<p><strong>ಬೆಂಗಳೂರು:</strong> ‘ಮದ್ಯ ಮಾರಾಟ ಸನ್ನದು ನೀಡುವಲ್ಲಿ ಲಂಚ ಪಡೆಯಲು ಅಧಿಕಾರಿಗಳು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಹಾಗೆ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.</p>.ಬಾಗಲಕೋಟೆ | ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ.<p>ವಿಧಾನಸೌಧದಲ್ಲಿ ಮಂಗಳವಾರ ನಡೆದ ಇಲಾಖಾ ಪ್ರಗತಿಪರಿಶೀಲನಾ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಈ ಖಾತೆಯೇ ಅಂಥದ್ದು. ಈ ಹಿಂದೆ ಸಚಿವರಾಗಿದ್ದವರ ವಿರುದ್ಧವೂ ಆರೋಪಗಳು ಬಂದಿವೆ. ಈಗಲೂ ಬರುತ್ತಿವೆ. ಆದರೆ ಅವೆಲ್ಲಾ ಸುಳ್ಳು’ ಎಂದರು.</p><p>‘ಸನ್ನದು ನೀಡುವಲ್ಲಿ ಮತ್ತು ನವೀಕರಣದಲ್ಲಿ ಹಲವು ಸುಧಾರಣಾ ಕ್ರಮಗಳನ್ನು ತಂದಿದ್ದೇನೆ. ಇದರಿಂದ ಹಲವರಿಗೆ ತೊಂದರೆ ಆದಂತಿದೆ. ಹೀಗಾಗಿ ಆರೋಪ ಮಾಡುತ್ತಿದ್ದಾರೆ. ಇಲಾಖೆಯ ವಿರುದ್ಧ ಆರೋಪ ಮಾಡಿದಂತಹ ಸಂಘಟನೆಯ ಮಾನ್ಯತೆಯ ಅವಧಿ ಮುಗಿದು, ಎಷ್ಟೋ ವರ್ಷಗಳಾಗಿವೆ. ಆ ಸಂಘಕ್ಕೆ ಮಾನ್ಯತೆಯೇ ಇಲ್ಲ’ ಎಂದರು.</p>.ಏನು ಸಾಕ್ಷ್ಯ ಇದೆ ನನ್ನ ವಿರುದ್ಧ ?; ಇದೊಂದು ರಾಜಕೀಯ ಷಡ್ಯಂತ್ರ: ಸಚಿವ ತಿಮ್ಮಾಪುರ.<p>‘ವಿಶೇಷ ಅಧಿವೇಶನದಲ್ಲಿ ನರೇಗಾ ಯೋಜನೆ ಬಗ್ಗೆ ಚರ್ಚಿಸುವುದು ಬಜೆಪಿ ಸದಸ್ಯರಿಗೆ ಬೇಡವಾಗಿತ್ತು. ಹೀಗಾಗಿ ನನ್ನ ಮೇಲಿನ ಆರೋಪಕ್ಕೆ ಅವರು ಜೋತುಬಿದ್ದರು. ಆದರೂ, ನಮ್ಮ ಸರ್ಕಾರ ನರೇಗಾ ಕುರಿತು ಪರಿಣಾಮಕಾರಿ ಚರ್ಚೆ ನಡೆಸಿತು’ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘2025–26ನೇ ಸಾಲಿನ ಬಜೆಟ್ನಲ್ಲಿ ಅಬಕಾರಿ ಇಲಾಖೆಯಿಂದ ₹40,000 ಕೋಟಿ ಆದಾಯ ಸಂಗ್ರಹವಾಗಬಹುದು ಎಂದು ಅಂದಾಜಿಸಲಾಗಿತ್ತು. ಈಗಾಗಲೇ ₹34,000 ಕೋಟಿ ಸಂಗ್ರಹವಾಗಿದೆ. ಆರ್ಥಿಕ ವರ್ಷದ ಅಂತ್ಯದ ಹೊತ್ತಿಗೆ, ಬಜೆಟ್ನ ಅಂದಾಜಿಗಿಂತಲೂ ಹೆಚ್ಚು ಆದಾಯ ಗಳಿಸುತ್ತೇವೆ’ ಎಂದರು.</p>.