<p><strong>ಬೆಂಗಳೂರು:</strong> ‘ಅಂಧರು ಮತ್ತು ಅಂಗವಿಕಲರಿಗೆ ನೆರವಾಗುವ ನಿಟ್ಟಿನಲ್ಲಿ ಬಸ್ಗಳಲ್ಲಿ ಆಡಿಯೊ ರೂಪದಲ್ಲಿನ ಪ್ರಕಟಣಾ ವ್ಯವಸ್ಥೆ ಅಳವಡಿಸುವಂತೆ ಖಾಸಗಿ ಬಸ್ ಆಪರೇಟರ್ಗಳಿಗೆ ನಿರ್ದೇಶನ ನೀಡಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.</p>.<p>ಈ ಸಂಬಂಧ ನಗರದ ಎನ್. ಶ್ರೇಯಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.</p>.<p>‘ಅರ್ಜಿದಾರರು ಬಿಎಂಟಿಸಿ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಆಡಿಯೊ ವ್ಯವಸ್ಥೆ ಅಳವಡಿಸಲು ನಿರ್ದೇಶನ ನೀಡುವಂತೆ ಕೋರಿದ್ದಾರೆ. ಆದರೆ, ಕೆಲವು ಮಾರ್ಗಗಳಲ್ಲಿ ಖಾಸಗಿ ಬಸ್ಗಳೂ ಸಂಚರಿಸುತ್ತಿವೆ. ಈ ಬಸ್ಗಳಲ್ಲಿ ಅಂಗವಿಕಲರ ಪ್ರಯಾಣಕ್ಕೆ ಅಗತ್ಯ ನೆರವು ಕಲ್ಪಿಸಿ ಕೊಡಬೇಕು’ ಎಂದು ನ್ಯಾಯಪೀಠ ಆದೇಶಿಸಿದೆ.</p>.<p>‘ಈ ವಿಷಯದಲ್ಲಿ ಸರ್ಕಾರ ಖಾಸಗಿ ಬಸ್ ಆಪರೇಟರ್ಗಳಿಗೆ ಅಗತ್ಯ ನಿರ್ದೇಶನ ನೀಡಿ ಸುತ್ತೋಲೆ ಹೊರಡಿಸಬೇಕು. ಈ ನಿರ್ದೇಶನ ಈಗಾಗಲೇ ಕೆಲವು ಮಾರ್ಗಗಳಲ್ಲಿ ಸಂಚರಿಸುತ್ತಿರುವ ಬಸ್ಗಳಿಗೆ ಮಾತ್ರವಲ್ಲದೆ, ಹೊಸದಾಗಿ ಪರವಾನಗಿ ನೀಡುವ ಬಸ್ ಗಳಿಗೂ ಅನ್ವಯವಾಗುವಂತೆ ಇರಬೇಕು’ ಎಂದು ತಾಕೀತು ಮಾಡಿದೆ.</p>.<p>ಬಿಎಂಟಿಸಿ ಮತ್ತು ರಾಜ್ಯ ಸರ್ಕಾರ ಈ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸುವಂತೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅಂಧರು ಮತ್ತು ಅಂಗವಿಕಲರಿಗೆ ನೆರವಾಗುವ ನಿಟ್ಟಿನಲ್ಲಿ ಬಸ್ಗಳಲ್ಲಿ ಆಡಿಯೊ ರೂಪದಲ್ಲಿನ ಪ್ರಕಟಣಾ ವ್ಯವಸ್ಥೆ ಅಳವಡಿಸುವಂತೆ ಖಾಸಗಿ ಬಸ್ ಆಪರೇಟರ್ಗಳಿಗೆ ನಿರ್ದೇಶನ ನೀಡಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.</p>.<p>ಈ ಸಂಬಂಧ ನಗರದ ಎನ್. ಶ್ರೇಯಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.</p>.<p>‘ಅರ್ಜಿದಾರರು ಬಿಎಂಟಿಸಿ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಆಡಿಯೊ ವ್ಯವಸ್ಥೆ ಅಳವಡಿಸಲು ನಿರ್ದೇಶನ ನೀಡುವಂತೆ ಕೋರಿದ್ದಾರೆ. ಆದರೆ, ಕೆಲವು ಮಾರ್ಗಗಳಲ್ಲಿ ಖಾಸಗಿ ಬಸ್ಗಳೂ ಸಂಚರಿಸುತ್ತಿವೆ. ಈ ಬಸ್ಗಳಲ್ಲಿ ಅಂಗವಿಕಲರ ಪ್ರಯಾಣಕ್ಕೆ ಅಗತ್ಯ ನೆರವು ಕಲ್ಪಿಸಿ ಕೊಡಬೇಕು’ ಎಂದು ನ್ಯಾಯಪೀಠ ಆದೇಶಿಸಿದೆ.</p>.<p>‘ಈ ವಿಷಯದಲ್ಲಿ ಸರ್ಕಾರ ಖಾಸಗಿ ಬಸ್ ಆಪರೇಟರ್ಗಳಿಗೆ ಅಗತ್ಯ ನಿರ್ದೇಶನ ನೀಡಿ ಸುತ್ತೋಲೆ ಹೊರಡಿಸಬೇಕು. ಈ ನಿರ್ದೇಶನ ಈಗಾಗಲೇ ಕೆಲವು ಮಾರ್ಗಗಳಲ್ಲಿ ಸಂಚರಿಸುತ್ತಿರುವ ಬಸ್ಗಳಿಗೆ ಮಾತ್ರವಲ್ಲದೆ, ಹೊಸದಾಗಿ ಪರವಾನಗಿ ನೀಡುವ ಬಸ್ ಗಳಿಗೂ ಅನ್ವಯವಾಗುವಂತೆ ಇರಬೇಕು’ ಎಂದು ತಾಕೀತು ಮಾಡಿದೆ.</p>.<p>ಬಿಎಂಟಿಸಿ ಮತ್ತು ರಾಜ್ಯ ಸರ್ಕಾರ ಈ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸುವಂತೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>