರು. ಎಲ್ಲರ ಸಹಕಾರ ಪಡೆದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ 'ಶ್ರೀ ವಾಲ್ಮೀಕಿ ಗುರುಪೀಠ' ಸ್ಥಾಪಿಸಲು ಶ್ರಮಿಸಿದ್ದರು.</p>.<p>ಜೆಡಿಎಸ್ ಮೂಲಕ ರಾಜಕೀಯ ಆರಂಭಿಸಿದ್ದ ತಿಪ್ಪೇಸ್ವಾಮಿ ಅವರು ನಂತರ ಬಿಜೆಪಿ ಸೇರಿದ್ದರು. ಬಿ.ಎಸ್.ಯಡಿಯೂರಪ್ಪ ಜತೆ ಕೆಜೆಪಿಗೆ ಹೋಗಿ ಮತ್ತೆ ಬಿಜೆಪಿಗೆ ಮರಳಿದ್ದರು. ಇವರ ಪಾರ್ಥಿವ ಶರೀರವನ್ನು ಬುಧವಾರ ಮಧ್ಯಾಹ್ನ ಚಳ್ಳಕೆರೆಗೆ ತರಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಮಾಜಿ ಸಚಿವ ತಿಪ್ಪೇಸ್ವಾಮಿ (76) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ನಿಧನರಾದರು.</p>.<p>ಇವರಿಗೆ ಪತ್ನಿ ವಿಮಲಮ್ಮ, ಪುತ್ರ ಕೆ.ಟಿ.ಕುಮಾರಸ್ವಾಮಿ, ಪುತ್ರಿ ಕೆ.ಟಿ.ಭವ್ಯ ಇದ್ದಾರೆ. ನಾಲ್ಕು ದಶಕಗಳ ರಾಜಕೀಯ ಹೋರಾಟ, ಸಮುದಾಯಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿದ ರಾಜ್ಯ ಸರ್ಕಾರ 2017ರಲ್ಲಿ ಇವರಿಗೆ ರಾಜ್ಯಮಟ್ಟದ ‘ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ ನೀಡಿ ಪುರಸ್ಕರಿಸಿತ್ತು.</p>.<p>ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ <a href="https://www.prajavani.net/district/chitradurga/ex-minister-thippeswamy-562864.html" target="_blank">ಕೊಲಂಬಿಯಾ ಏಷಿಯಾ</a> ಅಸ್ಪತ್ರೆಗೆದಾಖಲಿಸಲಾಗಿತ್ತು.</p>.<p>ತಿಪ್ಪೇಸ್ವಾಮಿ ಅವರು ಚಳ್ಳಕೆರೆ ತಾಲ್ಲೂಕಿನ ಕಾಟಪ್ಪನಹಟ್ಟಿಯವರು. ಕಾರ್ಖಾನೆ ತಿಪ್ಪಯ್ಯ ಮತ್ತು ಬೋರಮ್ಮ ಅವರ ಐದನೇ ಪುತ್ರರು. 1942ರಲ್ಲಿ ಜನಿಸಿದ ಇವರು, ಪ್ರಾಥಮಿಕ ಶಿಕ್ಷಣವನ್ನು ಕಾಟಪ್ಪನಹಟ್ಟಿಯಲ್ಲಿ ಮುಗಿಸಿದ್ದರು.</p>.<p>1980ರಲ್ಲಿ ಚಳ್ಳಕೆರೆ ಪುರಸಭಾ ಅಧ್ಯಕ್ಷರಾಗಿ ರಾಜಕೀಯ ಪ್ರವೇಶಿಸಿದ ತಿಪ್ಪೇಸ್ವಾಮಿ ಅವರು, 1985ರಲ್ಲಿಪ್ರಥಮ ಬಾರಿಗೆ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು.</p>.<p>ಎಚ್.ಡಿ. ದೇವೇಗೌಡರ ನೇತೃತ್ವದ ಸರ್ಕಾರದಲ್ಲಿ ಅಬಕಾರಿ ಹಾಗೂ ಜೆ.ಎಚ್.ಪಟೇಲ್ ಅವರ ಆಡಳಿತದಲ್ಲಿ ಸಣ್ಣ ನೀರಾವರಿ ಸಚಿವರಾಗಿದ್ದರು. ತಮ್ಮ ಅಧಿಕಾರಾವಧಿಯಲ್ಲಿ ವಾಲ್ಮೀಕಿ ಸಮುದಾಯವನ್ನು ಸಂಘಟಿಸಿದರು. ಎಲ್ಲರ ಸಹಕಾರ ಪಡೆದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ 'ಶ್ರೀ ವಾಲ್ಮೀಕಿ ಗುರುಪೀಠ' ಸ್ಥಾಪಿಸಲು ಶ್ರಮಿಸಿದ್ದರು.</p>.<p>ಜೆಡಿಎಸ್ ಮೂಲಕ ರಾಜಕೀಯ ಆರಂಭಿಸಿದ್ದ ತಿಪ್ಪೇಸ್ವಾಮಿ ಅವರು ನಂತರ ಬಿಜೆಪಿ ಸೇರಿದ್ದರು. ಬಿ.ಎಸ್.ಯಡಿಯೂರಪ್ಪ ಜತೆ ಕೆಜೆಪಿಗೆ ಹೋಗಿ ಮತ್ತೆ ಬಿಜೆಪಿಗೆ ಮರಳಿದ್ದರು. ಇವರ ಪಾರ್ಥಿವ ಶರೀರವನ್ನು ಬುಧವಾರ ಮಧ್ಯಾಹ್ನ ಚಳ್ಳಕೆರೆಗೆ ತರಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>