<p><strong>ರಾಯಚೂರು:</strong> ಪರೀಕ್ಷಾ ಕೇಂದ್ರದ ಬದಲು ಬಾಡಿಗೆ ಮನೆಯೊಂದರಲ್ಲಿ ಪದವಿ ಪರೀಕ್ಷೆ ಬರೆದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಚೇತನ ಕಾಲೇಜಿನ 39 ವಿದ್ಯಾರ್ಥಿಗಳ ಪೈಕಿ 38 ವಿದ್ಯಾರ್ಥಿಗಳಿಗೆ ಇಲ್ಲಿಯಒಂದನೇ ಜೆಎಂಎಫ್ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.</p>.<p>ಬಂಧಿತರ ಪೈಕಿ ಚೇತನ ಕಾಲೇಜಿನ ಮುಖ್ಯಸ್ಥ ಪವನಕುಮಾರ್ ಹನುಮಂತ ಹಾಗೂ ಸಹಾಯಕ ನಿರಂಜನ ನರೇಶಕುಮಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.</p>.<p class="Subhead">ಪರೀಕ್ಷಾ ಕೇಂದ್ರಗಳು ರದ್ದು: ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಒಳಪಡುವ ನಗರದ ಮೂರು ಕಾಲೇಜು<br />ಗಳ ಪರೀಕ್ಷಾ ಕೇಂದ್ರಗಳನ್ನು ರದ್ದುಪಡಿಸಲಾಗಿದ್ದು, ಅಲ್ಲಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗಳನ್ನು ಬೇರೆ ಕೇಂದ್ರಗಳಿಗೆ ವರ್ಗಾವಣೆ ಮಾಡಲಾಗಿದೆ.</p>.<p>ವಿವೇಕಾನಂದ ಬಿಸಿಎ ಕಾಲೇಜಿನ ಪರೀಕ್ಷಾ ಕೇಂದ್ರವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ, ಡಿ.ಕೆ.ಭಂಡಾರಿ ಪದವಿ ಮಹಾವಿದ್ಯಾಲಯದ ಪರೀಕ್ಷಾ ಕೇಂದ್ರವನ್ನು ಎಎಂಇ ಕಾಲೇಜಿಗೆ ಹಾಗೂ ಜ್ಞಾನಗಂಗಾ ಕಾಲೇಜಿನ ಪರೀಕ್ಷಾ ಕೇಂದ್ರವನ್ನು ಬಿಆರ್ಬಿ ಕಾಲೇಜಿನ ಪರೀಕ್ಷಾ ಕೆಂದ್ರಕ್ಕೆ ವರ್ಗಾಯಿಸಲಾಗಿದೆ.</p>.<p>ನಗರದಲ್ಲಿ ಪರೀಕ್ಷಾ ಅಕ್ರಮಕ್ಕೆ ಅವಕಾಶ ನೀಡಿದ ಕೇಂದ್ರಗಳಿಗೆ ಕುಲಪತಿ ಪ್ರೊ.ಎಸ್.ಆರ್. ನಿರಂಜನ ನೇತೃತ್ವದ ತನಿಖಾ ತಂಡವು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.</p>.<p>ನಂತರ ಮಾತನಾಡಿದ ನಿರಂಜನ, ‘ಅಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸಮಗ್ರ ಮಾಹಿತಿ ಪಡೆದು<br />ಕ್ರಮಕೈಗೊಳ್ಳಲಾಗುವುದು. ಕಾಲೇಜು ಆಡಳಿತ ಮಂಡಳಿ ತಪ್ಪು ಎಸಗಿರುವ ಬಗ್ಗೆಯೂ ಪರಿಶೀಲನೆ ನಡೆಸಲಾಗು<br />ವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಪರೀಕ್ಷಾ ಕೇಂದ್ರದ ಬದಲು ಬಾಡಿಗೆ ಮನೆಯೊಂದರಲ್ಲಿ ಪದವಿ ಪರೀಕ್ಷೆ ಬರೆದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಚೇತನ ಕಾಲೇಜಿನ 39 ವಿದ್ಯಾರ್ಥಿಗಳ ಪೈಕಿ 38 ವಿದ್ಯಾರ್ಥಿಗಳಿಗೆ ಇಲ್ಲಿಯಒಂದನೇ ಜೆಎಂಎಫ್ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.</p>.<p>ಬಂಧಿತರ ಪೈಕಿ ಚೇತನ ಕಾಲೇಜಿನ ಮುಖ್ಯಸ್ಥ ಪವನಕುಮಾರ್ ಹನುಮಂತ ಹಾಗೂ ಸಹಾಯಕ ನಿರಂಜನ ನರೇಶಕುಮಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.</p>.<p class="Subhead">ಪರೀಕ್ಷಾ ಕೇಂದ್ರಗಳು ರದ್ದು: ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಒಳಪಡುವ ನಗರದ ಮೂರು ಕಾಲೇಜು<br />ಗಳ ಪರೀಕ್ಷಾ ಕೇಂದ್ರಗಳನ್ನು ರದ್ದುಪಡಿಸಲಾಗಿದ್ದು, ಅಲ್ಲಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗಳನ್ನು ಬೇರೆ ಕೇಂದ್ರಗಳಿಗೆ ವರ್ಗಾವಣೆ ಮಾಡಲಾಗಿದೆ.</p>.<p>ವಿವೇಕಾನಂದ ಬಿಸಿಎ ಕಾಲೇಜಿನ ಪರೀಕ್ಷಾ ಕೇಂದ್ರವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ, ಡಿ.ಕೆ.ಭಂಡಾರಿ ಪದವಿ ಮಹಾವಿದ್ಯಾಲಯದ ಪರೀಕ್ಷಾ ಕೇಂದ್ರವನ್ನು ಎಎಂಇ ಕಾಲೇಜಿಗೆ ಹಾಗೂ ಜ್ಞಾನಗಂಗಾ ಕಾಲೇಜಿನ ಪರೀಕ್ಷಾ ಕೇಂದ್ರವನ್ನು ಬಿಆರ್ಬಿ ಕಾಲೇಜಿನ ಪರೀಕ್ಷಾ ಕೆಂದ್ರಕ್ಕೆ ವರ್ಗಾಯಿಸಲಾಗಿದೆ.</p>.<p>ನಗರದಲ್ಲಿ ಪರೀಕ್ಷಾ ಅಕ್ರಮಕ್ಕೆ ಅವಕಾಶ ನೀಡಿದ ಕೇಂದ್ರಗಳಿಗೆ ಕುಲಪತಿ ಪ್ರೊ.ಎಸ್.ಆರ್. ನಿರಂಜನ ನೇತೃತ್ವದ ತನಿಖಾ ತಂಡವು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.</p>.<p>ನಂತರ ಮಾತನಾಡಿದ ನಿರಂಜನ, ‘ಅಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸಮಗ್ರ ಮಾಹಿತಿ ಪಡೆದು<br />ಕ್ರಮಕೈಗೊಳ್ಳಲಾಗುವುದು. ಕಾಲೇಜು ಆಡಳಿತ ಮಂಡಳಿ ತಪ್ಪು ಎಸಗಿರುವ ಬಗ್ಗೆಯೂ ಪರಿಶೀಲನೆ ನಡೆಸಲಾಗು<br />ವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>