‘ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ವಡ್ಡಹಳ್ಳಿಯ ಭಾಸ್ಕರ್, ಬಿ.ಕಾಂ ಪದವೀಧರ. ವ್ಯವಸಾಯ ಮಾಡುತ್ತಿದ್ದ. ಇತ್ತೀಚೆಗೆ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಇ–ಮೇಲ್ ಬಂದಿದ್ದ ಮಾಹಿತಿ ತಿಳಿದುಕೊಂಡಿದ್ದ. ಪೊಲೀಸರು ತನಿಖೆ ನಡೆಸುತ್ತಿರುವ ಮಾಹಿತಿ ಪಡೆದುಕೊಂಡಿದ್ದ ಆರೋಪಿ, ಎರಡು ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದ. ಈ ವೇಳೆ ರಾಜಭವನದ ಸುತ್ತಮುತ್ತ ಓಡಾಟ ನಡೆಸಿದ್ದ. ಪೊಲೀಸರನ್ನು ಕಾರ್ಯ ವೈಖರಿ ಪರಿಶೀಲಿಸಲು ರಾಷ್ಟ್ರೀಯ ತನಿಖಾ ದಳ(ಎನ್ಐಎ) ಸಹಾಯವಾಣಿಗೆ ಕರೆ ಮಾಡಿ ಹುಸಿ ಬಾಂಬ್ ಬೆದರಿಕೆ ಹಾಕಿದ್ದ’ ಎಂದು ಮೂಲಗಳು ಹೇಳಿವೆ.