ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ಸಿಬ್ಬಂದಿ ಕಣ್ಣಿನ ಆರೈಕೆಗೆ ‘ಆಶಾಕಿರಣ’: ದಿನೇಶ್ ಗುಂಡೂರಾವ್

Published 13 ಮಾರ್ಚ್ 2024, 15:39 IST
Last Updated 13 ಮಾರ್ಚ್ 2024, 15:39 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕ ಸಾರಿಗೆ ಸಿಬ್ಬಂದಿಯ ಕಣ್ಣಿನ ಹಾರೈಕೆಗಾಗಿ ‘ಸಾರಿಗೆ ಆಶಾಕಿರಣ’ ಯೋಜನೆ ಜಾರಿಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ವಿಧಾನಸೌಧದಲ್ಲಿ ಬುಧವಾರ ರಾಜ್ಯ ಸರ್ಕಾರದ ಸಮಗ್ರ ನೇತ್ರ ಆರೈಕೆ–ಆಶಾಕಿರಣ ಯೋಜನೆ ಬಲಿಷ್ಠಗೊಳಿಸಲು ‘ಸಿ–ಕ್ಯಾಂಪ್‌’ ಹಾಗೂ ‘ಆ್ಯಕ್ಟ್‌ ಫಾರ್‌ ಹೆಲ್ತ್‌’ ಸಂಸ್ಥೆಯ ಜತೆ ಒಪ್ಪಂದ ಮಾಡಿಕೊಂಡ ನಂತರ ಅವರು ಮಾತನಾಡಿದರು.

ಸಿಬ್ಬಂದಿಯ ಕಣ್ಣಿನ ಆರೋಗ್ಯದ ಮೇಲೆ ನಿಗಾ ಇಡಲಾಗುತ್ತದೆ. ನಿರಂತರ ತಪಾಸಣೆಗಳ ಮೂಲಕ ಕಣ್ಣಿನ ಸಮಸ್ಯೆ ಪತ್ತೆ ಹಚ್ಚಲಾಗುತ್ತದೆ. ಬಸ್‌ ಡಿಪೊಗಳಿಗೆ ತೆರಳಿ ತಪಾಸಣೆ ನಡೆಸಿ, ಅಗತ್ಯವಿದ್ದವರಿಗೆ ಶಸ್ತ್ರಚಿಕಿತ್ಸೆ, ಉಚಿತ ಕನ್ನಡ ನೀಡಲಾಗುತ್ತದೆ. ಸಾರಿಗೆ ಸಿಬ್ಬಂದಿಯ ಕಣ್ಣಿನ ಆರೋಗ್ಯ ಉತ್ತಮವಾಗಿದ್ದರೆ ಬಸ್‌ಗಳಲ್ಲಿ ನಿತ್ಯ ಪ್ರಯಾಣಿಸುವ 1.10 ಕೋಟಿ ಪ್ರಯಾಣಿಕರ ಸುರಕ್ಷತೆಯನ್ನೂ ಖಾತ್ರಿಗೊಳಿಸಬಹುದು ಎಂದರು.

ರಾಜ್ಯದಲ್ಲಿ ಅಂಧತ್ವ ಸಂಪೂರ್ಣ ನಿವಾರಣೆಗೆ ಸರ್ಕಾರ ಶ್ರಮಿಸುತ್ತಿದೆ. ಜನರ ಮನೆ ಬಾಗಿಲಿಗೇ ತೆರಳಿ ಸೇವೆ ಒದಗಿಸಲಾಗುತ್ತಿದೆ. ಈಗಾಗಲೇ ಒಂದು ಕೋಟಿಗೂ ಹೆಚ್ಚಿನ ವ್ಯಕ್ತಿಗಳ ತಪಾಸಣೆ ಮಾಡಲಾಗಿದೆ. 39 ಸಾವಿರ ಮಂದಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. 2.45 ಲಕ್ಷ ಜನರು ಉಚಿತ ಕನ್ನಡ ಪಡೆದಿದ್ದಾರೆ ಎಂದು ವಿವರ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT