ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬಕಾರಿಗೆ ಹೊಸ ನೀತಿ: ತಿಮ್ಮಾಪುರ

Published 3 ಜೂನ್ 2023, 13:39 IST
Last Updated 3 ಜೂನ್ 2023, 13:39 IST
ಅಕ್ಷರ ಗಾತ್ರ

ಬಾಗಲಕೋಟೆ: ಅಬಕಾರಿ ಇಲಾಖೆಯಲ್ಲಿ ಕೆಲವು ಬದಲಾವಣೆ ಮಾಡುವ ಉದ್ದೇಶವಿದೆ. ಈ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಹೊಸ ನೀತಿ ಜಾರಿ ಮಾಡಲಾಗುವುದು ಎಂದು ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಹೇಳಿದರು.

ಶನಿವಾರ ಜಿಲ್ಲೆಯ ಲಕ್ಷ್ಯಾನಟ್ಟಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಇದೇ ಖಾತೆ ನಿರ್ವಹಿಸಿದ್ದೇನೆ. ಆ ಅನುಭವದ ಆಧಾರದ ಮೇಲೆ ಒಂದಷ್ಟು ಬದಲಾವಣೆ ತರಲು ಉದ್ದೇಶಿಸಿದ್ದೇನೆ ಎಂದರು.

ಬಿಜೆಪಿಯಲ್ಲಿ ಸಮರ್ಥ ನಾಯಕತ್ವವಿಲ್ಲ.  ಬಿಜೆಪಿ ನಾಯಕರಿಗೆ ಜನರ ಮೇಲೂ ಭರವಸೆ ಇಲ್ಲ. ತಮ್ಮ ಮೇಲೂ ಭರವಸೆ ಇಲ್ಲ ಎಂದು ಟೀಕಿಸಿದ ಅವರು, ಕಾಂಗ್ರೆಸ್‌ ಗೆಲುವಿನ ಯಾತ್ರೆ ಲೋಕಸಭಾ ಚುನಾವಣೆಯಲ್ಲಿಯೂ ಮುಂದುವರೆಯಲಿದೆ ಎಂದು ಹೇಳಿದರು.

ಒಡಿಶಾ ರೈಲು ದುರಂತದ ಹಿನ್ನಲೆಯಲ್ಲಿ ಹಾರ, ಸನ್ಮಾನ ನಿರಾಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT