<p><strong>ಬೆಂಗಳೂರು:</strong> ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನಲ್ಲಿ (ಡಿಸಿಸಿ) ನಕಲಿ ಚಿನ್ನಾಭರಣ ಅಡವಿಟ್ಟು ₹62.77 ಕೋಟಿ ಸಾಲ ಪಡೆದಿದ್ದ ಪ್ರಕರಣದಲ್ಲಿ, ಬ್ಯಾಂಕ್ನ ಹಾಲಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಬಂಧಿಸಿದೆ. ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಅವರನ್ನು 14 ದಿನಗಳವೆಗೆ ಇ.ಡಿ. ಬಂಧನಕ್ಕೆ ಒಪ್ಪಿಸಿದೆ.</p><p>2014ರಲ್ಲಿ ಮಂಜುನಾಥಗೌಡ ಅವರು ಬ್ಯಾಂಕ್ನ ಅಧ್ಯಕ್ಷರಾಗಿದ್ದಾಗ ಈ ಅಕ್ರಮ ನಡೆದಿತ್ತು. ಆಗ ತನಿಖೆ ನಡೆಸಿದ್ದ ಸಿಐಡಿ, ಮಂಜುನಾಥಗೌಡ ಅವರನ್ನು ಬಂಧಿಸಿತ್ತು. ಅವರು ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಬ್ಯಾಂಕ್ನಲ್ಲಿ ನಡೆದ ಬಹುಕೋಟಿ ಪ್ರಕರಣವಾದ ಕಾರಣಕ್ಕೆ ಇ.ಡಿ ತನಿಖೆ ಆರಂಭಿಸಿತ್ತು. ಇ.ಡಿ ತನಿಖೆಗೆ ಮಂಜುನಾಥಗೌಡ ಹೈಕೋರ್ಟ್ನಿಂದ ತಂದಿದ್ದ ತಡೆ ಈಚೆಗಷ್ಟೇ ತೆರವಾಗಿತ್ತು.</p>.ಶಿವಮೊಗ್ಗ ಡಿಸಿಸಿ ಬ್ಯಾಂಕ್ | ನಕಲಿ ಚಿನ್ನ ಅಡವಿಟ್ಟ ಪ್ರಕರಣ: ಮುಂದುವರೆದ ED ದಾಳಿ.ನಕಲಿ ಚಿನ್ನಾಭರಣ ಅಡವಿಟ್ಟ ಪ್ರಕರಣ: ಶಿವಮೊಗ್ಗದ ವಿವಿಧೆಡೆ ಇ.ಡಿ ದಾಳಿ, ಪರಿಶೀಲನೆ.<p>ಬೆಂಗಳೂರಿನ ಚಾಮರಾಜನಗರದಲ್ಲಿರುವ ಅಪೆಕ್ಸ್ ಬ್ಯಾಂಕ್ ಅತಿಥಿಗೃಹಕ್ಕೆ ಸೋಮವಾರ ರಾತ್ರಿ ಬಂದಿದ್ದ ಮಂಜುನಾಥಗೌಡ ಅವರನ್ನು ಇ.ಡಿ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ವಶಕ್ಕೆ ಪಡೆದಿದ್ದರು. ಸತತ 11 ತಾಸು ವಿಚಾರಣೆ ಬಳಿಕ ಸಂಜೆ 7ರ ವೇಳೆಗೆ ಇ.ಡಿ ಕಚೇರಿಗೆ ಅವರನ್ನು ಕರೆದೊಯ್ಯಲಾಗಿತ್ತು.</p><p>ಅಲ್ಲಿ ಮತ್ತೆ ವಿಚಾರಣೆ ನಡೆಸಿ, ತಡರಾತ್ರಿ ಬಂಧಿಸಲಾಗಿತ್ತು. ಬುಧವಾರ ಆರ್ಥಿಕ ಅಪರಾಧಗಳ ನ್ಯಾಯಾಲಯದ ನ್ಯಾಯಾಧೀಶರ ಎದುರು ಮಂಜುನಾಥಗೌಡ ಅವರನ್ನು ಹಾಜರುಪಡಿಸಲಾಗಿತ್ತು.</p>.ಶಿವಮೊಗ್ಗ DCC ಬ್ಯಾಂಕ್ನಲ್ಲಿ ಅವ್ಯವಹಾರ ಪ್ರಕರಣ: ಮಂಜುನಾಥ ಗೌಡ ಮೇಲ್ಮನವಿ ವಜಾ.