ಏನು ಸಾಕ್ಷ್ಯ ಇದೆ ನನ್ನ ವಿರುದ್ಧ ?; ಇದೊಂದು ರಾಜಕೀಯ ಷಡ್ಯಂತ್ರ: ಸಚಿವ ತಿಮ್ಮಾಪುರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮದ್ಯ ಮಾರಾಟ ಸನ್ನದು ನೀಡುವಲ್ಲಿ ಲಂಚ ಪಡೆಯಲು ಅಧಿಕಾರಿಗಳು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಹಾಗೆ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.</p>.ಬಾಗಲಕೋಟೆ | ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ.<p>ವಿಧಾನಸೌಧದಲ್ಲಿ ಮಂಗಳವಾರ ನಡೆದ ಇಲಾಖಾ ಪ್ರಗತಿಪರಿಶೀಲನಾ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಈ ಖಾತೆಯೇ ಅಂಥದ್ದು. ಈ ಹಿಂದೆ ಸಚಿವರಾಗಿದ್ದವರ ವಿರುದ್ಧವೂ ಆರೋಪಗಳು ಬಂದಿವೆ. ಈಗಲೂ ಬರುತ್ತಿವೆ. ಆದರೆ ಅವೆಲ್ಲಾ ಸುಳ್ಳು’ ಎಂದರು.</p><p>‘ಸನ್ನದು ನೀಡುವಲ್ಲಿ ಮತ್ತು ನವೀಕರಣದಲ್ಲಿ ಹಲವು ಸುಧಾರಣಾ ಕ್ರಮಗಳನ್ನು ತಂದಿದ್ದೇನೆ. ಇದರಿಂದ ಹಲವರಿಗೆ ತೊಂದರೆ ಆದಂತಿದೆ. ಹೀಗಾಗಿ ಆರೋಪ ಮಾಡುತ್ತಿದ್ದಾರೆ. ಇಲಾಖೆಯ ವಿರುದ್ಧ ಆರೋಪ ಮಾಡಿದಂತಹ ಸಂಘಟನೆಯ ಮಾನ್ಯತೆಯ ಅವಧಿ ಮುಗಿದು, ಎಷ್ಟೋ ವರ್ಷಗಳಾಗಿವೆ. ಆ ಸಂಘಕ್ಕೆ ಮಾನ್ಯತೆಯೇ ಇಲ್ಲ’ ಎಂದರು.</p>.ಏನು ಸಾಕ್ಷ್ಯ ಇದೆ ನನ್ನ ವಿರುದ್ಧ ?; ಇದೊಂದು ರಾಜಕೀಯ ಷಡ್ಯಂತ್ರ: ಸಚಿವ ತಿಮ್ಮಾಪುರ.<p>‘ವಿಶೇಷ ಅಧಿವೇಶನದಲ್ಲಿ ನರೇಗಾ ಯೋಜನೆ ಬಗ್ಗೆ ಚರ್ಚಿಸುವುದು ಬಜೆಪಿ ಸದಸ್ಯರಿಗೆ ಬೇಡವಾಗಿತ್ತು. ಹೀಗಾಗಿ ನನ್ನ ಮೇಲಿನ ಆರೋಪಕ್ಕೆ ಅವರು ಜೋತುಬಿದ್ದರು. ಆದರೂ, ನಮ್ಮ ಸರ್ಕಾರ ನರೇಗಾ ಕುರಿತು ಪರಿಣಾಮಕಾರಿ ಚರ್ಚೆ ನಡೆಸಿತು’ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘2025–26ನೇ ಸಾಲಿನ ಬಜೆಟ್ನಲ್ಲಿ ಅಬಕಾರಿ ಇಲಾಖೆಯಿಂದ ₹40,000 ಕೋಟಿ ಆದಾಯ ಸಂಗ್ರಹವಾಗಬಹುದು ಎಂದು ಅಂದಾಜಿಸಲಾಗಿತ್ತು. ಈಗಾಗಲೇ ₹34,000 ಕೋಟಿ ಸಂಗ್ರಹವಾಗಿದೆ. ಆರ್ಥಿಕ ವರ್ಷದ ಅಂತ್ಯದ ಹೊತ್ತಿಗೆ, ಬಜೆಟ್ನ ಅಂದಾಜಿಗಿಂತಲೂ ಹೆಚ್ಚು ಆದಾಯ ಗಳಿಸುತ್ತೇವೆ’ ಎಂದರು.</p>.ಏನು ಸಾಕ್ಷ್ಯ ಇದೆ ನನ್ನ ವಿರುದ್ಧ ?; ಇದೊಂದು ರಾಜಕೀಯ ಷಡ್ಯಂತ್ರ: ಸಚಿವ ತಿಮ್ಮಾಪುರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>