<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ‘ಸರ್ವೇ ಹಾಗೂ ಕಂದಾಯ ಇಲಾಖೆಗಳಲ್ಲಿನ ಹಳೆ ಭೂ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡಿ ಡಾಟಾಬೇಸ್ನಲ್ಲಿ ಸಂರಕ್ಷಿಸುವ ಉದ್ದೇಶದಿಂದ 31 ತಾಲ್ಲೂಕುಗಳಲ್ಲಿ ಪ್ರಾಯೋಗಿಕ ಜಾರಿಗೊಳಿಸಿದ್ದ ‘ಭೂ ಸುರಕ್ಷೆ’ ಯೋಜನೆಯನ್ನು ಉಳಿದ 210 ತಾಲ್ಲೂಕುಗಳಿಗೂ ವಿಸ್ತರಿಸಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.</p>.<p>ವಿಧಾನ ಪರಿಷತ್ನಲ್ಲಿ ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಮೂಲ ದಾಖಲೆಗಳ ಸ್ಕ್ಯಾನಿಂಗ್ ಪ್ರಕ್ರಿಯೆ 31 ತಾಲ್ಲೂಕುಗಳಲ್ಲಿ ಪೂರ್ಣಗೊಂಡಿದೆ. 2025ರ ಡಿಸೆಂಬರ್ ಒಳಗಾಗಿ ಉಳಿದ ತಾಲೂಕುಗಳಲ್ಲಿನ ದಾಖಲೆಗಳು ಸ್ಕ್ಯಾನಿಂಗ್ ಆಗಲಿವೆ. ಜನರಿಗೆ ಆನ್ಲೈನ್ನಲ್ಲಿಯೂ ಲಭ್ಯವಾಗಿದೆ’ ಎಂದರು.</p>.<p>‘ಅಲ್ಲದೆ, ಪ್ರಮುಖ ದಾಖಲೆಗಳ ಮೂಲಪ್ರತಿಯನ್ನು ತಾಲ್ಲೂಕು ಮಟ್ಟದಲ್ಲಿ ವೈಜ್ಞಾನಿಕವಾಗಿ ಸಂರಕ್ಷಿಸಿಡುವ ದೃಷ್ಟಿಯಿಂದ ತಾಲ್ಲೂಕಿಗೊಂದು ಕಾಂಪ್ಯಾಕ್ಟರ್ ನೀಡಲಾಗುತ್ತಿದೆ’ ಎಂದು ತಿಳಿಸಿದರು.</p>.<p><strong>ಪೋಡಿ ಅರ್ಜಿ ಇತ್ಯರ್ಥ:</strong> ‘ರಾಜ್ಯದ್ಯಂತ ಮೂರು ವರ್ಷಗಳಲ್ಲಿ ಪೋಡಿಗಾಗಿ ಸಲ್ಲಿಸಿದ 6,62,825 ಅರ್ಜಿಗಳಲ್ಲಿ 5,33,545 ಅರ್ಜಿಗಳನ್ನು ವಿಲೇಗೊಳಿಸಲಾಗಿದೆ. ಬಾಕಿ ಇರುವ 1,29,280 ಅರ್ಜಿಗಳನ್ನು ಆರು ತಿಂಗಳಲ್ಲಿ ಇತ್ಯರ್ಥಗೊಳಿಸಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ‘ಸರ್ವೇ ಹಾಗೂ ಕಂದಾಯ ಇಲಾಖೆಗಳಲ್ಲಿನ ಹಳೆ ಭೂ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡಿ ಡಾಟಾಬೇಸ್ನಲ್ಲಿ ಸಂರಕ್ಷಿಸುವ ಉದ್ದೇಶದಿಂದ 31 ತಾಲ್ಲೂಕುಗಳಲ್ಲಿ ಪ್ರಾಯೋಗಿಕ ಜಾರಿಗೊಳಿಸಿದ್ದ ‘ಭೂ ಸುರಕ್ಷೆ’ ಯೋಜನೆಯನ್ನು ಉಳಿದ 210 ತಾಲ್ಲೂಕುಗಳಿಗೂ ವಿಸ್ತರಿಸಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.</p>.<p>ವಿಧಾನ ಪರಿಷತ್ನಲ್ಲಿ ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಮೂಲ ದಾಖಲೆಗಳ ಸ್ಕ್ಯಾನಿಂಗ್ ಪ್ರಕ್ರಿಯೆ 31 ತಾಲ್ಲೂಕುಗಳಲ್ಲಿ ಪೂರ್ಣಗೊಂಡಿದೆ. 2025ರ ಡಿಸೆಂಬರ್ ಒಳಗಾಗಿ ಉಳಿದ ತಾಲೂಕುಗಳಲ್ಲಿನ ದಾಖಲೆಗಳು ಸ್ಕ್ಯಾನಿಂಗ್ ಆಗಲಿವೆ. ಜನರಿಗೆ ಆನ್ಲೈನ್ನಲ್ಲಿಯೂ ಲಭ್ಯವಾಗಿದೆ’ ಎಂದರು.</p>.<p>‘ಅಲ್ಲದೆ, ಪ್ರಮುಖ ದಾಖಲೆಗಳ ಮೂಲಪ್ರತಿಯನ್ನು ತಾಲ್ಲೂಕು ಮಟ್ಟದಲ್ಲಿ ವೈಜ್ಞಾನಿಕವಾಗಿ ಸಂರಕ್ಷಿಸಿಡುವ ದೃಷ್ಟಿಯಿಂದ ತಾಲ್ಲೂಕಿಗೊಂದು ಕಾಂಪ್ಯಾಕ್ಟರ್ ನೀಡಲಾಗುತ್ತಿದೆ’ ಎಂದು ತಿಳಿಸಿದರು.</p>.<p><strong>ಪೋಡಿ ಅರ್ಜಿ ಇತ್ಯರ್ಥ:</strong> ‘ರಾಜ್ಯದ್ಯಂತ ಮೂರು ವರ್ಷಗಳಲ್ಲಿ ಪೋಡಿಗಾಗಿ ಸಲ್ಲಿಸಿದ 6,62,825 ಅರ್ಜಿಗಳಲ್ಲಿ 5,33,545 ಅರ್ಜಿಗಳನ್ನು ವಿಲೇಗೊಳಿಸಲಾಗಿದೆ. ಬಾಕಿ ಇರುವ 1,29,280 ಅರ್ಜಿಗಳನ್ನು ಆರು ತಿಂಗಳಲ್ಲಿ ಇತ್ಯರ್ಥಗೊಳಿಸಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>