1978 ರಲ್ಲಿ ಎಂಬಿಬಿಎಸ್ ಮಾಡಿದ ಅವರು, ಬೆಂಗಳೂರು ವೈದ್ಯಕೀಯ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದಾರೆ. 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದ ರೆಸಿಡೆನ್ಸಿ ಮಾಡಿದರು. ಬಳಿಕ ಸಣ್ಣ ಕ್ಲಿನಿಕ್ನಲ್ಲಿ ನೇತ್ರ ಚಿಕಿತ್ಸೆ ಪ್ರಾರಂಭಿಸಿದರು. ಅದು ಬಹು ವಿಶೇಷ ಕಣ್ಣಿನ ಆಸ್ಪತ್ರೆಯಾಗಿ ಮಾರ್ಪಟ್ಟಿತು. ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಲು ಅವರು ಕಾರಣರಾಗಿದ್ದಾರೆ. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಅವರು ನಿಪುಣರಾಗಿದ್ದರು.
ರಾಜಾಜಿನಗರದ ನಾರಾಯಣ ನೇತ್ರಾಲಯದಲ್ಲಿ ಶನಿವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 2 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರಲಿದೆ. ಅವರು ತಮ್ಮ ನೇತ್ರಗಳನ್ನು ದಾನ ಮಾಡಿದ್ದಾರೆ.