ಮಂಜುನಾಥ ಗೌಡ ನಿವಾಸದ ಮೇಲೆ ಲೋಕಾಯುಕ್ತ ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನಲ್ಲಿ (ಡಿಸಿಸಿ) ನಕಲಿ ಚಿನ್ನಾಭರಣ ಅಡವಿಟ್ಟು ₹62.77 ಕೋಟಿ ಸಾಲ ಪಡೆದಿದ್ದ ಪ್ರಕರಣದಲ್ಲಿ, ಬ್ಯಾಂಕ್ನ ಹಾಲಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಬಂಧಿಸಿದೆ. ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಅವರನ್ನು 14 ದಿನಗಳವೆಗೆ ಇ.ಡಿ. ಬಂಧನಕ್ಕೆ ಒಪ್ಪಿಸಿದೆ.</p><p>2014ರಲ್ಲಿ ಮಂಜುನಾಥಗೌಡ ಅವರು ಬ್ಯಾಂಕ್ನ ಅಧ್ಯಕ್ಷರಾಗಿದ್ದಾಗ ಈ ಅಕ್ರಮ ನಡೆದಿತ್ತು. ಆಗ ತನಿಖೆ ನಡೆಸಿದ್ದ ಸಿಐಡಿ, ಮಂಜುನಾಥಗೌಡ ಅವರನ್ನು ಬಂಧಿಸಿತ್ತು. ಅವರು ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಬ್ಯಾಂಕ್ನಲ್ಲಿ ನಡೆದ ಬಹುಕೋಟಿ ಪ್ರಕರಣವಾದ ಕಾರಣಕ್ಕೆ ಇ.ಡಿ ತನಿಖೆ ಆರಂಭಿಸಿತ್ತು. ಇ.ಡಿ ತನಿಖೆಗೆ ಮಂಜುನಾಥಗೌಡ ಹೈಕೋರ್ಟ್ನಿಂದ ತಂದಿದ್ದ ತಡೆ ಈಚೆಗಷ್ಟೇ ತೆರವಾಗಿತ್ತು.</p>.ಶಿವಮೊಗ್ಗ ಡಿಸಿಸಿ ಬ್ಯಾಂಕ್ | ನಕಲಿ ಚಿನ್ನ ಅಡವಿಟ್ಟ ಪ್ರಕರಣ: ಮುಂದುವರೆದ ED ದಾಳಿ.ನಕಲಿ ಚಿನ್ನಾಭರಣ ಅಡವಿಟ್ಟ ಪ್ರಕರಣ: ಶಿವಮೊಗ್ಗದ ವಿವಿಧೆಡೆ ಇ.ಡಿ ದಾಳಿ, ಪರಿಶೀಲನೆ.<p>ಬೆಂಗಳೂರಿನ ಚಾಮರಾಜನಗರದಲ್ಲಿರುವ ಅಪೆಕ್ಸ್ ಬ್ಯಾಂಕ್ ಅತಿಥಿಗೃಹಕ್ಕೆ ಸೋಮವಾರ ರಾತ್ರಿ ಬಂದಿದ್ದ ಮಂಜುನಾಥಗೌಡ ಅವರನ್ನು ಇ.ಡಿ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ವಶಕ್ಕೆ ಪಡೆದಿದ್ದರು. ಸತತ 11 ತಾಸು ವಿಚಾರಣೆ ಬಳಿಕ ಸಂಜೆ 7ರ ವೇಳೆಗೆ ಇ.ಡಿ ಕಚೇರಿಗೆ ಅವರನ್ನು ಕರೆದೊಯ್ಯಲಾಗಿತ್ತು.</p><p>ಅಲ್ಲಿ ಮತ್ತೆ ವಿಚಾರಣೆ ನಡೆಸಿ, ತಡರಾತ್ರಿ ಬಂಧಿಸಲಾಗಿತ್ತು. ಬುಧವಾರ ಆರ್ಥಿಕ ಅಪರಾಧಗಳ ನ್ಯಾಯಾಲಯದ ನ್ಯಾಯಾಧೀಶರ ಎದುರು ಮಂಜುನಾಥಗೌಡ ಅವರನ್ನು ಹಾಜರುಪಡಿಸಲಾಗಿತ್ತು.</p>.ಶಿವಮೊಗ್ಗ DCC ಬ್ಯಾಂಕ್ನಲ್ಲಿ ಅವ್ಯವಹಾರ ಪ್ರಕರಣ: ಮಂಜುನಾಥ ಗೌಡ ಮೇಲ್ಮನವಿ ವಜಾ.ಮಂಜುನಾಥ ಗೌಡ ನಿವಾಸದ ಮೇಲೆ ಲೋಕಾಯುಕ್ತ ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>